Home / ಲೇಖನ / ವಿಜ್ಞಾನ / ಮಾಲಿನ್ಯ ರಹಿತ ಪ್ಲಾಸ್ಟಿಕ್

ಮಾಲಿನ್ಯ ರಹಿತ ಪ್ಲಾಸ್ಟಿಕ್

ಈಗಿರುವ ಪ್ಲಾಸ್ಟಿಕ್ ವಾಯುಮಾಲಿನ್ಯ, ಜಲಮಾಲಿನ್ಯ, ಮಾಡುತ್ತ ಮನುಕುಲಕ್ಕೆ ಮಾರಕವಾಗಬಲ್ಲದೆಂದು ಎಲ್ಲರಿಗೂ ಗೊತ್ತಿರುವ ವಿಷಯ. ಎಷ್ಟು ವರ್ಷಗಳಾದರೂ ಮಣ್ಣಿನಲ್ಲಿ ಕರಗದ ಈ ಪ್ಲಾಸ್ಟಿಕ್ ಅಸಂಖ್ಯಾತ ಮೂಕ ಪ್ರಾಣಿಗಳ ಬಲಿ ತೆಗೆದುಕೊಂಡಿದ್ದರೆ, ಭೂಮಿಯನ್ನು ಶುಷ್ಕಗೊಳಿಸುವಲ್ಲಿ ಅತಂಕಗೊಳಿಸಿ ಸಸ್ಯಗಳ ಬೆಳವಣಿಗೆ- ಯಾದಂತೆ ಮಾಡುತ್ತಿರುವುದೊಂದು ದುರಂತ. ಈ ಕಾರಣವಾಗಿ ಪರಿಸರಕ್ಕೆ ಮಾರಕವಾಗದೇ ಇರುವ ಮತ್ತು ಈಗಿನ ಪ್ಲಾಸ್ಟಿಕ್‌ನಂತೆ ಪಾರದರ್ಶಕವಾಗಿರುವ ಹೊಸ ಆವಿಷ್ಕಾರದ ಶೋಧನೆಯನ್ನು ವಿಜ್ಞಾನಿಗಳು ಮಾಡುತ್ತಲೇ
ಬರುತ್ತಿದ್ದಾರೆ.

ಕ್ರಿ.ಶ. 1879ರಲ್ಲಿಯೇ ಮಣ್ಣಿನಲ್ಲಿ ಕರಗಿ ಹೋಗುವ ಸಕ್ಕರೆಯ ಕಣಗಳಿಂದ ತಯಾರಿಸಿದ ಪ್ಲಾಸ್ಟಿಕ್ ಅನ್ನು ಅಮೇರಿಕದ ಮುದ್ರಕರೊಬ್ಬರು ಮೊಟ್ಟ ಮೊದಲ ಬಾರಿಗೆ ತಯಾರಿಸಿದ್ದರು. ಇದು ಬೆಳವಣಿಗೆ ಹೊಂದುವುದರಲ್ಲಿಯೇ 1909ರಲ್ಲಿ ಪೆಟ್ರೋಲಿಯಂ ಆಧಾರಿತ ಕೃತಕ ಪ್ಲಾಸ್ಟಿಕ್ ಬಂದ ನಂತರ ಮೊದಲಿನ ಪ್ಲಾಸ್ಟಿಕ್ ಮೂಲೆ ಗುಂಪಾಗಿ ಹೋಯಿತು.
ನಂತರ ಇದೇ ಒಂದು ಪರಿಸರಕ್ಕೆ ಮಾರಕವಾಗಿ ಕಾಡತೊಡಗಿತು.

ಸರಳವಾದ ಕ್ರಾಂತಿಕಾರಿ ತಂತ್ರ ಬಳಸಿ ಪ್ಲಾಸ್ಟಿಕ್ ತಯಾರಿಸಿದಲ್ಲಿ ಈ ಭೂಖಂಡ ಬಚಾವಾಗುವುದೆಂದು ಅರಿತ ವಿಜ್ಞಾನಿಗಳು “ಅಲ್ಕಾನಿಗೇನಿಸ್” ಒಂದು ಜಾತಿಯ ಬ್ಯಾಕ್ಟೀರಿಯಾದ ದೇಹದಲ್ಲಿ ಪ್ಲಾಸ್ಟಿಕ್‌ನಂತಹ ವಸ್ತುಸಂಗ್ರಹ- ವಾಗುತ್ತದೆಂದು ತಿಳಿಯಿತು. ಈ ಏಕಕೋಶ ಜೀವಿಗಳಲ್ಲಿ ತಮ್ಮ ತೂಕದ ಶೇಕಡ 99 ಭಾಗ ಪ್ಲಾಸ್ಟಿಕ್ ಜಿಗುಟು ದ್ರವ ಇದೆ ಎಂದು ವರ್ಜಿನಿಯಾದ ವಿಜ್ಞಾನಿಗಳು ಕಂಡುಹಿಡಿದರು. ಈ ಬ್ಯಾಕ್ಟೀರಿಯಾಗಳ ವಂಶವಾಹಿನಿಯನ್ನು ಅಭಿವೃದ್ಧಿ ಪಡಿಸಿ ಅಗತ್ಯವಿರುವಷ್ಟು ಪ್ಲಾಸ್ಟಿಕ್ ತಯಾರಿಸಬಹುದು. ಈ ತಂತ್ರವನ್ನು ಅಮೇರಿಕಾದಂತಹ ದೇಶವು ಹಿಂದುಳಿದ ರಾಷ್ಟ್ರಗಳಿಗ ಬಿಟ್ಟು ತೊಡದೇ ತಮ್ಮ ಹಳೆ ತಂತ್ರಜ್ಞಾನವನ್ನೇ ಸಾಗುಹಾಕುತ್ತದಾದ್ದರಿಂದ ಈಗಿನ ಪ್ಲಾಸ್ಟಿಕ್ ಸುಗ್ಗಿ ಹೆಚ್ಚಿ ಪರಿಸರ ನಾಶವಾಗುತ್ತಿರುವುದು. ಮುಂದೊಂದು ದಿನ ಈ ಹೊಸ ಫಲಶೃತಿಯನ್ನು ಅನುಭವಿಸುವ
ಕಾಲವೂ ಬರಬಹುದು.

ಇನ್ನೊಂದು ಸಂತೋಷದ ಸುದ್ದಿ ಎಂದರೆ ಜೋಳದ ತೆನೆಯಿಂದ ಹಾಗೂ ಕಾಳುಗಳಿಂದ ಮಣ್ಣಿನಲ್ಲಿ ಒಂದಾಗುವ ಪ್ಲಾಸ್ಟಿಕ್ ಅನ್ನು ತಯಾರಿಸಿಬುದೆಂದು ಇನ್ನೊಂದೆಡೆ ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಅಮೇರಿಕಾದ ರಾಷ್ಟ್ರೀಯ ಪ್ರಯೋಗ ಶಾಲೆಯಲ್ಲಿ ಅಲೂಗಡ್ಡೆ ಸಿಪ್ಪೆಯಿಂದ ಪ್ಲಾಸ್ಟಿಕ್‌ನ್ನು ಈಗಾಗಲೇ ತಯಾರಿಸುತ್ತಿದ್ಧಾರೆ. ಉತ್ತರ ಭೂಭಾಗದಲ್ಲಿ ವಾಸಿಸುವ ಜನರು ರಾಶಿ ರಾಶಿ ಆಲೂಗಡ್ಡೆಯನ್ನು ತಿನ್ನುತ್ತಾರೆ ಮತ್ತು ಬಹುತೇಕ ಕಡೆ ಆಲೂಗಡ್ಡೆ- ಯನ್ನು ಯತೇಚ್ಚವಾಗಿ ಬೆಳೆಯಲಾಗುತ್ತದೆ. ಈ ಸಿಪ್ಪೆಯನ್ನೆಲ್ಲ ಪ್ಲಾಸ್ಟಿಕ್ ತಯಾರಿಸಲು ಬಳಸಿದರೆ ಇಂದಿನ ಪರಿಸರ
ಮಾಲಿನ್ಯದ ಸಮಸ್ಯೆಗ ಉತ್ತರ ಸಿಗಬಹುದು. ಇದು ಜೈವಿಕ ಪ್ಲಾಸ್ಟಿಕ್ ತಯಾರಿಸುವ ತಂತ್ರವಾಗಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...