Home / ಲೇಖನ / ವಿಜ್ಞಾನ / ಮಾಲಿನ್ಯ ರಹಿತ ಪ್ಲಾಸ್ಟಿಕ್

ಮಾಲಿನ್ಯ ರಹಿತ ಪ್ಲಾಸ್ಟಿಕ್

ಈಗಿರುವ ಪ್ಲಾಸ್ಟಿಕ್ ವಾಯುಮಾಲಿನ್ಯ, ಜಲಮಾಲಿನ್ಯ, ಮಾಡುತ್ತ ಮನುಕುಲಕ್ಕೆ ಮಾರಕವಾಗಬಲ್ಲದೆಂದು ಎಲ್ಲರಿಗೂ ಗೊತ್ತಿರುವ ವಿಷಯ. ಎಷ್ಟು ವರ್ಷಗಳಾದರೂ ಮಣ್ಣಿನಲ್ಲಿ ಕರಗದ ಈ ಪ್ಲಾಸ್ಟಿಕ್ ಅಸಂಖ್ಯಾತ ಮೂಕ ಪ್ರಾಣಿಗಳ ಬಲಿ ತೆಗೆದುಕೊಂಡಿದ್ದರೆ, ಭೂಮಿಯನ್ನು ಶುಷ್ಕಗೊಳಿಸುವಲ್ಲಿ ಅತಂಕಗೊಳಿಸಿ ಸಸ್ಯಗಳ ಬೆಳವಣಿಗೆ- ಯಾದಂತೆ ಮಾಡುತ್ತಿರುವುದೊಂದು ದುರಂತ. ಈ ಕಾರಣವಾಗಿ ಪರಿಸರಕ್ಕೆ ಮಾರಕವಾಗದೇ ಇರುವ ಮತ್ತು ಈಗಿನ ಪ್ಲಾಸ್ಟಿಕ್‌ನಂತೆ ಪಾರದರ್ಶಕವಾಗಿರುವ ಹೊಸ ಆವಿಷ್ಕಾರದ ಶೋಧನೆಯನ್ನು ವಿಜ್ಞಾನಿಗಳು ಮಾಡುತ್ತಲೇ
ಬರುತ್ತಿದ್ದಾರೆ.

ಕ್ರಿ.ಶ. 1879ರಲ್ಲಿಯೇ ಮಣ್ಣಿನಲ್ಲಿ ಕರಗಿ ಹೋಗುವ ಸಕ್ಕರೆಯ ಕಣಗಳಿಂದ ತಯಾರಿಸಿದ ಪ್ಲಾಸ್ಟಿಕ್ ಅನ್ನು ಅಮೇರಿಕದ ಮುದ್ರಕರೊಬ್ಬರು ಮೊಟ್ಟ ಮೊದಲ ಬಾರಿಗೆ ತಯಾರಿಸಿದ್ದರು. ಇದು ಬೆಳವಣಿಗೆ ಹೊಂದುವುದರಲ್ಲಿಯೇ 1909ರಲ್ಲಿ ಪೆಟ್ರೋಲಿಯಂ ಆಧಾರಿತ ಕೃತಕ ಪ್ಲಾಸ್ಟಿಕ್ ಬಂದ ನಂತರ ಮೊದಲಿನ ಪ್ಲಾಸ್ಟಿಕ್ ಮೂಲೆ ಗುಂಪಾಗಿ ಹೋಯಿತು.
ನಂತರ ಇದೇ ಒಂದು ಪರಿಸರಕ್ಕೆ ಮಾರಕವಾಗಿ ಕಾಡತೊಡಗಿತು.

ಸರಳವಾದ ಕ್ರಾಂತಿಕಾರಿ ತಂತ್ರ ಬಳಸಿ ಪ್ಲಾಸ್ಟಿಕ್ ತಯಾರಿಸಿದಲ್ಲಿ ಈ ಭೂಖಂಡ ಬಚಾವಾಗುವುದೆಂದು ಅರಿತ ವಿಜ್ಞಾನಿಗಳು “ಅಲ್ಕಾನಿಗೇನಿಸ್” ಒಂದು ಜಾತಿಯ ಬ್ಯಾಕ್ಟೀರಿಯಾದ ದೇಹದಲ್ಲಿ ಪ್ಲಾಸ್ಟಿಕ್‌ನಂತಹ ವಸ್ತುಸಂಗ್ರಹ- ವಾಗುತ್ತದೆಂದು ತಿಳಿಯಿತು. ಈ ಏಕಕೋಶ ಜೀವಿಗಳಲ್ಲಿ ತಮ್ಮ ತೂಕದ ಶೇಕಡ 99 ಭಾಗ ಪ್ಲಾಸ್ಟಿಕ್ ಜಿಗುಟು ದ್ರವ ಇದೆ ಎಂದು ವರ್ಜಿನಿಯಾದ ವಿಜ್ಞಾನಿಗಳು ಕಂಡುಹಿಡಿದರು. ಈ ಬ್ಯಾಕ್ಟೀರಿಯಾಗಳ ವಂಶವಾಹಿನಿಯನ್ನು ಅಭಿವೃದ್ಧಿ ಪಡಿಸಿ ಅಗತ್ಯವಿರುವಷ್ಟು ಪ್ಲಾಸ್ಟಿಕ್ ತಯಾರಿಸಬಹುದು. ಈ ತಂತ್ರವನ್ನು ಅಮೇರಿಕಾದಂತಹ ದೇಶವು ಹಿಂದುಳಿದ ರಾಷ್ಟ್ರಗಳಿಗ ಬಿಟ್ಟು ತೊಡದೇ ತಮ್ಮ ಹಳೆ ತಂತ್ರಜ್ಞಾನವನ್ನೇ ಸಾಗುಹಾಕುತ್ತದಾದ್ದರಿಂದ ಈಗಿನ ಪ್ಲಾಸ್ಟಿಕ್ ಸುಗ್ಗಿ ಹೆಚ್ಚಿ ಪರಿಸರ ನಾಶವಾಗುತ್ತಿರುವುದು. ಮುಂದೊಂದು ದಿನ ಈ ಹೊಸ ಫಲಶೃತಿಯನ್ನು ಅನುಭವಿಸುವ
ಕಾಲವೂ ಬರಬಹುದು.

ಇನ್ನೊಂದು ಸಂತೋಷದ ಸುದ್ದಿ ಎಂದರೆ ಜೋಳದ ತೆನೆಯಿಂದ ಹಾಗೂ ಕಾಳುಗಳಿಂದ ಮಣ್ಣಿನಲ್ಲಿ ಒಂದಾಗುವ ಪ್ಲಾಸ್ಟಿಕ್ ಅನ್ನು ತಯಾರಿಸಿಬುದೆಂದು ಇನ್ನೊಂದೆಡೆ ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಅಮೇರಿಕಾದ ರಾಷ್ಟ್ರೀಯ ಪ್ರಯೋಗ ಶಾಲೆಯಲ್ಲಿ ಅಲೂಗಡ್ಡೆ ಸಿಪ್ಪೆಯಿಂದ ಪ್ಲಾಸ್ಟಿಕ್‌ನ್ನು ಈಗಾಗಲೇ ತಯಾರಿಸುತ್ತಿದ್ಧಾರೆ. ಉತ್ತರ ಭೂಭಾಗದಲ್ಲಿ ವಾಸಿಸುವ ಜನರು ರಾಶಿ ರಾಶಿ ಆಲೂಗಡ್ಡೆಯನ್ನು ತಿನ್ನುತ್ತಾರೆ ಮತ್ತು ಬಹುತೇಕ ಕಡೆ ಆಲೂಗಡ್ಡೆ- ಯನ್ನು ಯತೇಚ್ಚವಾಗಿ ಬೆಳೆಯಲಾಗುತ್ತದೆ. ಈ ಸಿಪ್ಪೆಯನ್ನೆಲ್ಲ ಪ್ಲಾಸ್ಟಿಕ್ ತಯಾರಿಸಲು ಬಳಸಿದರೆ ಇಂದಿನ ಪರಿಸರ
ಮಾಲಿನ್ಯದ ಸಮಸ್ಯೆಗ ಉತ್ತರ ಸಿಗಬಹುದು. ಇದು ಜೈವಿಕ ಪ್ಲಾಸ್ಟಿಕ್ ತಯಾರಿಸುವ ತಂತ್ರವಾಗಿದೆ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...