Home / ಲೇಖನ / ವಿಜ್ಞಾನ / ತೂತು ಬಿದ್ದ ನೀಲಿ ಛತ್ರಿ !!

ತೂತು ಬಿದ್ದ ನೀಲಿ ಛತ್ರಿ !!

ಈ ಜಗತ್ತೆ ಒಂದು ಜೀವಸಂಕುಲದ ಮಹಾನ್ ಜೀವಶಕ್ತಿ ಇದನ್ನೂ ರಕ್ಷಿಸಲೊಂದು ಬೃಹತ್ ಆಕಾರದ ಛತ್ರಿ, ತೂತು ಬಿದ್ದರೆ ಸೂರ್ಯನ ಕಿರಣ ಒಳನುಗ್ಗಿ ನಮ್ಮನ್ನೇ ಬಲಿ ತೆಗೆದುಕೊಳ್ಳಬಹುದು. ಈಗಾಗಲೇ ಹೀಗಾಗಿದೆ. ಹೊಲಿಯಲು ಆಗದ ಈ ಛತ್ರಿಗೆ ನಾವೇ ಕೆಳನಿಂತು ಪರಿಸರವನ್ನು ಕೆಡಿಸಿ ಸ್ಪೋಟಕಗಳಂಥಹ ಅನಿಷ್ಟ ವಾಯುವನ್ನು ತೂರಿ ತೂತು
ಕೊರದದ್ದು ತೂತು ಬಿದ್ದ ಈ ನೀಲಿ ಛತ್ರಿಯ ಕೆಳಗಿನ ಜೀವ ಸಂಕುಲದ ರಕ್ಷಣೆ ಕಷ್ಟ ಸಾಧ್ಯ. ಇದಕ್ಕೆ ಪರಿಹಾರವನ್ನು ನಾವೇ ಕಂಡುಕೊಂಡು ಇನ್ನಷ್ಟು ಛತ್ರಿ ಹರಿಯದಂತೆ ನೋಡಕೊಳ್ಳಬೇಕಿದೆ ಹಾಗಾದರೆ ಈಗಿರುವ ಅಪಾಯದ ಕ್ಷಣಗಳಲ್ಲಿಯೇ ದಿನಗಳನ್ನು ಕಳೆಯಬಹುದು.

ಈ ಮಾತನ್ನು ಹೇಳಿದ್ದು ಭೂವಾತಾವರದಿಂದ 10 ಕಿ.ಮೀಟರ್ ಮೇಲಿನಿಂದ 40 ಕಿ.ಮೀಟರ್ ವರೆಗೆ ಆಕಾಶಕ್ಕೆ ನೀಲಿ ಪರದೆಯಂತೆ ಹಬ್ಬಿಕೊಂಡಿರುವ ಓಜೋನ್, ಪರದೆ ಈ ಪರದೆ ನೈಸರ್ಗಿಕವಾಗಿಯೇ ಮಾನವ ಜಗತ್ತಿಗೆ ಕೊಟ್ಟ ವರ ಓಜೋನ್ (ಆಮ್ಲಜನಕದ ಬಹುದೂಪ) ತೆಳು ನೀಲಿ ಬಣ್ಣದಿಂದ ಕೂಡಿದ್ದು ನಾವು ಆಕಾಶ ನೋಡಿದಾಗ ಅರಿವಾಗುತ್ತದೆ. ಸೂರ್ಯನೊಂದು ಮೆಗಾವಾಟ್ಸ್‌ನಿಂದ ಉರಿಯುತ್ತಿರುವ ಅಗ್ನಿ ಕುಂಡ, ಇದರಿಂದ ಬರುವ
ಕ್ಷ- ಕಿರಣಗಳು (Ultra Violet Rags) ನೇರವಾಗಿ ಭೂಮಿಗೆ ಬಿದ್ದರೆ ಜೀವಕೋಟಿಗೆ ಅತ್ಯಂತ ಅಪಾಯಕಾರಿ ಪರಿಣಾಮ ಉಂವಾಗುತ್ತದೆ. ಈ ಭೀಕರ ಕಿರಣಗಳನ್ನು ಶಾಂತಗೊಳಿಸಿ ಸೂಕ್ಷ್ಮವಾಗಿ ಭೂಮಿಗೆ ಕಳಿಸುತ್ತವಾದ್ದರಿಂದ ಇದಕ್ಕೆ ‘ರಕ್ಷಾಕವಚ’ ವೆಂದೂ ಕರಯಲಾಗುತ್ತದೆ. ಸೂರ್ಯನ ರಶ್ಮಿಯಲ್ಲಿರುವ ಅಲ್ಟ್ರಾವಾಯೋಲೆಟ್, ಕಿರಣಗಳು ಜೀವಿಗೆ ಮಾರಕವಾದ್ದರಿಂದ ಅದನ್ನು ಫಿಲ್ಬರ್ ಮಾಡಿಕಳಿಸುವುದೇ ಈ ಓಜೋನ್.

ಭೂಮಿಯ ಮೇಲಿನ ಪರಿಸರ ಮಾಲಿನ್ಯದ ತೀವ್ರತೆಯಿಂದಾಗಿ ಅಂದರೆ ಕೈಗಾರಿಕೆಗಳ ಹೊಗೆ, ಅಗ್ನಿ ದುರಂತಗಳ ಪರಿಣಾಮ, ರಾಕೇಟ್, ಜೆಟ್, ವಿಮಾನಗಳ ಇಂಧನ ಉರಿಸುವಿಕೆ (ಈ ಇಂಧನವು ಇಂಗಾಲದ ಮಾನಕ್ಸೈಡ್ ಮತ್ತು ಮತ್ತುಇಂಗಾಲದ ಡೈ ಆಕ್ಸೈಡ್ ಅನಿಲಗಳು ಹೊರಚಲ್ಲುತ್ತದೆ.) ಗಳಿಂದಾಗಿ ಈ ಪರದೆ ಅಲ್ಲಲ್ಲಿ ತೂತು ಬಿದ್ದಿದ್ದರಿಂದ ಸೂರ್ಯನಿಂದ ನೇರವಾಗಿ ಅಲ್ಟ್ರಾವಾಯೊಲೆಟ್ ಕಿರಣಗಳು ಭೂಮಿಯೆಡೆಗೆ ಧಾವಿಸಿ ಬರುತ್ತವೆ. ಈ ಕಾರಣವಾಗಿ ಅತ್ಯಂತ ಅಧಿಕ ಉಷ್ಣತೆಯಿಂದ ಅನೇಕ ಅಪಾಯಗಳಾಗುತ್ತಲಿವೆ. ಮನುಷ್ಯರಿಗೆ ಬರುವ ಚರ್ಮದ ಕ್ಯಾನ್ಸರಿನ ಪ್ರಮಾಣವು ಹೆಚ್ಚುತ್ತಿರುವುದಕ್ಕೆ ಈ ಓಜೋನ್‌ ಪದರದ ಕ್ಷೀಸುವಿಕೆಯೇ ಕಾರಣವಾಗಿದೆ. ನಾವು ಬಳಸುತ್ತಿರುವ ರಾಸಾಯನಿಕಗಳು ವಾಹನಗಳಿಂದ ಕೈಗಾರಿಕೆಗಳಿಂದ ಹೊಮ್ಮುವ ಹೊಗೆಯಲ್ಲಿರುವ ಅನಿಲಗಳು ಓಜೋನ್ ಪದರವನ್ನು ತೂತು ಮಾಡುತ್ತದೆ ಎಂದು ಕಂಡು ಹಿಡಿಯಲಾಗಿದೆ. ಈ ಪದರದ ಕ್ಷೀಣಿಸುವಿಕಗೆ ಇತ್ತೀಚಿಗೆ
ಅಧ್ಯಯನವು ನೈಟ್ರಿಕ್ ಆಕ್ಸೈಡ್ ಪ್ರಬಲ ಕಾರಣವೆಂದು ಹೇಳಿದೆ.

ಅಪಾಯಕಾರಿ ರಾಸಾಯನಿಕ ಗೊಬ್ಬರಗಳು : ಈ ನೈಟ್ರಿಕ್ ಆಕ್ಸೈಡ್ ಅನಿಲವು ಜಗತ್ತಿನಾದ್ಯಂತ ಕೃಷಿಕರು ಬಳಸುತ್ತಿರುವ ಅತೀವ ಪ್ರಮಾಣದ ರಾಸಾಯನಿಕ ಗೊಬ್ಬರಗಳಲ್ಲಿ ಅಧಿಕವಾಗಿದೆ ಎಂದು ಕಂಡು ಹಿಡಿಯಲಾಗಿದೆ. ಇದರಿಂದ ಯಾರೂ ಅರಿಯದಷ್ಟು ಪ್ರಮಾಣದಲ್ಲಿ ದುಷ್ಟರಿಣಾಮ ಬೀರಿದೆ. ಓಜೋನ್ ವಲಯವನ್ನು ಕ್ಷೀಣಿಸುವ ಕ್ಲೋರಿನ್ ಹ್ಯಾಲನ್ ಮತ್ತು ಬ್ರೋಮೈಡ್‌ನಂತಹ ವಸ್ತುಗಳನ್ನು ಬಹಿಷ್ಕರಿಸುವ ಮಾತುಗಳು ಕೇಳಿಬರುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಉತ್ಪನ್ನಗೊಳ್ಳಲು ಕೃಷಿಕರು ಬಳಸುತ್ತಿರುವ ರಾಸಾಯನಿಕ ಗೊಬ್ಬರಗಳು ಮುಖ್ಯಕಾರಣವಾಗಿದೆ. ಪ್ರತಿವರ್ಷಕ್ಕಿಂತ ವರ್ಷವೂ ಹೆಚ್ಚಿನ ಪ್ರಮಾಣದಲ್ಲಿ ಈ ಗೊಬ್ಬರಗಳು ಮುಖ್ಯಕಾರಣವಾಗಿವೆ. ಪ್ರತಿವರ್ಷಕ್ಕಿಂತ ವರ್ಷವೂ ಹೆಚ್ಚಿನ ಪ್ರಮಾಣದಲ್ಲಿ ಈ ಗೊಬ್ಬರಗಳು ಭೂಮಿಯನ್ನು ಸೇರುತ್ತವೆ. ಈ ಕಾರಣವಾಗಿ ಓಜೋನ್ ದುರ್ಬಲಗೊಳುತ್ತದೆ.

ಓಜೋನ್‌ ಪರದೆಯು ದುರ್ಬಲಗೊಂಡು ಕ್ಷೀಣಿಸುವುದು ತಡೆಗಟ್ಟಲು ಇಂಥಹ ರಾಸಾಯನಿಕವನ್ನು ಬಳಸದೇ ಇರುವುದು, ಅಗ್ನಿದುರಂತಗಳನ್ನು ತಡೆಯುವುದು ಪರಿಸರವನ್ನು ಮಲಿನಗೊಳಿಸದೇ ಇರುವುದೇ ಆಗಿದೆ. ಈ ನಿಟ್ಟಿನಲ್ಲಿ ಚಿಂತಿಸಲು ವಿಶ್ವದ ಅನೇಕ ವಿಜ್ಞಾನಿಗಳು ಸೇರುತ್ತಿದ್ದಾರೆ. ಅಮೇರಿಕಾದ ವಿಜ್ಞಾನಿಗಳು ಮುಂದುವರೆದು ತೂತುಬಿದ್ದು ಸ್ಥಳವನ್ನು ತೇಪೆ ಹಾಕಲು ಪ್ರಯತ್ನ ಪಟ್ಟರೂ ಫಲಕಾಣಲಾಗಿಲ್ಲ.
************

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...