Home / ಲೇಖನ / ವಿಜ್ಞಾನ / ಭೂಕಂಪನಕ್ಕೆ ಮುನ್ನೆಚ್ಚರಿಕೆ

ಭೂಕಂಪನಕ್ಕೆ ಮುನ್ನೆಚ್ಚರಿಕೆ

‘ಭೂಕಂಪ’ ಬಂದರೆ ಜಗತ್ತಿನ ಜನರು ಭಯಭೀತರಾಗುತ್ತಾರೆ. ಏಕೆಂದರೆ ಸಾವು, ನೋವು, ಆಕ್ರಂದನ, ಆಸ್ತಿ ಪಾಸ್ತಿ ಹಾನಿ, ಹೀಗೆ ಗೋಳಿನ ಕಥೆ ಮುಂದುವರಿಯುತ್ತದೆ. ಭೂಮಿ ನಡುಗಿ ಇತ್ತೀಚೆಗೆ ಗುಜರಾತ ಜನರನ್ನು ತಲ್ಲಣಗೊಳಿಸಿ ಸಾವು ನೋವನ್ನುಂಟು ಮಾಡಿದ ನೆನಪು ಮರೆಯಾಗಿಲ್ಲ ಜಗತ್ತಿನ ಮೂಲೆ ಮೂಲೆಗಳಲ್ಲಿಯೂ ಈ ಭಯಾನಕ ಕಂಪನಗಳು ಆಗಾಗ ಆಗುತ್ತಲೇ ಇರುತ್ತವೆ.

ಇಂಥಹ ಭೀಕರವಾದ ಭೂಕಂಪ ಸಂಭವಿಸಬಹುದೆಂದು ಗೊತ್ತಾದರೆ ಸುರಕ್ಷಿತವಾಗಿರಬಹುದು. ಇದು ಜನಗಳ ಆಂತರ್ಯದ ಧ್ವನಿಯಾಗಿದೆ. ಇದುವರೆಗೂ ನಿಖರವಾಗಿ ಭೂಕಂಪದ ಸುಳಿವನ್ನು ಕೊಟ್ಟಿರುವದಿಲ್ಲ ಅದರೆ ಜಪಾನಿನ ಸಂರೋಧಕರು ಮುನ್ನಚ್ಚರಿಕೆ ಕೊಡಬಹುದೆನ್ನುತ್ತಾರೆ. ಎಚ್ಚರಿಕೆ ನೀಡುವುದು ಶಬ್ದ ಹೊರಹೊಮ್ಮುವ ಮೂಲಕವಲ್ಲ
ನೀಲಿಗೆಂಪು ಬೆಳಕಿನ ಮಿಂಚನ್ನು ಹರಿಸುವ ಮೂಲಕ, ಎಂದು ಹೇಳುತ್ತಾರೆ. ಇದೀಗ ಜಪಾನಿನ ಕೂಬೆಯ ಭೂಕಂಪ ಇದನ್ನು ದೃಢಪಡಿಸಿದೆ. ಕೂಬೆಯ ಭೂಕಂಪದ ಮೊದಲು (ಹತ್ತಾರು ನಿಮಿಷಗಳ ಮೊದಲು) ನೀಲಿ ಮತ್ತು ಕೆಂಪು ಬೆಳಕು ಕಾಣಿಸಿಕೊಂಡಿತೆಂದು ಜನರ ವರದಿ. ಆ ಬಗೆಯ ಬೆಳಕು ಒತ್ತಡಕ್ಕೊಳಗಾದಾಗ ಮರಳಿನ ಕಲ್ಲುಗಳಿಂದ ಉದ್ಭವಾಗುತ್ತದೆಂದು ಜಪಾನಿನ ಸಂಶೋಧಕ ಕಲಾಗಚೆಯವರು ಅಭಿಪ್ರಾಯಪಡುತ್ತಾರೆ.

ಭೂಕಂಪನ ಪ್ರದೇಶದಲ್ಲಿ ಕಲ್ಲು ಒತ್ತಡದಿಂದಾಗಿ ಪುಡಿಯಾಗುವುದಕ್ಕೆ ಮೊದಲು ಮಿಂಚು ಬೆಳಕು ಹುಟ್ಟಿ 100 ಮಿಲಿ ಸೆಕೆಂಡುಗಳವರೆಗೆ ಮುಂದುವರೆಯುವುದು. ಸಿಲಿಕಾ(ಮರಳಿನ ಕಣ) ದಿಂದ ಬಂಡೆಗಳನ್ನೂ ಅದುಮಿ ಒತ್ತಡ ಹೇರಿದಾಗ ಆ ಬಗೆಯ ಮಿಂಚಿನ ಬೆಳಕು ಹೊರಬರುವುದೆಂದು ತಜ್ಞರ ಅಭಿಪ್ರಾಯವಾಗಿದೆ. ಈ ಕುರಿತು ಪ್ಪಯೋಗಗಳು ಮುಂದುವರೆದಿವೆ.
******

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...