Home / ಲೇಖನ / ವಿಜ್ಞಾನ / ಭೂಕಂಪನಕ್ಕೆ ಮುನ್ನೆಚ್ಚರಿಕೆ

ಭೂಕಂಪನಕ್ಕೆ ಮುನ್ನೆಚ್ಚರಿಕೆ

‘ಭೂಕಂಪ’ ಬಂದರೆ ಜಗತ್ತಿನ ಜನರು ಭಯಭೀತರಾಗುತ್ತಾರೆ. ಏಕೆಂದರೆ ಸಾವು, ನೋವು, ಆಕ್ರಂದನ, ಆಸ್ತಿ ಪಾಸ್ತಿ ಹಾನಿ, ಹೀಗೆ ಗೋಳಿನ ಕಥೆ ಮುಂದುವರಿಯುತ್ತದೆ. ಭೂಮಿ ನಡುಗಿ ಇತ್ತೀಚೆಗೆ ಗುಜರಾತ ಜನರನ್ನು ತಲ್ಲಣಗೊಳಿಸಿ ಸಾವು ನೋವನ್ನುಂಟು ಮಾಡಿದ ನೆನಪು ಮರೆಯಾಗಿಲ್ಲ ಜಗತ್ತಿನ ಮೂಲೆ ಮೂಲೆಗಳಲ್ಲಿಯೂ ಈ ಭಯಾನಕ ಕಂಪನಗಳು ಆಗಾಗ ಆಗುತ್ತಲೇ ಇರುತ್ತವೆ.

ಇಂಥಹ ಭೀಕರವಾದ ಭೂಕಂಪ ಸಂಭವಿಸಬಹುದೆಂದು ಗೊತ್ತಾದರೆ ಸುರಕ್ಷಿತವಾಗಿರಬಹುದು. ಇದು ಜನಗಳ ಆಂತರ್ಯದ ಧ್ವನಿಯಾಗಿದೆ. ಇದುವರೆಗೂ ನಿಖರವಾಗಿ ಭೂಕಂಪದ ಸುಳಿವನ್ನು ಕೊಟ್ಟಿರುವದಿಲ್ಲ ಅದರೆ ಜಪಾನಿನ ಸಂರೋಧಕರು ಮುನ್ನಚ್ಚರಿಕೆ ಕೊಡಬಹುದೆನ್ನುತ್ತಾರೆ. ಎಚ್ಚರಿಕೆ ನೀಡುವುದು ಶಬ್ದ ಹೊರಹೊಮ್ಮುವ ಮೂಲಕವಲ್ಲ
ನೀಲಿಗೆಂಪು ಬೆಳಕಿನ ಮಿಂಚನ್ನು ಹರಿಸುವ ಮೂಲಕ, ಎಂದು ಹೇಳುತ್ತಾರೆ. ಇದೀಗ ಜಪಾನಿನ ಕೂಬೆಯ ಭೂಕಂಪ ಇದನ್ನು ದೃಢಪಡಿಸಿದೆ. ಕೂಬೆಯ ಭೂಕಂಪದ ಮೊದಲು (ಹತ್ತಾರು ನಿಮಿಷಗಳ ಮೊದಲು) ನೀಲಿ ಮತ್ತು ಕೆಂಪು ಬೆಳಕು ಕಾಣಿಸಿಕೊಂಡಿತೆಂದು ಜನರ ವರದಿ. ಆ ಬಗೆಯ ಬೆಳಕು ಒತ್ತಡಕ್ಕೊಳಗಾದಾಗ ಮರಳಿನ ಕಲ್ಲುಗಳಿಂದ ಉದ್ಭವಾಗುತ್ತದೆಂದು ಜಪಾನಿನ ಸಂಶೋಧಕ ಕಲಾಗಚೆಯವರು ಅಭಿಪ್ರಾಯಪಡುತ್ತಾರೆ.

ಭೂಕಂಪನ ಪ್ರದೇಶದಲ್ಲಿ ಕಲ್ಲು ಒತ್ತಡದಿಂದಾಗಿ ಪುಡಿಯಾಗುವುದಕ್ಕೆ ಮೊದಲು ಮಿಂಚು ಬೆಳಕು ಹುಟ್ಟಿ 100 ಮಿಲಿ ಸೆಕೆಂಡುಗಳವರೆಗೆ ಮುಂದುವರೆಯುವುದು. ಸಿಲಿಕಾ(ಮರಳಿನ ಕಣ) ದಿಂದ ಬಂಡೆಗಳನ್ನೂ ಅದುಮಿ ಒತ್ತಡ ಹೇರಿದಾಗ ಆ ಬಗೆಯ ಮಿಂಚಿನ ಬೆಳಕು ಹೊರಬರುವುದೆಂದು ತಜ್ಞರ ಅಭಿಪ್ರಾಯವಾಗಿದೆ. ಈ ಕುರಿತು ಪ್ಪಯೋಗಗಳು ಮುಂದುವರೆದಿವೆ.
******

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...