Home / ಲೇಖನ / ವಿಜ್ಞಾನ / ಭೂಕಂಪನಕ್ಕೆ ಮುನ್ನೆಚ್ಚರಿಕೆ

ಭೂಕಂಪನಕ್ಕೆ ಮುನ್ನೆಚ್ಚರಿಕೆ

‘ಭೂಕಂಪ’ ಬಂದರೆ ಜಗತ್ತಿನ ಜನರು ಭಯಭೀತರಾಗುತ್ತಾರೆ. ಏಕೆಂದರೆ ಸಾವು, ನೋವು, ಆಕ್ರಂದನ, ಆಸ್ತಿ ಪಾಸ್ತಿ ಹಾನಿ, ಹೀಗೆ ಗೋಳಿನ ಕಥೆ ಮುಂದುವರಿಯುತ್ತದೆ. ಭೂಮಿ ನಡುಗಿ ಇತ್ತೀಚೆಗೆ ಗುಜರಾತ ಜನರನ್ನು ತಲ್ಲಣಗೊಳಿಸಿ ಸಾವು ನೋವನ್ನುಂಟು ಮಾಡಿದ ನೆನಪು ಮರೆಯಾಗಿಲ್ಲ ಜಗತ್ತಿನ ಮೂಲೆ ಮೂಲೆಗಳಲ್ಲಿಯೂ ಈ ಭಯಾನಕ ಕಂಪನಗಳು ಆಗಾಗ ಆಗುತ್ತಲೇ ಇರುತ್ತವೆ.

ಇಂಥಹ ಭೀಕರವಾದ ಭೂಕಂಪ ಸಂಭವಿಸಬಹುದೆಂದು ಗೊತ್ತಾದರೆ ಸುರಕ್ಷಿತವಾಗಿರಬಹುದು. ಇದು ಜನಗಳ ಆಂತರ್ಯದ ಧ್ವನಿಯಾಗಿದೆ. ಇದುವರೆಗೂ ನಿಖರವಾಗಿ ಭೂಕಂಪದ ಸುಳಿವನ್ನು ಕೊಟ್ಟಿರುವದಿಲ್ಲ ಅದರೆ ಜಪಾನಿನ ಸಂರೋಧಕರು ಮುನ್ನಚ್ಚರಿಕೆ ಕೊಡಬಹುದೆನ್ನುತ್ತಾರೆ. ಎಚ್ಚರಿಕೆ ನೀಡುವುದು ಶಬ್ದ ಹೊರಹೊಮ್ಮುವ ಮೂಲಕವಲ್ಲ
ನೀಲಿಗೆಂಪು ಬೆಳಕಿನ ಮಿಂಚನ್ನು ಹರಿಸುವ ಮೂಲಕ, ಎಂದು ಹೇಳುತ್ತಾರೆ. ಇದೀಗ ಜಪಾನಿನ ಕೂಬೆಯ ಭೂಕಂಪ ಇದನ್ನು ದೃಢಪಡಿಸಿದೆ. ಕೂಬೆಯ ಭೂಕಂಪದ ಮೊದಲು (ಹತ್ತಾರು ನಿಮಿಷಗಳ ಮೊದಲು) ನೀಲಿ ಮತ್ತು ಕೆಂಪು ಬೆಳಕು ಕಾಣಿಸಿಕೊಂಡಿತೆಂದು ಜನರ ವರದಿ. ಆ ಬಗೆಯ ಬೆಳಕು ಒತ್ತಡಕ್ಕೊಳಗಾದಾಗ ಮರಳಿನ ಕಲ್ಲುಗಳಿಂದ ಉದ್ಭವಾಗುತ್ತದೆಂದು ಜಪಾನಿನ ಸಂಶೋಧಕ ಕಲಾಗಚೆಯವರು ಅಭಿಪ್ರಾಯಪಡುತ್ತಾರೆ.

ಭೂಕಂಪನ ಪ್ರದೇಶದಲ್ಲಿ ಕಲ್ಲು ಒತ್ತಡದಿಂದಾಗಿ ಪುಡಿಯಾಗುವುದಕ್ಕೆ ಮೊದಲು ಮಿಂಚು ಬೆಳಕು ಹುಟ್ಟಿ 100 ಮಿಲಿ ಸೆಕೆಂಡುಗಳವರೆಗೆ ಮುಂದುವರೆಯುವುದು. ಸಿಲಿಕಾ(ಮರಳಿನ ಕಣ) ದಿಂದ ಬಂಡೆಗಳನ್ನೂ ಅದುಮಿ ಒತ್ತಡ ಹೇರಿದಾಗ ಆ ಬಗೆಯ ಮಿಂಚಿನ ಬೆಳಕು ಹೊರಬರುವುದೆಂದು ತಜ್ಞರ ಅಭಿಪ್ರಾಯವಾಗಿದೆ. ಈ ಕುರಿತು ಪ್ಪಯೋಗಗಳು ಮುಂದುವರೆದಿವೆ.
******

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...