Home / ಲೇಖನ / ವಿಜ್ಞಾನ / ಆಕರ್ಷಕ ಮರದ ಟೆಲಿಫೋನ್ ಮಾರುಕಟ್ಟೆಗೆ

ಆಕರ್ಷಕ ಮರದ ಟೆಲಿಫೋನ್ ಮಾರುಕಟ್ಟೆಗೆ

ಇದುವರೆಗೆ ಪೈಬರ್ ಮತ್ತು ಪ್ಲಾಸ್ಟಿಕ್‌ನ ಫೋನ್‌ಗಳು ಚಾಲ್ತಿಯಲ್ಲಿದ್ದವು. ಇದರಲ್ಲಿ ವಿದ್ಯುತ್ ಸರ್ಕ್ಯುಟ್ ಅಪಾಯ ಮತ್ತು ವಿದ್ಯುಶಾಖ ಹೊಡೆಯುವುದು ಆಗುತ್ತಿತ್ತು ಈದೀಗ ಗಂಟೆ ಬಾರಿಸುವ ಮರದ ಟೆಲಿಫೋನ್‌ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕೆಕ್ಕರ ಗ್ರಾಮದ ಉದ್ಯಮಿ ಕೃಷ್ಣಭಟ್ ಅವರು ತಯಾರಿಸಿದ್ದಾರೆ. ಇದು ಇಂದಿನ ತಾಂತ್ರಿಕ ಯುಗದಲ್ಲಿ ಟೆಲಿಫೋನ್ ಜಗತ್ತಿಗೆ ಪೈಪೋಟಿ ನಡೆಸುತ್ತದೆ. ‘ಉಡ್‌ಬೆಲ್’ ಎಂದು ಕರೆಯುವ ಇದನ್ನು ಕೃಷ್ಣಭಟ್ ಅವರು ಆಕರ್ಷಕವಾಗಿ ತಯಾರಿಸಿದ್ದು ಎಲ್ಲಕಾಲದಲ್ಲಿಯೂ ಇದರೊಳಗಿನ ಇಲೆಕ್ಟ್ರಾನಿಕ್ಸ್ ಪದಾರ್ಥಗಳು ಸುರಕ್ಷಿತವಾಗಿ ಕಾರ್ಯಶೀಲಗೊಳ್ಳುತ್ತವೆ ಎಂದು ತಯಾರಕರ ಅಭಿಪ್ರಾಯ. ಒಳ್ಳೆಯ ‘ಧ್ವನಿತರಂಗ’ ಮಾಡವುದಲ್ಲದೇ ಯಾವುದೇ ವಿಧದ ಶಾಖಗಳು ಇಲ್ಲದೇ ಅಂದದ ಮನೆಗಳಿಗೊಂದು ಕಲಾಕೃತಿಯಂತಾಗುತ್ತದೆ.

ಈ ದೂರವಾಣಿಯನ್ನು ಬೀಟೆ ಮತ್ತು ತೇಗದ ಮರದಿಂದ ತಯಾರಿಸಲಾಗಿದ್ದು ಈ ಮಾದರಿಯನ್ನು ಪೇಟೆಂಟ್ ಮಾಡಿಸುವ ಪ್ರಯತ್ನ ಸಾಗಿದೆ. ತಿಂಗಳಿಗೆ ಒಂದೂವರೆ ಸಾವಿರೆದಷ್ಟು ಸೆಟ್‌ಗಳನ್ನು ನಿರ್ಮಿಸುವ ಘಟಕವನ್ನು ಸ್ಥಾಪಿಸಲಾಗಿದೆ. ಪ್ರಸ್ತುತ ಎರಡು ಮಾದರಿಯಲ್ಲಿ ಇದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು. ಮುಂದೆ ಇದೇ ರೀತಿಯಾಗಿ ಕಾರ್ಡ್‌ಲೆಸ್ ಮತ್ತು ಮೊಬೈಲ್ ಫೋನ್‌ಗಳನ್ನು ಸಹ ತಯಾರಿಸುವ ಯೋಜನೆ ಹೊಂದಲಾಗಿದೆ. ಎಂದು ತಯಾರಕರು ತಿಳಿಸುತ್ತಾರೆ.
******

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...