Home / ಲೇಖನ / ವಿಜ್ಞಾನ / ಆಕರ್ಷಕ ಮರದ ಟೆಲಿಫೋನ್ ಮಾರುಕಟ್ಟೆಗೆ

ಆಕರ್ಷಕ ಮರದ ಟೆಲಿಫೋನ್ ಮಾರುಕಟ್ಟೆಗೆ

ಇದುವರೆಗೆ ಪೈಬರ್ ಮತ್ತು ಪ್ಲಾಸ್ಟಿಕ್‌ನ ಫೋನ್‌ಗಳು ಚಾಲ್ತಿಯಲ್ಲಿದ್ದವು. ಇದರಲ್ಲಿ ವಿದ್ಯುತ್ ಸರ್ಕ್ಯುಟ್ ಅಪಾಯ ಮತ್ತು ವಿದ್ಯುಶಾಖ ಹೊಡೆಯುವುದು ಆಗುತ್ತಿತ್ತು ಈದೀಗ ಗಂಟೆ ಬಾರಿಸುವ ಮರದ ಟೆಲಿಫೋನ್‌ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕೆಕ್ಕರ ಗ್ರಾಮದ ಉದ್ಯಮಿ ಕೃಷ್ಣಭಟ್ ಅವರು ತಯಾರಿಸಿದ್ದಾರೆ. ಇದು ಇಂದಿನ ತಾಂತ್ರಿಕ ಯುಗದಲ್ಲಿ ಟೆಲಿಫೋನ್ ಜಗತ್ತಿಗೆ ಪೈಪೋಟಿ ನಡೆಸುತ್ತದೆ. ‘ಉಡ್‌ಬೆಲ್’ ಎಂದು ಕರೆಯುವ ಇದನ್ನು ಕೃಷ್ಣಭಟ್ ಅವರು ಆಕರ್ಷಕವಾಗಿ ತಯಾರಿಸಿದ್ದು ಎಲ್ಲಕಾಲದಲ್ಲಿಯೂ ಇದರೊಳಗಿನ ಇಲೆಕ್ಟ್ರಾನಿಕ್ಸ್ ಪದಾರ್ಥಗಳು ಸುರಕ್ಷಿತವಾಗಿ ಕಾರ್ಯಶೀಲಗೊಳ್ಳುತ್ತವೆ ಎಂದು ತಯಾರಕರ ಅಭಿಪ್ರಾಯ. ಒಳ್ಳೆಯ ‘ಧ್ವನಿತರಂಗ’ ಮಾಡವುದಲ್ಲದೇ ಯಾವುದೇ ವಿಧದ ಶಾಖಗಳು ಇಲ್ಲದೇ ಅಂದದ ಮನೆಗಳಿಗೊಂದು ಕಲಾಕೃತಿಯಂತಾಗುತ್ತದೆ.

ಈ ದೂರವಾಣಿಯನ್ನು ಬೀಟೆ ಮತ್ತು ತೇಗದ ಮರದಿಂದ ತಯಾರಿಸಲಾಗಿದ್ದು ಈ ಮಾದರಿಯನ್ನು ಪೇಟೆಂಟ್ ಮಾಡಿಸುವ ಪ್ರಯತ್ನ ಸಾಗಿದೆ. ತಿಂಗಳಿಗೆ ಒಂದೂವರೆ ಸಾವಿರೆದಷ್ಟು ಸೆಟ್‌ಗಳನ್ನು ನಿರ್ಮಿಸುವ ಘಟಕವನ್ನು ಸ್ಥಾಪಿಸಲಾಗಿದೆ. ಪ್ರಸ್ತುತ ಎರಡು ಮಾದರಿಯಲ್ಲಿ ಇದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು. ಮುಂದೆ ಇದೇ ರೀತಿಯಾಗಿ ಕಾರ್ಡ್‌ಲೆಸ್ ಮತ್ತು ಮೊಬೈಲ್ ಫೋನ್‌ಗಳನ್ನು ಸಹ ತಯಾರಿಸುವ ಯೋಜನೆ ಹೊಂದಲಾಗಿದೆ. ಎಂದು ತಯಾರಕರು ತಿಳಿಸುತ್ತಾರೆ.
******

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...