Home / ಲೇಖನ / ವಿಜ್ಞಾನ / ಗರ್ಭದಲ್ಲಿರುವ ಮಗುವಿನೊಂದಿಗೆ ಸಂಭಾಷಣೆ

ಗರ್ಭದಲ್ಲಿರುವ ಮಗುವಿನೊಂದಿಗೆ ಸಂಭಾಷಣೆ

ಗರ್ಭದಲ್ಲಿರುವ ಮಗು ಹೊರಜಗತ್ತಿನೊಂದಿಗೆ ಯಾವ ಸಂಪರ್ಕವನ್ನು ಹೊಂದಿರಲಾರದು ಎಂಬ ಈವರೆಗಿನ ವಿಜ್ಞಾನ, ಈಗ ಬದಲಾಗಿದೆ. ಗರ್ಭಧರಿಸಿದವಳು ತನ್ನ ಹೊಟ್ಟೆಯೊಳಗಿನ ಮಗುವಿನೊಂದಿಗೆ ಮಾತನಾಡಬಹುದು ಎಂಬ ಸಂಶೋಧನೆಯನ್ನು ಬ್ರಿಟನ್ನಿನ ವಿಜ್ಞಾನಿ ಕ್ರಿಸ್ಟಫರ್ ಪ್ರಯೋಗಗಳಿಂದ ದೃಢೀಕರಿಸಿದ್ದಾರೆ. ಗರ್ಭಧರಿಸಿದ ತಾಯಿ ಮಾನಸಿಕವಾಗಿ, ದೈಹಿಕವಾಗಿ ಬಳಲಿದಾಗ ಮಗು ಬಳಲುತ್ತದೆ. ಉಲ್ಲಾಸದಿಂದಿರುವಾಗ ಒಳಗಡೆಯ ಶಿಶುವೂ ಕೂಡ ಆರೋಗ್ಯ ಪೂರ್ಣವಾಗಿ ಬೆಳೆಯುತ್ತದೆ.

ತಾಯಿಯಾದವಳು ಗರ್ಭದೊಳಗಿನ ತನ್ನ ಮಗುವಿನೊಂದಿಗೆ ಮಾತನಾಡಲು ‘ಎಂಬ್ರಿಯೋಫೋನ್’ ಎಂಬ ಹೊಸ ಉಪಕರಣವನ್ನು ಬಳಸಬಹುದಾಗಿದೆ. ಸಣ್ಣ ಗಾತ್ರದ ಒಂದು ಮೈಕ್ರೋಫೋನ್ ಮತ್ತು ಮೊಬೈಲ್ ರೀಸಿವರ್‌ವನ್ನು ಒಳಗೊಂಡಿರುವ ಈ ಉಪಕರಣವನ್ನು ಗರ್ಭಿಣಿಯ ಸೊಂಟಕ್ಕೆ ಬೆಲ್ಟಿನ ಮೂಲಕ ಕಟ್ಟಲಾಗುತ್ತದೆ. ಕೈಯಲ್ಲಿರುವ ರಿಸೀವರ್‌ನಲ್ಲಿ (ಮೂಲಕ) ಮಾತನಾಡಿದಾಗ ಆ ಶಬ್ಧಗಳನ್ನು ಮೈಕ್ರೋಫೋನ್ ದಾಖಲಿಸಿಕೊಂಡು ಗರ್ಭದಲ್ಲಿರುವ ಮಗುವಿನ ಕಿವಿಗೆ ತಲುಪಿಸುತ್ತದೆ. ಗರ್ಭಿಣಿಯು ತಾನು ಗರ್ಭಧರಿಸಿದ ೪ನೇ ತಿಂಗಳಿನಿಂದ ಈ ರೀತಿಯ ಸಂದೇಶಗಳನ್ನು ಗರ್ಭಸ್ಥ ಶಿಶುವಿನ ಕಿವಿಗೆ ಕಳಿಸಬಹುದು.

ಈ ರೀತಿ ಗರ್ಭದೊಳಗಿನ ಶಿಶುವಿನೊಂದಿಗೆ ಸಂಭಾಷಣೆ ನಡೆಸುವುದರಿಂದ ಮಗುವಿನ ನರವ್ಯೂಹಗಳಲ್ಲಿ ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಮತ್ತು ಮಾನಸಿಕ, ದೈಹಿಕವಾಗಿಯೂ ಮಗು ಆರೋಗ್ಯಪೂರ್ಣವಾಗಿ ಬೆಳವಣಿಗೆ ಹೊಂದುತ್ತದೆಂದು ಸಂಶೋಧಕರು ಪ್ರಯೋಗಗಳಿಂದ ಕಂಡುಕೊಂಡಿದ್ದಾರೆ ಅಲ್ಲದೇ ಹೆರಿಗೆಯ ಸಮಯದಲ್ಲಿಯೇ ಮಗು ತಾಯಿಯನ್ನು ಗ್ರಹಿಸಲು ಇದರಿಂದ ಸಾಧ್ಯವಾಗುತ್ತದೆ. ‘ಎಂಬ್ರಿಯೋ ಫೋನ್’ ಎನ್ನುವ ಈ ಉಪಕರಣ ಕೆಲವೇ ವರ್ಷಗಳಲ್ಲಿ ಮಾರುಕಟ್ಟೆಗೆ ಬರಲಿದೆ.
******

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...