Home / ಲೇಖನ / ವಿಜ್ಞಾನ / ಗರ್ಭದಲ್ಲಿರುವ ಮಗುವಿನೊಂದಿಗೆ ಸಂಭಾಷಣೆ

ಗರ್ಭದಲ್ಲಿರುವ ಮಗುವಿನೊಂದಿಗೆ ಸಂಭಾಷಣೆ

ಗರ್ಭದಲ್ಲಿರುವ ಮಗು ಹೊರಜಗತ್ತಿನೊಂದಿಗೆ ಯಾವ ಸಂಪರ್ಕವನ್ನು ಹೊಂದಿರಲಾರದು ಎಂಬ ಈವರೆಗಿನ ವಿಜ್ಞಾನ, ಈಗ ಬದಲಾಗಿದೆ. ಗರ್ಭಧರಿಸಿದವಳು ತನ್ನ ಹೊಟ್ಟೆಯೊಳಗಿನ ಮಗುವಿನೊಂದಿಗೆ ಮಾತನಾಡಬಹುದು ಎಂಬ ಸಂಶೋಧನೆಯನ್ನು ಬ್ರಿಟನ್ನಿನ ವಿಜ್ಞಾನಿ ಕ್ರಿಸ್ಟಫರ್ ಪ್ರಯೋಗಗಳಿಂದ ದೃಢೀಕರಿಸಿದ್ದಾರೆ. ಗರ್ಭಧರಿಸಿದ ತಾಯಿ ಮಾನಸಿಕವಾಗಿ, ದೈಹಿಕವಾಗಿ ಬಳಲಿದಾಗ ಮಗು ಬಳಲುತ್ತದೆ. ಉಲ್ಲಾಸದಿಂದಿರುವಾಗ ಒಳಗಡೆಯ ಶಿಶುವೂ ಕೂಡ ಆರೋಗ್ಯ ಪೂರ್ಣವಾಗಿ ಬೆಳೆಯುತ್ತದೆ.

ತಾಯಿಯಾದವಳು ಗರ್ಭದೊಳಗಿನ ತನ್ನ ಮಗುವಿನೊಂದಿಗೆ ಮಾತನಾಡಲು ‘ಎಂಬ್ರಿಯೋಫೋನ್’ ಎಂಬ ಹೊಸ ಉಪಕರಣವನ್ನು ಬಳಸಬಹುದಾಗಿದೆ. ಸಣ್ಣ ಗಾತ್ರದ ಒಂದು ಮೈಕ್ರೋಫೋನ್ ಮತ್ತು ಮೊಬೈಲ್ ರೀಸಿವರ್‌ವನ್ನು ಒಳಗೊಂಡಿರುವ ಈ ಉಪಕರಣವನ್ನು ಗರ್ಭಿಣಿಯ ಸೊಂಟಕ್ಕೆ ಬೆಲ್ಟಿನ ಮೂಲಕ ಕಟ್ಟಲಾಗುತ್ತದೆ. ಕೈಯಲ್ಲಿರುವ ರಿಸೀವರ್‌ನಲ್ಲಿ (ಮೂಲಕ) ಮಾತನಾಡಿದಾಗ ಆ ಶಬ್ಧಗಳನ್ನು ಮೈಕ್ರೋಫೋನ್ ದಾಖಲಿಸಿಕೊಂಡು ಗರ್ಭದಲ್ಲಿರುವ ಮಗುವಿನ ಕಿವಿಗೆ ತಲುಪಿಸುತ್ತದೆ. ಗರ್ಭಿಣಿಯು ತಾನು ಗರ್ಭಧರಿಸಿದ ೪ನೇ ತಿಂಗಳಿನಿಂದ ಈ ರೀತಿಯ ಸಂದೇಶಗಳನ್ನು ಗರ್ಭಸ್ಥ ಶಿಶುವಿನ ಕಿವಿಗೆ ಕಳಿಸಬಹುದು.

ಈ ರೀತಿ ಗರ್ಭದೊಳಗಿನ ಶಿಶುವಿನೊಂದಿಗೆ ಸಂಭಾಷಣೆ ನಡೆಸುವುದರಿಂದ ಮಗುವಿನ ನರವ್ಯೂಹಗಳಲ್ಲಿ ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಮತ್ತು ಮಾನಸಿಕ, ದೈಹಿಕವಾಗಿಯೂ ಮಗು ಆರೋಗ್ಯಪೂರ್ಣವಾಗಿ ಬೆಳವಣಿಗೆ ಹೊಂದುತ್ತದೆಂದು ಸಂಶೋಧಕರು ಪ್ರಯೋಗಗಳಿಂದ ಕಂಡುಕೊಂಡಿದ್ದಾರೆ ಅಲ್ಲದೇ ಹೆರಿಗೆಯ ಸಮಯದಲ್ಲಿಯೇ ಮಗು ತಾಯಿಯನ್ನು ಗ್ರಹಿಸಲು ಇದರಿಂದ ಸಾಧ್ಯವಾಗುತ್ತದೆ. ‘ಎಂಬ್ರಿಯೋ ಫೋನ್’ ಎನ್ನುವ ಈ ಉಪಕರಣ ಕೆಲವೇ ವರ್ಷಗಳಲ್ಲಿ ಮಾರುಕಟ್ಟೆಗೆ ಬರಲಿದೆ.
******

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...