Home / ಬಾಲ ಚಿಲುಮೆ / ಕಥೆ / ಬೆಳ್ಳಿ ಕಡಗ

ಬೆಳ್ಳಿ ಕಡಗ

ಒಂದು ಕುಗ್ರಾಮದಲ್ಲಿ ಮುದುಕ ಮುದುಕಿ ಇದ್ದರು. ಅವರಿಗೆ ಒಬ್ಬ ಮಗನಿದ್ದ. ಆತ ಹೇಳಿದ್ದನ್ನು ತಿಳಿದುಕೊಳ್ಳಲಾರದಷ್ಟು ದಡ್ಡನಾಗಿದ್ದ. ಮಗನ ಈ ವರ್ತನೆಯಿಂದ ಬೇಸತ್ತ ಅವನ ತಂದೆ-ತಾಯಿ ಪಕ್ಕದ ಆಶ್ರಮದ ಋಷಿಯ ಬಳಿ ಹೋಗಿ `ಸ್ವಾಮೀಜಿ, ಇವನು ನಮ್ಮ ಮಗ ಧನವಂತ. ಇವನು ದಡ್ಡ. ಹೇಗಾದರೂ ಮಾಡಿ ಇವನನ್ನು ಬುದ್ಧವಂತನನ್ನಾಗಿ ಮಾಡಿ. ನಮ್ಮ ಬಳಿ ಇರುವ ಆಸ್ತಿ, ಹಣವನ್ನು ಆಶ್ರಮಕ್ಕೆ ಒಪ್ಪಿಸಿ ನಾವೂ ಇಲ್ಲಿಯೇ ಕೆಲಸ ಮಾಡಿಕೊಮಡು ಇರುತ್ತೇವೆ’ ಎಂದು ಬೇಡಿಕೊಂಡರು. ಧನವಂತನನ್ನೊಮ್ಮೆ ನೋಡಿದ ಋಷಿ `ಆಯಿತು’ ಎಂದರು.

`ಧನವಂತಾ, ನೀನು ಸ್ವಲ್ಪ ದಿನಗಳವರೆಗೆ ಸ್ವಚ್ಛಂದವಾಗಿ ಆಶ್ರಮದಲ್ಲಿ ಸುತ್ತಾಡಿಕೊಂಡಿರು. ಇಲ್ಲಿ ನಿನಗಾಗಿ ಈಜುಕೊಳ, ಪ್ರಾಣಿ, ಪಕ್ಷಿಗಳಿವೆ’ ಎಂದರು. ಸಂತಸಗೊಂಡ ಧನವಂತ `ಆಗಲಿ’ ಎಂದು ಕುಣಿಯುತ್ತ ಹೋದ.

ಸ್ವಲ್ಪ ದಿನಗಳ ನಂತರ ಋಷಿಗಳು ತಾವು ಕಲಿತ ಎಲ್ಲ ವಿದ್ಯೆಗಳನ್ನೂ ಕಲಿಸಿ ಧನವಂತನನ್ನು ಬುದ್ಧವಂತನನ್ನಾಗಿ ಮಾಡಿದರು. ನಂತರ `ನಾನು ಕಲಿತ ವಿದ್ಯೆಯನ್ನೆಲ್ಲ ನಿನಗೆ ಧಾರೆ ಎರೆದಿದ್ದೇನೆ. ನಿನಗೆ ರಾಜನಾಗುವ ಲಕ್ಷಣಗಳಿವೆ. ನಿನಗೊಂದು ಬೆಳ್ಳಿ ಕಡಗ ಕೊಡುವೆ. ಇದು ಸಾಮಾನ್ಯವಾದುದಲ್ಲ. ನೀನು ಕೇಳಿದ್ದನ್ನೆಲ್ಲ ಕೊಡುತ್ತದೆ. ಆದರೆ, ಒಳ್ಳೆಯ ಕಾರ್ಯಗಳಿಗೆ ಮಾತ್ರ ಉಪಯೋಗಿಸು’ ಎಂದು ಹೇಳಿ ಬೆಳ್ಳಿ ಕಡಗವನ್ನು ಧನವಂತನಿಗೆ ಕೊಟ್ಟರು.

ರಾತ್ರಿ ಮಲಗಿದ್ದ ಸಮಯದಲ್ಲಿ ಧನವಂತನ ಮನದಲ್ಲಿ ಕೆಟ್ಟ ಯೋಚನೆಗಳು ಸುಳಿದಾಡಿದವು. ತುಸು ಸಮಯದ ನಂತರ ಆತ ಎದ್ದು ಕುಳಿತು, ಬೆಳ್ಳಿ ಕಡಗವನ್ನು ಕೈಗೆ ಹಾಕಿಕೊಂಡು ನನಗೊಂದು ಅರಮನೆ ಬೇಕೆಂದ. ಕೂಡಲೇ ಅಲ್ಲೊಂದು ಅರಮನೆ ಸೃಷ್ಟಿಯಾಯಿತು. ತನಗೊಬ್ಬ ರಾಜಕುಮಾರಿ ಬೇಕೆಂದ. ಮರುಕ್ಷಣವೇ ಅಲ್ಲಿಗೆ ಒಬ್ಬ ಸುಂದರ ಯುವತಿ ಬಂದಳು. ಹೀಗೆ ಅರಮನೆಯ ರಾಜನಿಗೆ ಬೇಕಾದ ಬೆಳ್ಳಿ, ಬಂಗಾರ, ವಜ್ರ, ವೈಢೂರ್‍ಯ, ಸೈನಿಕರು, ಸೇವಕರು ಎಲ್ಲವೂ ಬಂದವು. ಇದನ್ನೆಲ್ಲ ಗಮನಿಸಿದ ಋಷಿಗಳು `ಧನವಂತ, ಏನಿದು ವಿಚಿತ್ರ’ ಎಂದು ಕೋಪಗೊಂಡರು. ಆದರೆ, ಧನವಂತ ಅದನ್ನು ಗಮನಿಸುವ ಸ್ಥಿತಿಯಲ್ಲಿರಲಿಲ್ಲ. ಆತ ಅಹಂಕಾರದಿಂದ `ಏ! ಯಾರು ನೀನು? ನಡೆ ಇಲ್ಲಿಂದ’ ಎಂದು ಗದರಿಸಿದ.

`ಥೂ, ಪಾಪಿ, ನೀನು ಸರ್ವನಾಶವಾಗುತ್ತಿ ಹೋಗು’ ಎಂದು ಹೇಳಿ ಋಷಿಗಳು ಅಲ್ಲಿಂದ ಹೊರಟರು.

ಇತ್ತ ಧನವಂತ ತನ್ನ ರಾಜ್ಯದಲ್ಲಿ ದರ್ಪ, ಸೊಕ್ಕಿನಿಮದ ಮೆರೆಯುತ್ತ ಪ್ರಜೆಗಳಿಗೆ ಕಿರುಕುಳ ಕೊಡಲು ಆರಂಭಿಸಿದ. ಅನ್ಯಾಯವಾಗಿ ಭೂಕಂದಾಯ ವಸೂಲಿ ಮಾಡುವುದು, ಭೂಮಿ ಕಬಳಿಸುವುದು, ಪಕ್ಕದ ರಾಜರನ್ನು ಯುದ್ಧಕ್ಕೆ ಆಹ್ವಾನಿಸಿ ತನ್ನ ಬೆಳ್ಳಿ ಕಡಗದ ಸಹಾಯದಿಂದ ಅವರನ್ನು ಸೋಲಿಸಿ, ಅವರ ಸಮಸ್ತ ರಾಜ್ಯವನ್ನೂ ತೆಗೆದುಕೊಂಡು ಆ ರಾಜರನ್ನು ತನ್ನ ಗುಲಾಮರನ್ನಾಗಿಸಿಕೊಳ್ಳುವುದೇ ಅವನ ಬದುಕಾಯಿತು.

ಇದನ್ನೆಲ್ಲ ಅರಿತ ಋಷಿಗಳು ಧನವಂತನಿಗೆ ಕೊಟ್ಟ ಬೆಳ್ಳಿ ಕಡಗವನ್ನು ದಿವ್ಯ ಶಕ್ತಿಯಿಂದ ತಮ್ಮ ಬಳಿ ಬರುವಂತೆ ಮಾಡಿದರು. ಕೂಡಲೇ ಬೆಳ್ಳಿ ಕಡಗ ಋಷಿಗಳ ಹತ್ತಿರ ಬಂತು. ಅಂದಿನಿಂದ ಧನವಂತ ಹಂತ ಹಂತವಾಗಿ ಎಲ್ಲವನ್ನೂ ಕಳೆದುಕೊಂಡ. ತನ್ನ ತಪ್ಪಿನ ಅರಿವಾಗಿ ಪುನಃ ಋಷಿಗಳ ಹತ್ತಿರ ಬಂದು ತನ್ನ ತಪ್ಪನ್ನು ಮನ್ನಿಸುವಂತೆ ಕೇಳಿಕೊಂಡ. ಅವನ ಕೋರಿಕೆ ತಿರಸ್ಕರಿಸಿದ ಋಷಿಗಳು `ನಿನ್ನನ್ನು ಶಿಷ್ಯನನ್ನಾಗಿ ಮಾಡಿಕೊಂಡಿದ್ದೇ ತಪ್ಪು, ನಡೆ ಆಚೆ’ ಎಂದರು. ಧನವಂತನ ಹೆಂಡತಿ ಅಳುತ್ತ `ಸ್ವಾಮೀಜಿ, ನನ್ನ ಗಂಡನದು ತಪ್ಪಾಗಿದೆ. ಮನ್ನಿಸಿ. ನಿಮ್ಮ ಸೇವೆ ಮಾಡಲು ನಮಗೆ ಅವಕಾಶ ಕೊಡಿ’ ಎಂದು ಬೇಡಿಕೊಂಡಳು. ಋಷಿಗಳು ಕಡೆಗೊಮ್ಮೆ ಆ ಮಾತಿಗೆ ಒಪ್ಪಿದರು. ಮುಂದೆ ಧನವಂತ ಸನ್ಮಾರ್ಗದಲ್ಲಿ ನಡೆದು ತನ್ನ ತಪ್ಪನ್ನು ತಿದ್ದಿಕೊಂಡ. ಆಶ್ರಮದಲ್ಲೇ ಇದ್ದು ಋಷಿಗಳ ಸೇವೆ ಮಾಡುತ್ತ ಕಾಲ ಕಳೆದ.

     *****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...