Home / ಬಾಲ ಚಿಲುಮೆ / ಕಥೆ / ದಯಾಳು ಶ್ರೀಮಂತ

ದಯಾಳು ಶ್ರೀಮಂತ

ಒಂದು ಊರಿನಲ್ಲಿ ಜಯಶೀಲ ಎಂಬ ದಯಾಳು, ಶ್ರೀಮಂತ ಯುವಕನಿದ್ದ. ಒಮ್ಮೆ ಪಕ್ಕದ ಊರಿಗೆ ವ್ಯಾಪಾರಕ್ಕೆಂದು ಹೊರಟಿದ್ದ. ದಾರಿಯಲ್ಲಿ ಕೋಳಿಯನ್ನು ಬಲಿ ಕೊಡುವುದನ್ನು ನೋಡಿ ಆಲ್ಲಿಯ ಜನರಿಗೆ ಹೇಳಿದ: `ಅನ್ಯಾಯವಾಗಿ ಆ ಕೋಳಿಯನ್ನು ಕೊಲ್ಲಬೇಡಿ’ ಎಂದ. ಆದಕ್ಕೆ ಜನರು `ಅದರ ಪ್ರಾಣ ಉಳಿಸಬೇಕೆಂದರೆ ಸಾವಿರ ಬಂಗಾರದ ನಾಣ್ಯ ಕೊಡು’ ಎಂದರು. ಜಯಶೀಲ ಆವರಿಗೆ ಸಾವಿರ ಕೊಟ್ಟು ಕೋಳಿಯನ್ನು ತೆಗೆದುಕೊಂಡು ಹೊರಟ. ಮುಂದಿನ ಊರಿನಲ್ಲಿ ಮತ್ತೊಂದು ದೃಶ್ಯ ನೋಡಿದ ಅಲ್ಲಿಯ ಜನ ಕುರಿಯನ್ನು ಬಲಿ ಕೊಡುತ್ತಿದ್ದರು. `ಇದನ್ನು ಸಾಯಿಸಬೇಡಿ ನೀವು ಕೇಳಿದಷ್ಟು ಹಣ ಕೊಡುವೆ’ ಎಂದ. ಈ ಕುರಿಗೆ ಐದು ಸಾವಿರ ನಾಣ್ಯ ಕೊಟ್ಟರೆ ಬಿಟ್ಟುಬಿಡುವೆವು ಎಂದರು ಜನ. ಆವರಿಗೆ ಐದು ಸಾವಿರ ನಾಣ್ಯ ಕೊಟ್ಟು ಕುರಿಯನ್ನು ಕೊಂಡು ತನ್ನ ಊರಿಗೆ ಮರಳಿದ.

ಹೀಗೆ ಎಲ್ಲರಿಗೂ ದಾನ ಮಾಡಿ ಎಲ್ಲ ಆಸ್ತಿಯನ್ನೂ ಜಯಶೀಲ ಕಳೆದುಕೊಂಡ. ಇದನ್ನು ನೋಡಿದ ಕೋಳಿ ಮರುಗಿತು. `ಒಡೆಯಾ ನೀನೇನು ಯೋಚಿಸಬೇಡ. ಕಾಡಿನಲ್ಲಿ ನಮ್ಮ ಕೋಳಿಗಳಿಗೆ ಒಬ್ಬ ರಾಜನಿದ್ದಾನೆ. ಅವನು ನಿನಗೆ ಸಹಾಯ ಮಾಡುವನು ನಡೆ’ ಎಂದು ತಮ್ಮ ರಾಜನ ಬಳಿಗೆ ಕರೆದುಕೊಂಡು ಹೋಯಿತು. ಜಯಶೀಲನ ಪೂರ್ವಾಪರ ಏನೆಲ್ಲ ತಿಳಿದ ಕೋಳಿರಾಜ. `ನಾನು ನಿನಗೊಂದು ಬಂಗಾರದ ಮೊಟ್ಟೆ ಇಡುವ ಕೋಳಿ ಕೊಡುವೆ ತೆಗೆದುಕೋ’ ಎಂದಿತು. ಜಯಶೀಲ ಆ ಕೋಳಿಯನ್ನು ತೆಗೆದುಕೊಂಡು ತಮ್ಮೂರಿಗೆ ಹಿಂದಿರುಗಿದ. ಕೋಳಿ ಬಂಗಾರದ ಮೊಟ್ಟೆ ಇಡತೊಡಗಿತು. ಇದರಿಂದ ಜಯಶೀಲ ಶ್ರೀಮಂತನಾದ. ಒಮ್ಮೆ ಕುರಿ `ನಾನೂ ನಿನಗೆ ಏನಾದರೂ ಉಪಕಾರ ಮಾಡಬೇಕೆಂದಿರುವೆ. ಆದಕ್ಕೆ ನಮ್ಮ ಕುರಿ ಹಟ್ಟಿಗೆ ಹೋಗೋಣ. ಆಲ್ಲಿ ನಮ್ಮ ಕುರಿನಾಯಕ ಇದ್ದಾನೆ ಅವನು ನಿನಗೆ ಸಹಾಯ ಮಾಡುತ್ತಾನೆ’ ಎಂದು ಹೇಳಿ ಜಯಶೀಲನನ್ನು ಕರೆದುಕೂಂಡು ಹೋಯಿತು. ಅಲ್ಲಿ ಕುರಿ ನಾಯಕ ಆಪರೂಪದ ಬಂಗಾರದ ಉಣ್ಣೆ ಕೊಡುವ ಕುರಿಯನ್ನು ಕೊಟ್ಟಿತು. ಆದನ್ನು ತೆಗೆದುಕೊಂಡು ಬಂದನು. ಜಯಶೀಲ ಎಲ್ಲರಿಗೆ ದಾನ ಮಾಡಿ ಹೆಸರುವಾಸಿಯಾದನು.

ಒಮ್ಮೆ ಇವನ ದಾನ, ಧರ್ಮ, ಒಳ್ಳೆಯತನ ಪಕ್ಕದ ರಾಜ್ಯದ ರಾಜಕುಮಾರಿಗೂ ಗೊತ್ತಾಗಿ ಜಯಶೀಲನನ್ನು ನೋಡಲು ಬಂದಳು. ಅವನನ್ನು ನೋಡಿದೊಡನೆ ಮೋಹಗೊಂಡು, ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದಳು. ಜಯತೀಲ ಒಪ್ಪಿ ಮದುವೆಯಾದ. ಈ ವಿಷಯ ತಿಳಿದ ರಾಜಕುಮಾರಿಯ ತಂದೆ ಇವಳನ್ನು ಕರೆತಂದು ಸೆರೆಮನೆಗೆ ಅಟ್ಟಿದ. ವಿಷಯ ತಿಳಿದ ಜಯಶೀಲ ದುಃಖಿತನಾದ. ಆಗ ಕೋಳಿ ಮತ್ತು ಕುರಿ `ನೀನೇನು ಚಿಂತಿಸಬೇಡ, ರಾಜಕುಮಾರಿಯನ್ನು ನಾವು ಕರೆತರುತ್ತೇವೆ’ ಎಂದು ಹೇಳಿ ಅರಮನೆಯತ್ತ ಹೊರಟವು. ಅಲ್ಲಿ ಸೇವಕಿಯರ ವೇಷ ಧರಿಸಿದವು. ಸೆರೆಮನೆಯಲ್ಲಿ ಅಳುತ್ತ ಕುಳಿತಿರುವ ರಾಜಕುಮಾರಿಯನ್ನು ನೋಡಿ, ನೀನು ಅಳಬೇಡ ಜಯಶೀಲನ ಬಳಿ ಕರೆದೊಯ್ಯುತ್ತೇವೆ ಎಂದು ಹೇಳಿ ತಮ್ಮ ನಿಜ ರೂಪ ತಳೆದವು. ಅದನ್ನು ನೋಡಿ ಹೆದರಿದಳು ರಾಜಕುಮಾರಿ. `ಹೆದರಬೇಡ ನಾವು ನಿನಗೆ ಸಹಾಯ ಮಾಡುವೆವು. ನನ್ನ ಬೆನ್ನ ಮೇಲೆ ಕುಳಿತುಕೊ’ ಎಂದಿತು ಕುರಿ. ರಾಜಕುಮಾರಿ ಜತೆಗೆ ಕೋಳಿಯೊಂದಿಗೆ ಕುರಿಯ ಬೆನ್ನ ಮೇಲೆ ಕುಳಿತು ಬಂದಳು. ಇದನ್ನು ನೋಡಿದ ಜಯಶೀಲ ಸಂತೋಷಗೊಂಡ. ರಾಜಕುವಕಾರಿ, ಕೋಳಿ ಮತ್ತು ಕುರಿಯೊಂದಿಗೆ ನೆಮ್ಮದಿಯಿಂದ ಬಾಳಿದ ಜಯಶೀಲ.

     *****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...