Home / ಬಾಲ ಚಿಲುಮೆ / ಕಥೆ / ದಯಾಳು ಶ್ರೀಮಂತ

ದಯಾಳು ಶ್ರೀಮಂತ

ಒಂದು ಊರಿನಲ್ಲಿ ಜಯಶೀಲ ಎಂಬ ದಯಾಳು, ಶ್ರೀಮಂತ ಯುವಕನಿದ್ದ. ಒಮ್ಮೆ ಪಕ್ಕದ ಊರಿಗೆ ವ್ಯಾಪಾರಕ್ಕೆಂದು ಹೊರಟಿದ್ದ. ದಾರಿಯಲ್ಲಿ ಕೋಳಿಯನ್ನು ಬಲಿ ಕೊಡುವುದನ್ನು ನೋಡಿ ಆಲ್ಲಿಯ ಜನರಿಗೆ ಹೇಳಿದ: `ಅನ್ಯಾಯವಾಗಿ ಆ ಕೋಳಿಯನ್ನು ಕೊಲ್ಲಬೇಡಿ’ ಎಂದ. ಆದಕ್ಕೆ ಜನರು `ಅದರ ಪ್ರಾಣ ಉಳಿಸಬೇಕೆಂದರೆ ಸಾವಿರ ಬಂಗಾರದ ನಾಣ್ಯ ಕೊಡು’ ಎಂದರು. ಜಯಶೀಲ ಆವರಿಗೆ ಸಾವಿರ ಕೊಟ್ಟು ಕೋಳಿಯನ್ನು ತೆಗೆದುಕೊಂಡು ಹೊರಟ. ಮುಂದಿನ ಊರಿನಲ್ಲಿ ಮತ್ತೊಂದು ದೃಶ್ಯ ನೋಡಿದ ಅಲ್ಲಿಯ ಜನ ಕುರಿಯನ್ನು ಬಲಿ ಕೊಡುತ್ತಿದ್ದರು. `ಇದನ್ನು ಸಾಯಿಸಬೇಡಿ ನೀವು ಕೇಳಿದಷ್ಟು ಹಣ ಕೊಡುವೆ’ ಎಂದ. ಈ ಕುರಿಗೆ ಐದು ಸಾವಿರ ನಾಣ್ಯ ಕೊಟ್ಟರೆ ಬಿಟ್ಟುಬಿಡುವೆವು ಎಂದರು ಜನ. ಆವರಿಗೆ ಐದು ಸಾವಿರ ನಾಣ್ಯ ಕೊಟ್ಟು ಕುರಿಯನ್ನು ಕೊಂಡು ತನ್ನ ಊರಿಗೆ ಮರಳಿದ.

ಹೀಗೆ ಎಲ್ಲರಿಗೂ ದಾನ ಮಾಡಿ ಎಲ್ಲ ಆಸ್ತಿಯನ್ನೂ ಜಯಶೀಲ ಕಳೆದುಕೊಂಡ. ಇದನ್ನು ನೋಡಿದ ಕೋಳಿ ಮರುಗಿತು. `ಒಡೆಯಾ ನೀನೇನು ಯೋಚಿಸಬೇಡ. ಕಾಡಿನಲ್ಲಿ ನಮ್ಮ ಕೋಳಿಗಳಿಗೆ ಒಬ್ಬ ರಾಜನಿದ್ದಾನೆ. ಅವನು ನಿನಗೆ ಸಹಾಯ ಮಾಡುವನು ನಡೆ’ ಎಂದು ತಮ್ಮ ರಾಜನ ಬಳಿಗೆ ಕರೆದುಕೊಂಡು ಹೋಯಿತು. ಜಯಶೀಲನ ಪೂರ್ವಾಪರ ಏನೆಲ್ಲ ತಿಳಿದ ಕೋಳಿರಾಜ. `ನಾನು ನಿನಗೊಂದು ಬಂಗಾರದ ಮೊಟ್ಟೆ ಇಡುವ ಕೋಳಿ ಕೊಡುವೆ ತೆಗೆದುಕೋ’ ಎಂದಿತು. ಜಯಶೀಲ ಆ ಕೋಳಿಯನ್ನು ತೆಗೆದುಕೊಂಡು ತಮ್ಮೂರಿಗೆ ಹಿಂದಿರುಗಿದ. ಕೋಳಿ ಬಂಗಾರದ ಮೊಟ್ಟೆ ಇಡತೊಡಗಿತು. ಇದರಿಂದ ಜಯಶೀಲ ಶ್ರೀಮಂತನಾದ. ಒಮ್ಮೆ ಕುರಿ `ನಾನೂ ನಿನಗೆ ಏನಾದರೂ ಉಪಕಾರ ಮಾಡಬೇಕೆಂದಿರುವೆ. ಆದಕ್ಕೆ ನಮ್ಮ ಕುರಿ ಹಟ್ಟಿಗೆ ಹೋಗೋಣ. ಆಲ್ಲಿ ನಮ್ಮ ಕುರಿನಾಯಕ ಇದ್ದಾನೆ ಅವನು ನಿನಗೆ ಸಹಾಯ ಮಾಡುತ್ತಾನೆ’ ಎಂದು ಹೇಳಿ ಜಯಶೀಲನನ್ನು ಕರೆದುಕೂಂಡು ಹೋಯಿತು. ಅಲ್ಲಿ ಕುರಿ ನಾಯಕ ಆಪರೂಪದ ಬಂಗಾರದ ಉಣ್ಣೆ ಕೊಡುವ ಕುರಿಯನ್ನು ಕೊಟ್ಟಿತು. ಆದನ್ನು ತೆಗೆದುಕೊಂಡು ಬಂದನು. ಜಯಶೀಲ ಎಲ್ಲರಿಗೆ ದಾನ ಮಾಡಿ ಹೆಸರುವಾಸಿಯಾದನು.

ಒಮ್ಮೆ ಇವನ ದಾನ, ಧರ್ಮ, ಒಳ್ಳೆಯತನ ಪಕ್ಕದ ರಾಜ್ಯದ ರಾಜಕುಮಾರಿಗೂ ಗೊತ್ತಾಗಿ ಜಯಶೀಲನನ್ನು ನೋಡಲು ಬಂದಳು. ಅವನನ್ನು ನೋಡಿದೊಡನೆ ಮೋಹಗೊಂಡು, ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದಳು. ಜಯತೀಲ ಒಪ್ಪಿ ಮದುವೆಯಾದ. ಈ ವಿಷಯ ತಿಳಿದ ರಾಜಕುಮಾರಿಯ ತಂದೆ ಇವಳನ್ನು ಕರೆತಂದು ಸೆರೆಮನೆಗೆ ಅಟ್ಟಿದ. ವಿಷಯ ತಿಳಿದ ಜಯಶೀಲ ದುಃಖಿತನಾದ. ಆಗ ಕೋಳಿ ಮತ್ತು ಕುರಿ `ನೀನೇನು ಚಿಂತಿಸಬೇಡ, ರಾಜಕುಮಾರಿಯನ್ನು ನಾವು ಕರೆತರುತ್ತೇವೆ’ ಎಂದು ಹೇಳಿ ಅರಮನೆಯತ್ತ ಹೊರಟವು. ಅಲ್ಲಿ ಸೇವಕಿಯರ ವೇಷ ಧರಿಸಿದವು. ಸೆರೆಮನೆಯಲ್ಲಿ ಅಳುತ್ತ ಕುಳಿತಿರುವ ರಾಜಕುಮಾರಿಯನ್ನು ನೋಡಿ, ನೀನು ಅಳಬೇಡ ಜಯಶೀಲನ ಬಳಿ ಕರೆದೊಯ್ಯುತ್ತೇವೆ ಎಂದು ಹೇಳಿ ತಮ್ಮ ನಿಜ ರೂಪ ತಳೆದವು. ಅದನ್ನು ನೋಡಿ ಹೆದರಿದಳು ರಾಜಕುಮಾರಿ. `ಹೆದರಬೇಡ ನಾವು ನಿನಗೆ ಸಹಾಯ ಮಾಡುವೆವು. ನನ್ನ ಬೆನ್ನ ಮೇಲೆ ಕುಳಿತುಕೊ’ ಎಂದಿತು ಕುರಿ. ರಾಜಕುಮಾರಿ ಜತೆಗೆ ಕೋಳಿಯೊಂದಿಗೆ ಕುರಿಯ ಬೆನ್ನ ಮೇಲೆ ಕುಳಿತು ಬಂದಳು. ಇದನ್ನು ನೋಡಿದ ಜಯಶೀಲ ಸಂತೋಷಗೊಂಡ. ರಾಜಕುವಕಾರಿ, ಕೋಳಿ ಮತ್ತು ಕುರಿಯೊಂದಿಗೆ ನೆಮ್ಮದಿಯಿಂದ ಬಾಳಿದ ಜಯಶೀಲ.

     *****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...