Home / ಬಾಲ ಚಿಲುಮೆ / ಕಥೆ / ದಯಾಳು ಶ್ರೀಮಂತ

ದಯಾಳು ಶ್ರೀಮಂತ

ಒಂದು ಊರಿನಲ್ಲಿ ಜಯಶೀಲ ಎಂಬ ದಯಾಳು, ಶ್ರೀಮಂತ ಯುವಕನಿದ್ದ. ಒಮ್ಮೆ ಪಕ್ಕದ ಊರಿಗೆ ವ್ಯಾಪಾರಕ್ಕೆಂದು ಹೊರಟಿದ್ದ. ದಾರಿಯಲ್ಲಿ ಕೋಳಿಯನ್ನು ಬಲಿ ಕೊಡುವುದನ್ನು ನೋಡಿ ಆಲ್ಲಿಯ ಜನರಿಗೆ ಹೇಳಿದ: `ಅನ್ಯಾಯವಾಗಿ ಆ ಕೋಳಿಯನ್ನು ಕೊಲ್ಲಬೇಡಿ’ ಎಂದ. ಆದಕ್ಕೆ ಜನರು `ಅದರ ಪ್ರಾಣ ಉಳಿಸಬೇಕೆಂದರೆ ಸಾವಿರ ಬಂಗಾರದ ನಾಣ್ಯ ಕೊಡು’ ಎಂದರು. ಜಯಶೀಲ ಆವರಿಗೆ ಸಾವಿರ ಕೊಟ್ಟು ಕೋಳಿಯನ್ನು ತೆಗೆದುಕೊಂಡು ಹೊರಟ. ಮುಂದಿನ ಊರಿನಲ್ಲಿ ಮತ್ತೊಂದು ದೃಶ್ಯ ನೋಡಿದ ಅಲ್ಲಿಯ ಜನ ಕುರಿಯನ್ನು ಬಲಿ ಕೊಡುತ್ತಿದ್ದರು. `ಇದನ್ನು ಸಾಯಿಸಬೇಡಿ ನೀವು ಕೇಳಿದಷ್ಟು ಹಣ ಕೊಡುವೆ’ ಎಂದ. ಈ ಕುರಿಗೆ ಐದು ಸಾವಿರ ನಾಣ್ಯ ಕೊಟ್ಟರೆ ಬಿಟ್ಟುಬಿಡುವೆವು ಎಂದರು ಜನ. ಆವರಿಗೆ ಐದು ಸಾವಿರ ನಾಣ್ಯ ಕೊಟ್ಟು ಕುರಿಯನ್ನು ಕೊಂಡು ತನ್ನ ಊರಿಗೆ ಮರಳಿದ.

ಹೀಗೆ ಎಲ್ಲರಿಗೂ ದಾನ ಮಾಡಿ ಎಲ್ಲ ಆಸ್ತಿಯನ್ನೂ ಜಯಶೀಲ ಕಳೆದುಕೊಂಡ. ಇದನ್ನು ನೋಡಿದ ಕೋಳಿ ಮರುಗಿತು. `ಒಡೆಯಾ ನೀನೇನು ಯೋಚಿಸಬೇಡ. ಕಾಡಿನಲ್ಲಿ ನಮ್ಮ ಕೋಳಿಗಳಿಗೆ ಒಬ್ಬ ರಾಜನಿದ್ದಾನೆ. ಅವನು ನಿನಗೆ ಸಹಾಯ ಮಾಡುವನು ನಡೆ’ ಎಂದು ತಮ್ಮ ರಾಜನ ಬಳಿಗೆ ಕರೆದುಕೊಂಡು ಹೋಯಿತು. ಜಯಶೀಲನ ಪೂರ್ವಾಪರ ಏನೆಲ್ಲ ತಿಳಿದ ಕೋಳಿರಾಜ. `ನಾನು ನಿನಗೊಂದು ಬಂಗಾರದ ಮೊಟ್ಟೆ ಇಡುವ ಕೋಳಿ ಕೊಡುವೆ ತೆಗೆದುಕೋ’ ಎಂದಿತು. ಜಯಶೀಲ ಆ ಕೋಳಿಯನ್ನು ತೆಗೆದುಕೊಂಡು ತಮ್ಮೂರಿಗೆ ಹಿಂದಿರುಗಿದ. ಕೋಳಿ ಬಂಗಾರದ ಮೊಟ್ಟೆ ಇಡತೊಡಗಿತು. ಇದರಿಂದ ಜಯಶೀಲ ಶ್ರೀಮಂತನಾದ. ಒಮ್ಮೆ ಕುರಿ `ನಾನೂ ನಿನಗೆ ಏನಾದರೂ ಉಪಕಾರ ಮಾಡಬೇಕೆಂದಿರುವೆ. ಆದಕ್ಕೆ ನಮ್ಮ ಕುರಿ ಹಟ್ಟಿಗೆ ಹೋಗೋಣ. ಆಲ್ಲಿ ನಮ್ಮ ಕುರಿನಾಯಕ ಇದ್ದಾನೆ ಅವನು ನಿನಗೆ ಸಹಾಯ ಮಾಡುತ್ತಾನೆ’ ಎಂದು ಹೇಳಿ ಜಯಶೀಲನನ್ನು ಕರೆದುಕೂಂಡು ಹೋಯಿತು. ಅಲ್ಲಿ ಕುರಿ ನಾಯಕ ಆಪರೂಪದ ಬಂಗಾರದ ಉಣ್ಣೆ ಕೊಡುವ ಕುರಿಯನ್ನು ಕೊಟ್ಟಿತು. ಆದನ್ನು ತೆಗೆದುಕೊಂಡು ಬಂದನು. ಜಯಶೀಲ ಎಲ್ಲರಿಗೆ ದಾನ ಮಾಡಿ ಹೆಸರುವಾಸಿಯಾದನು.

ಒಮ್ಮೆ ಇವನ ದಾನ, ಧರ್ಮ, ಒಳ್ಳೆಯತನ ಪಕ್ಕದ ರಾಜ್ಯದ ರಾಜಕುಮಾರಿಗೂ ಗೊತ್ತಾಗಿ ಜಯಶೀಲನನ್ನು ನೋಡಲು ಬಂದಳು. ಅವನನ್ನು ನೋಡಿದೊಡನೆ ಮೋಹಗೊಂಡು, ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದಳು. ಜಯತೀಲ ಒಪ್ಪಿ ಮದುವೆಯಾದ. ಈ ವಿಷಯ ತಿಳಿದ ರಾಜಕುಮಾರಿಯ ತಂದೆ ಇವಳನ್ನು ಕರೆತಂದು ಸೆರೆಮನೆಗೆ ಅಟ್ಟಿದ. ವಿಷಯ ತಿಳಿದ ಜಯಶೀಲ ದುಃಖಿತನಾದ. ಆಗ ಕೋಳಿ ಮತ್ತು ಕುರಿ `ನೀನೇನು ಚಿಂತಿಸಬೇಡ, ರಾಜಕುಮಾರಿಯನ್ನು ನಾವು ಕರೆತರುತ್ತೇವೆ’ ಎಂದು ಹೇಳಿ ಅರಮನೆಯತ್ತ ಹೊರಟವು. ಅಲ್ಲಿ ಸೇವಕಿಯರ ವೇಷ ಧರಿಸಿದವು. ಸೆರೆಮನೆಯಲ್ಲಿ ಅಳುತ್ತ ಕುಳಿತಿರುವ ರಾಜಕುಮಾರಿಯನ್ನು ನೋಡಿ, ನೀನು ಅಳಬೇಡ ಜಯಶೀಲನ ಬಳಿ ಕರೆದೊಯ್ಯುತ್ತೇವೆ ಎಂದು ಹೇಳಿ ತಮ್ಮ ನಿಜ ರೂಪ ತಳೆದವು. ಅದನ್ನು ನೋಡಿ ಹೆದರಿದಳು ರಾಜಕುಮಾರಿ. `ಹೆದರಬೇಡ ನಾವು ನಿನಗೆ ಸಹಾಯ ಮಾಡುವೆವು. ನನ್ನ ಬೆನ್ನ ಮೇಲೆ ಕುಳಿತುಕೊ’ ಎಂದಿತು ಕುರಿ. ರಾಜಕುಮಾರಿ ಜತೆಗೆ ಕೋಳಿಯೊಂದಿಗೆ ಕುರಿಯ ಬೆನ್ನ ಮೇಲೆ ಕುಳಿತು ಬಂದಳು. ಇದನ್ನು ನೋಡಿದ ಜಯಶೀಲ ಸಂತೋಷಗೊಂಡ. ರಾಜಕುವಕಾರಿ, ಕೋಳಿ ಮತ್ತು ಕುರಿಯೊಂದಿಗೆ ನೆಮ್ಮದಿಯಿಂದ ಬಾಳಿದ ಜಯಶೀಲ.

     *****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...