Home / ಕವನ / ಕವಿತೆ / ಹೊಸಬರು

ಹೊಸಬರು

ಈ ಕೊಳ ಯಾಕೆ ಕೊಳಚೆಯಾಗಿದೆ?  ಎಂಜಲನ್ನ
ಯಾಕೆ ಬೀದಿಗೆಸೆಯುತ್ತೀರಿ?  ಇದೇನು ದೇವಸ್ಥಾನದ
ಮುಂದೆ ಮೂಗಿಗೆ ಹಿಡಿಯುವ ಘಾಟು?  ಅಚೀಚೆ
ಉಗಿಯುತ್ತ ಹೋಗುವ ಆ ಅವರು ಯಾರು?  ಇದು
ಬಸ್ಸು ನಿಲ್ದಾಣವೆ ಅಥವ… ಎಂಬಿತ್ಯಾದಿಯಾಗಿ ನೀವು
ಕೇಳಲಿ, ಕೇಳದೆ ಇರಲಿ, ನಿಮ್ಮ ಮುಖಭಾವದಿಂದಲೆ
ಗೊತ್ತಾಗುವುದು ನೀವು ಈ ಸ್ಥಳಕ್ಕೆ ಹೊಸಬರು ಎಂದು

ಹೊಸಬರಾದರೆ ನೀವು ಯಾರಿಂದಲೂ ತಪ್ಪಿಸಿಕೊಳ್ಳಲಾರಿರಿ
ಒಳಬೀದಿಯಲ್ಲಿ ನಡೆದಿರಿ;  ಹಳೆ ಹಂಚಿನ ಅಂಗಡಿ
ಗೂಡಿನೊಳಗೆ ಕುಳಿತಿರಿ;  ಕ್ಷೌರಿಕನಲ್ಲಿ ಕಾಯುತ್ತಿರಿ:
ಎಲ್ಲರೂ ನಿಮ್ಮನ್ನು ಗಮನಿಸುತ್ತಾರೆ.  ನಿಮ್ಮ ಅಂಗಿಯ
ಬಣ್ಣವನ್ನೂ, ತಲೆಗೂದಲಿನ ಉದ್ದವನ್ನೂ ಕಣ್ಣಿನಲ್ಲೆ
ಹಿಡಿದು ಬಿಡುತ್ತಾರೆ.  ಯಾರೋ ಹೇಳಿದರೆಂದು ನೀವು
ಸುಮ್ಮನೇ ಈ ಕಡೆ ಬಂದಿರಬಹುದು.  ಸುದ್ದಿಯಲ್ಲಿ
ಬೀಳುವುದು ನಿಮಗೆ ಇಷ್ಟವಿಲ್ಲದಿರಬಹುದು.  ಆದರೂ
ಸುದ್ದಿಯಿಂದ ತಪ್ಪಿಸಿಕೊಳ್ಳಲಾರಿರಿ ನೀವು.  ಕಾರಣ
ನೀವು ಪ್ರೀತಿಸಿ, ಮದುವೆಯಾಗಲಾರದ ಹುಡುಗಿ
ಇಲ್ಲೇ ಇದ್ದಾಳೆ.   ಆ ಮೇಲೆ ನೀವೆಂದೂ
ಹೊಸಬರಾಗಿ ಉಳಿಯುವುದಿಲ್ಲ ಇವರ ಮಧ್ಯೆ.

ಹೇಗೆ ಉಳಿಯುವುದು ಸಾಧ್ಯ? ಈ ಊರ
ಅನ್ನ ತಿಳಿ ಸಾರು, ಕಬ್ಬಿನ ಹಾಲು, ಅಂಗಡಿ ವ್ಯವಹಾರ
ಸೋಡ ಬೀಡ, ಜಗಳ, ಪ್ರೇಮ ಎಲ್ಲರಿಗೂ
ಒಂದೇ ಗುರುತು ಒತ್ತಿಬಿಡುತ್ತವೆ.  ಕ್ರಮೇಣ
ನೀವು ಇಲ್ಲಿನ ಸಭೆಗಳಲ್ಲಿ ಮಾತಾಡುತ್ತಿರುವುದನ್ನು ಕಂಡು
ನಿಮಗೇ ಆಶ್ಚರ್ಯವಾಗಬಹುದು.  ಈ ಆಶ್ಚರ್ಯವೂ
ಹೋಗುವುದು.  ಇನ್ನೆಂದೂ ನೀವು ಕಿರಿಕಿರಿಯ ಪ್ರಶ್ನೆಗಳನ್ನು
ಕೇಳುವುದಿಲ್ಲ.  ಅದಲ್ಲದೆ, ಹೊಸಬರಾಗಿಯೇ
ಉಳಿಯಬೇಕೆಂದು ಮಾಡಿದ್ದರೆ ನೀವು-
ನಿಮ್ಮ ಮುಂದಿನ ಬಸ್ಸು ಇನ್ನರ್ಧ ಗಂಟೆಯಲ್ಲಿ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...