Home / ಕವನ / ಕವಿತೆ / ಹಳೆ ಮಾರ್ಗಗಳು

ಹಳೆ ಮಾರ್ಗಗಳು


ಕುಂಬಳೆ ಮಂಜೇಶ್ವರ ಪೆರ್ಲ ಪುತ್ತೂರು
ಬದಿಯಡ್ಕ ಕಾರಡ್ಕ ಸುಳ್ಯ ಹೀಗೆ
ಇಲ್ಲಿಗೆ ಹಲವು ಮಾರ್ಗಗಳು ಬಂದು ಸೇರಿದವು
ಮೊದಲು ಯಾರೂ ಕಡಿಯಲಿಲ್ಲ ಇವನ್ನು
ಕವಿತೆಯ ಸಾಲುಗಳಂತೆ ಹುಟ್ಟಿದವು.


ನಡೆದದ್ದೆ ಮಾರ್ಗ ಆಗ.  ಹಾಗೆ ನಡೆದೇ
ತಲಪಿದವು ಈ ಪೇಟೆಯನ್ನು ಹಳ್ಳಿಗಳಿಂದ
ಮೊಣಕಾಲೆತ್ತರಕ್ಕೆ ಎಬ್ಬಿಸಿದವು ಕೆಂಪು ಮಣ್ಣು
ಮಳೆಗೆ ತೊಳೆದುಕೊಳ್ಳುವುದಕ್ಕಷ್ಟೆ.  ಅಲ್ಲದಿದ್ದರೆ
ನೆರೆನೀರಿಗೆಲ್ಲಿಂದ ಆ ತರದ ಬಣ್ಣ?


ನಡೆದವರಿಗೆ ಮಾತ್ರ ಗೊತ್ತು ಮಾರ್ಗಗಳ ಮರ್ಮ
ಎಲ್ಲಿ ಅವು ಮಾತು ತೆಗೆಯುತ್ತವೆ ಮತ್ತು ಎಲ್ಲಿ
ಮೌನವಾಗುತ್ತವೆ ಎಂದು. ಮನುಷ್ಯ ದುಃಖದ
ಬಗ್ಗೆ ದೊಡ್ಡದಾಗಿ ಹೇಳುವ ಈಗಿನವರು
ಹಳೆಯ ಮಾರ್ಗಗಳಲ್ಲೆಂದೂ ನಡೆದಿರಲಿಕ್ಕಿಲ್ಲ.


ನಡೆದ ನೆನಪಿದೆ ನನಗೆ ಅಂಥ ಕೊರಕಲುಗಳನ್ನು
ಬರಿಗಾಲಲ್ಲಿ, ಯಾವ ವಿಷಾದವೂ ಅನಿಸದೆ.  ಮೂವತ್ತು
ವರ್ಷಗಳ ಹಿಂದೆ ಕೋಟೂರ ಚಡವಿನಲ್ಲಿ
ಒಂದು ಇದ್ದಿಲ ಬಸ್ಸು ಕಾಣಿಸಿಕೊಂಡು
ಗದ್ದೆಗಳ ಮೇಲೆ ಧೂಳು ಹಾರಿಸಿ ಹೋದ ನೆನಪೂ ಉಂಟು


ನಂತರ ಇದೆಲ್ಲ ಹೇಗೆ ಬದಲಾಯಿತೆಂದು ತಿಳಿಯದು.
ಹಳೆ ಮಾರ್ಗಗಳೀಗ ಇದ್ದಲ್ಲೆ ಬೆಳೆದಿವೆ.
ಜಲ್ಲಿ ಹಾಸಿ ದಾಮರು ಹಾಕಿದ್ದಾರೆ.  ಅನೇಕ
ಮೋಟರುಗಳು ಓಡಾಡುತ್ತಿವೆ ದಿನಕ್ಕೆ.
ದೂರವನ್ನು ಮಿನಿಟುಗಳಲ್ಲಿ ಹೇಳುತ್ತಿದ್ದಾರೆ.


ಈ ಪೇಟೆಯ ಸೆರಗಿನಲ್ಲಿ ಹಾದು ಹೋಗಿದೆ
ಒಂದು ರಾಷ್ಟ್ರೀಯ ಹೆದ್ದಾರಿ.  ನಾವೂ ಸೇರಿದ್ದೇವೆ
ದೇಶದ ಸಾರಿಗೆ ವ್ಯವಸ್ಥೆಯಲ್ಲಿ.  ಆದರೂ
ಓಡುತ್ತಿದೆ ಹಳೆ ಮಾರ್ಗಗಳ ಬೆನ್ನು ಹತ್ತಿ ಮನಸ್ಸು
ಈಗಿಲ್ಲದ ಕಾಲಸಪ್ಪಳಗಳನ್ನು ಕೇಳಲು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...