ಲಿಂಗಮ್ಮನ ವಚನಗಳು – ೯

ಆಸೆಯುಳ್ಳನ್ನಕ್ಕ ರೋಷ ಬಿಡದು.
ಕಾಮವುಳ್ಳನ್ನಕ್ಕ ಕಳವಳ ಬಿಡದು.
ಕಾಯಗುಣವುಳ್ಳನ್ನಕ್ಕ ಜೀವನ ಬುದ್ಧಿ ಬಿಡದು.
ಭಾವವುಳ್ಳನ್ನಕ್ಕ ಬಯಕೆ ಸವೆಯದು.
ನಡೆಯುಳ್ಳನ್ನಕ್ಕ ನುಡಿಗೆಡದು.
ಇವೆಲ್ಲವು ಮುಂದಾಗಿರ್ದ್ದು ಹಿಂದನರಿದೆನೆಂಬ
ಸಂದೇಹಿಗಳಿರಾ ನೀವು ಕೇಳಿರೋ.
ನಮ್ಮ ಶರಣರು ಹಿಂದೆ ಹೀಗೆ
ಅರಿದರೆಂದರೆ, ಆಸೆಯನಳಿದರು.
ರೋಷವ ಹಿಂಗಿದರು.
ಕಾಮನ ಸುಟ್ಟು ಕಳವಳ ಹಿಂಗಿದರು.
ಕಾಯ ಗುಣವಳಿದು ಜೀವನ ಬುದ್ಧಿಯ ಹಿಂಗಿದರು.
ಭಾವವ ಬಯಲು ಮಾಡಿ ಬಯಕೆ ಸವೆದರು.
ಹಿಂದನರಿದು ಮುಂದೆ ಲಿಂಗವೆ ಗೂಡಾದ
ಶರಣರ ಈ ಸಂದೇಹಿಗಳೆತ್ತ ಬಲ್ಲರೊ
ಅಪ್ಪಣಪ್ರಿಯ ಚನ್ನಬಸವಣ್ಣಾ?
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ಯಾರಿ ನಗರ
Next post ನರ್ತಕಿ ಬಂದಳು

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…