Home / ಕವನ / ಕವಿತೆ / ಧೈರ್ಯ ಬೇಕು

ಧೈರ್ಯ ಬೇಕು

ದೊಡ್ಡ ಕೆಲಸದ ಮುಗಿದ ಮೇಲೆ | ಸಣ್ಣ ಕೆಲಸ ಮಾಡಲಿಕ್ಕೆ
ಧೈರ್ಯ ಬೇಕೂ ಅದಕೆ ಧೈರ್ಯ ಬೇಕು
ಸತ್ಯವನ್ನು ಮಿಥ್ಯ ಮುಚ್ಚಿ | ಎತ್ತಿ ತಲೆಯ ಮೆರೆಯುವಾಗ
ಅದರ ತಲೆಗೆ ಹೊಡೆಯಲಿಕ್ಕೆ
ಧೈರ್ಯ ಬೇಕೂ ಅದಕೆ ಧೈರ್ಯ ಬೇಕು

ಹೃದಯದಲ್ಲಿ ಶೋಕರಸವು ತುಟಿಯ ಮೇಲೆ ಹಾಸ್ಯ ರಸವು
ರಸದ ಇಂಥ ಕಲಬೆರಕೆಗೆ || ಧೈರ್ಯ….
ಸುತಮುತ್ತಲ ಕಡೆಗೆ | ಕತ್ತಲೊಂದೆ ತುಂಬಿದಾಗ
ಕಿರಣವನ್ನು ಕಾಣಲಿಕ್ಕೆ || ಧೈರ್ಯ….

ಸಂಶಯ ನಿರಾಶೆ ತುಂಬಿ | ಉಸಿರು ಕಟ್ಟಿ ಹೋಗುವಾಗ
ನಂಬಿಕೆಯಲಿ ತಲೆಯನೆತ್ತೆ || ಧೈರ್ಯ….
ನಮ್ಮ ಅಳುವೆ ಹೊರ ಒಳಗಿರೆ | ಇತರರಳುವ ತವಿಸಿ ನಗುವ
ಹೊಮ್ಮಿಸುವಾ ಸಾಹಸಕ್ಕೆ || ಧೈರ್ಯ….

ದೇಹಶಕ್ತಿ ಇಳಿದು ಹೋಗಿ | ದಿನದ ಕೆಲಸ ಸಪ್ಪೆಯಾಗಿ
ಇರುವ ಕಸವ ರಸ ಮಾಡಲು || ಧೈರ್ಯ….
ಮಾತುಗಳಿಗೆ ಬಣ್ಣ ಕೊಟ್ಟು| ಮೋಸ ಬಲೆಗೆ ಎಳೆಯುವಾಗ
ಇದ್ದುದಿದ್ದ ಹಾಗೆ ಪೇಳೆ || ಧೈರ್ಯ….

ನೀಚತನವು ದನಿಯನೆತ್ತಿ | ಎಳೆಯ ಸತ್ಯವನೊತ್ತಲು
ಎಳೆಯ ಲತೆಯು ಮರವಾಗಲು || ಧೈರ್ಯ….
ಗುಡ್ಡ ತಲೆಯ ಮೇಲೆ ಬಿದ್ದ| ರೀತಿಯಲ್ಲಿ ದುಃಖವಡಸೆ
ನಿನ್ನ ಇಚ್ಛೆ ದೇವ ಎನಲು || ಧೈರ್ಯ….
ವಿಧಿಯು ನಿನ್ನ ಬಲಗೆನ್ನೆಗೆ ಹೊಡೆತ ಕೊಡಲು ಸಿಟ್ಟಾಗದೆ
ನಿನ್ನ ಎಡದ ಕೆನ್ನೆ ಕೊಡಲು || ಧೈರ್ಯ….
ಕತ್ತಿ ಮದ್ದು ಗುಂಡುಗಳಲಿ ತೋರುವಂಥದಲ್ಲ ಧೈರ್ಯ
ಸೃಷ್ಟಿಯಲ್ಲಿ ಮಗುವು ಕೂಡ ಮಾಡಬಲ್ಲ ಸಹಜ ಧೈರ್ಯ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...