Home / ಕವನ / ಕವಿತೆ / ಅವರವರ ಚಾಳಿ

ಅವರವರ ಚಾಳಿ

ಎಲ್ಲರಿಗೂ ಒಂದೊಂದು ಚಾಳಿ
ಇರುವುದಿಲ್ಲವೆ, ಹೇಳಿ.

ಹಳೆ ಆಲದ ಮರದಿಂದ ತಲೆಕೆಳಗಾಗಿ ತೂಗುವ ಬೇತಾಳನಿಗೆ
ವಿಕ್ರಮಾದಿತ್ಯನ ಹೆಗಲಮೇಲೆ ಸವಾರಿ ಮಾಡುತ್ತ
ಅಮವಾಸ್ಯೆಯ ರಾತ್ರಿಗಳಲ್ಲಿ
ಸುಮ್ಮನೇ ಅವನ ಮೌನಮುರಿಯುವ ಕಥಾವಳಿ.

ಪ್ರಶ್ನೆಗಳನ್ನು ಹಾಕುತ್ತಲೇ ಸಂದೇಹಗಳನ್ನು ಎತ್ತುತ್ತಲೇ
ಸ್ವಸ್ಥರಿಗೆ ಸದಾ ತೊಂದರೆಕೊಟ್ಟ ಸಾಕ್ರೆಟೀಸನಿಗೆ
ಮರಣಶಯ್ಯೆಯಲ್ಲೂ ನೆನಪು
ಯಾವ ದೈವಕ್ಕೊ ತಾನು ಹರಕೆಹೊತ್ತ ಕೋಳಿ.

ದೇಶಭ್ರಷ್ಟನಾಗಿ ತನ್ನ ತ್ರಿಲೋಕಗಳನ್ನು ತಾನೆ ಸೃಷ್ಟಿಸಿಕೊಂಡು
ಎಂದೋ ಕಂಡು ಮತ್ತೆ ಕಾಣದ ಹುಡುಗಿ ಸ್ವರ್ಗದಲ್ಲಿ
ಕೈಹಿಡಿದು ನಡೆಸುತ್ತಿರುವಾಗಲೂ ಡಾಂಟೆಗೆ
ತನ್ನ ದೇಶದ ಬಗ್ಗೆ ಮರುಕಳಿಸುವ ಕಳಕಳಿ.

ಒಂಟಿ ಮರಗಳಿಂದಲೂ, ಕೊಳಗಳಿಂದಲೂ, ಕೊತ್ತಳಗಳಿಂದಲೂ
ತನ್ನ ಸ್ವಂತ ಪ್ರತೀಕಗಳನ್ನು ಆವಾಹಿಸುವಾಗ ಯೇಟ್ಸನಿಗೆ
ರೈಲು ನಿಲ್ದಾಣದಲ್ಲಿ ಹೀಗೆ
ಮಾಡ್‌ಗಾನ್ ಹಿಂದೆಸೆದು ನಿಂತ ನಿಲುವಳಿ.

ಮತ್ತೆ ಈ ಅರಬೀಸಮುದ್ರ ಮತ್ತು ಪಶ್ಚಿಮಘಟ್ಟಗಳ ನಡುವೆ
ಅ-ರಾಜಕೀಯವಾಗಿ ಬೆಳೆದಿದ್ದ ನಮಗೆ
೧೯೫೬ರಿಂದೀಚೆಗೆ
ಕಾಸರಗೋಡು ಕರ್ನಾಟಕ ಪ್ರಾಂತೀಕರಣ ಚಳುವಳಿ.

ಎಲ್ಲರಿಗೂ ಅವರವರ ಚಾಳಿ
ಇರುವುದಿಲ್ಲವೆ, ಹೇಳಿ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...