Home / ಕವನ / ಕವಿತೆ / ಅವರವರ ಚಾಳಿ

ಅವರವರ ಚಾಳಿ

ಎಲ್ಲರಿಗೂ ಒಂದೊಂದು ಚಾಳಿ
ಇರುವುದಿಲ್ಲವೆ, ಹೇಳಿ.

ಹಳೆ ಆಲದ ಮರದಿಂದ ತಲೆಕೆಳಗಾಗಿ ತೂಗುವ ಬೇತಾಳನಿಗೆ
ವಿಕ್ರಮಾದಿತ್ಯನ ಹೆಗಲಮೇಲೆ ಸವಾರಿ ಮಾಡುತ್ತ
ಅಮವಾಸ್ಯೆಯ ರಾತ್ರಿಗಳಲ್ಲಿ
ಸುಮ್ಮನೇ ಅವನ ಮೌನಮುರಿಯುವ ಕಥಾವಳಿ.

ಪ್ರಶ್ನೆಗಳನ್ನು ಹಾಕುತ್ತಲೇ ಸಂದೇಹಗಳನ್ನು ಎತ್ತುತ್ತಲೇ
ಸ್ವಸ್ಥರಿಗೆ ಸದಾ ತೊಂದರೆಕೊಟ್ಟ ಸಾಕ್ರೆಟೀಸನಿಗೆ
ಮರಣಶಯ್ಯೆಯಲ್ಲೂ ನೆನಪು
ಯಾವ ದೈವಕ್ಕೊ ತಾನು ಹರಕೆಹೊತ್ತ ಕೋಳಿ.

ದೇಶಭ್ರಷ್ಟನಾಗಿ ತನ್ನ ತ್ರಿಲೋಕಗಳನ್ನು ತಾನೆ ಸೃಷ್ಟಿಸಿಕೊಂಡು
ಎಂದೋ ಕಂಡು ಮತ್ತೆ ಕಾಣದ ಹುಡುಗಿ ಸ್ವರ್ಗದಲ್ಲಿ
ಕೈಹಿಡಿದು ನಡೆಸುತ್ತಿರುವಾಗಲೂ ಡಾಂಟೆಗೆ
ತನ್ನ ದೇಶದ ಬಗ್ಗೆ ಮರುಕಳಿಸುವ ಕಳಕಳಿ.

ಒಂಟಿ ಮರಗಳಿಂದಲೂ, ಕೊಳಗಳಿಂದಲೂ, ಕೊತ್ತಳಗಳಿಂದಲೂ
ತನ್ನ ಸ್ವಂತ ಪ್ರತೀಕಗಳನ್ನು ಆವಾಹಿಸುವಾಗ ಯೇಟ್ಸನಿಗೆ
ರೈಲು ನಿಲ್ದಾಣದಲ್ಲಿ ಹೀಗೆ
ಮಾಡ್‌ಗಾನ್ ಹಿಂದೆಸೆದು ನಿಂತ ನಿಲುವಳಿ.

ಮತ್ತೆ ಈ ಅರಬೀಸಮುದ್ರ ಮತ್ತು ಪಶ್ಚಿಮಘಟ್ಟಗಳ ನಡುವೆ
ಅ-ರಾಜಕೀಯವಾಗಿ ಬೆಳೆದಿದ್ದ ನಮಗೆ
೧೯೫೬ರಿಂದೀಚೆಗೆ
ಕಾಸರಗೋಡು ಕರ್ನಾಟಕ ಪ್ರಾಂತೀಕರಣ ಚಳುವಳಿ.

ಎಲ್ಲರಿಗೂ ಅವರವರ ಚಾಳಿ
ಇರುವುದಿಲ್ಲವೆ, ಹೇಳಿ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...