Home / ಕವನ / ಕವಿತೆ / ಹೈದರಾಬಾದಿನಲ್ಲಿ

ಹೈದರಾಬಾದಿನಲ್ಲಿ

ಮೊದಲು ಹವೆಯ ಬಗ್ಗೆ ಮಾತಾಡಿದೆವು
ಬಿಸಿಲ ಬೇಗೆ-ನೆಲದ ಧಗೆ-ಧೂಳು ಸುಳಿಗಾಳಿ
ಪಕೋಡಾ ಮಸಾಲೆ ಮೆಣಸು
ಕಾಯಿಸುವ ಹೊಗೆ
ಸೈಕಲು ರಿಕ್ಷಾಗಳ ಅಗತ್ಯ-ಅನಗತ್ಯ
ಎಮ್ಮೆಗಳ ಅಸಾಂಗತ್ಯ
ಹೈದರಾಬಾದಿನ ರಚನೆಯ ಕುರಿತು ಮಾತಾಡಿದೆವು
ವಾಸ್ತುಶಿಲ್ಪದ ಪ್ರಕಾರ
ಇದಕ್ಕೆ ಆಕಾರವಿಲ್ಲ ಆದರೆ
ನಡೆದಲ್ಲಿ ಬೆಳೆಯುವ
ನೋಡಿದಲ್ಲಿ ಏಳುವ
ಪವಾಡವಿದೆ
ನಿಜಾಮನನ್ನು ಬಯ್ದೆವು

ಒಬ್ಬರು ಹೇಳಿದರು-
ಹತ್ತು ವರ್ಷಗಳ ಕೆಳಗೆ
ನಾನೀ ನಗರವನ್ನು ಪ್ರೀತಿಸಿದ್ದೆ ಆಗ
ಗಾಳಿ ಬೆಳಕು ಮಳೆಯಿತ್ತು.  ಇಷ್ಟು ಜನ ಇರಲಿಲ್ಲ.
ಇನ್ನೊಬ್ಬರೆಂದರು-
ಹಿಂದೆ ಇದರ ಹೆಸರು ಭಾಗ್ಯನಗರ
ಒಂದು ಸಣ್ಣ ಪೇಟೆ
ಅದಕ್ಕೂ ಮೊದಲು ಇಲ್ಲಿ ಜನರೇ ಇರಲಿಲ್ಲ.
ಮೊತ್ತೊಬ್ಬರು ಕೇಳಿದರು-
ಹಾಗಾದರೆ ಈ ಶತಮಾನದ ಮೇಲೆ
ಇದರ ಅವಸ್ಥೆ ಏನು?
ಹೀಗೆ ಪ್ರಾಕ್ತನಾದ ರಹಸ್ಯ ಮತ್ತು
ಭವಿಷ್ಯದ ಆತಂಕದ ಮಧ್ಯೆ
ಹೈದರಾಬಾದಿಗಾಗಿ ನಾವು ಪರಿತಪಿಸಿದೆವು.

ನಾನೆಂದೆ-
ನನಗೆ ಈ ಹೈದರಾಬಾದು ಸುತ್ತಬೇಕು
ಇದರ ಆರಂಭ ಮತ್ತು ಅಂತ್ಯವನ್ನು ನೋಡಬೇಕು
ಇದರ ಜೋತುಬಿದ್ದ ಮಹಡಿಗಳನ್ನೂ
ಮತಾಡುತ್ತ ನಿಂತ ಮನುಷ್ಯರನ್ನೂ ದಾಟಿ
ಆಂಧ್ರಕ್ಕೆ ಆಂಧ್ರದಿಂದ ಹೊರಕ್ಕೆ
ತಲುಪುವ ದಾರಿಯನ್ನು ಕಂಡು ಹುಡುಕಬೇಕು.
ಆಚೆಗೆ ಕುಳಿತಿದ್ದ ವ್ಯಕ್ತಿಯೊಬ್ಬ ನಕ್ಕು ಹೇಳಿದ-
ಆಂಧ್ರವೆಂದರೆ ಇಂದಿರಾಗಾಂಧಿಯ ಸೀರೆ
ತೆಲಂಗಾಣ ಮಾತ್ರ ಬೇರೆ.
ನಾನು ತೆಲಂಗಾಣದ ಕವಿ.
ಯಾರೋ ಎತ್ತರದ ಧ್ವನಿಯಲ್ಲಿ ಹೇಳಿದರು-
ಎಲೆ ಕವಿ,
ನಿನಗೆ ಪ್ರಣಾಮ.  ನಿನಗಾಗಿ ನಾವು
ಎಷ್ಟು ಕಾಲದಿಂದ ಕಾಯುತ್ತಿಲ್ಲ!
ನಕ್ಸಲೀಯ,
ನಿನ್ನ ಗಡ್ಡ ಮೀಸೆಯ ಹಿಂದೆ ಮನುಷ್ಯ ಜನಾಂಗದ ಎಷ್ಟು
ಸಂಕಟವನ್ನು ಹಿಡಿದಿಟ್ಟಿದ್ದೀಯ.
ಅವನೆಂದ-
ನನ್ನ ನಕ್ಸಲೀಯ ಗೆಳೆಯನೊಬ್ಬ
ಮುಶೀರಾಬಾದ್ ಜೈಲಿನಿಲ್ಲಿದ್ದಾನೆ.
ಆತ ಕವಿತೆ ಬರೆಯಲಿಲ್ಲ.
ಆದರೂ ಕವಿಯಾಗಿದ್ದ.
ಆಮೇಲೆ ಎಲ್ಲರೂ ಕವಿತೆಯ ಬಗ್ಗೆ ಮಾತಾಡುತ್ತ ಕೂತರು.
ನಾನೆಂದೆ-
ನನಗೆ ಈ ಕೂಡಲೇ ಮುಶೀರಾಬಾದಿಗೆ ಹೋಗಬೇಕು.
ಯಾರು ಕೇಳಿಸಿಕೊಳ್ಳಲಿಲ್ಲ.

ಮತ್ತೆ ಹೊರ ಬಂದಾಗ ರಾತ್ರಿ ಬಹಳ ಸರಿದಿತ್ತು
ಅಬೀಡ್ಸಿನಿಂದ ಕೋಠಿಯ ನಡುವೆ
ಏನಿತ್ತು ಏನಿರಲಿಲ್ಲ
ಬೀದಿಯಲ್ಲಿ ಜನರಿದ್ದರೆ
ಇವರ ಕಣ್ಣುಗಳಲ್ಲಿ ಕಲ್ಲಿದ್ದಲೆ
ಯಾರೋ ನನ್ನನ್ನು ಕೂಗಿದರೆ
ನೆನಪಿಲ್ಲ
ಮಧ್ಯೆ ಒಂದೆರಡು ಬಾರಿ ಕಕ್ಕಿದ್ದು ಮಾತ್ರ ಗೊತ್ತು
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...