Home / ಕವನ / ಕವಿತೆ / ಮುಖಾಮುಖಿ

ಮುಖಾಮುಖಿ


ಪುಷ್ಟವಾದ ಒಂದು ಬೆಕ್ಕು ನನ್ನ ಮನೆಯ
ಡ್ರಾಯಿಂಗ್ ರೂಮಿನಲ್ಲಿ ಬಂದು ನನ್ನನ್ನು ಕಂಡು
ಹಠಾತ್ತನೆ ನಿಂತಿತು.  ಅಲ್ಲಿ ಅದು ನನ್ನನ್ನು ನಿರೀಕ್ಷಿಸಿರಲಾರದು.
ಇಲ್ಲ, ಸೋಮವಾರ ಎಲ್ಲರೂ ಅವರವರ ಆಫೀಸಿಗೆ
ಹೋಗಿರುವ ಅಪರಾಹ್ನವಂತೂ ಖಂಡಿತ ಇಲ್ಲ.
ತುಸು ಅಸಮಾಧಾನದಿಂದ ನನ್ನ ಕಡೆ ನೋಡಿತು.
ನಮ್ಮ ಕಣ್ಣುಗಳು ಪರಸ್ಪರ ನಟ್ಟು ಯಾರು ಮೊದಲು
ಮುಖ ತಿರುಗಿಸುವುದು ಎಂಬ ಒಂದು ವಿಧ
ಅಘೋಷಿತ ಯುದ್ಧದಲ್ಲಿ ಇಬ್ಬರೂ ತೊಡಗಿದೆವು.
ಒಂದು ಬೆಕ್ಕಿನ ಕಣ್ಣುಗಳು ಇಷ್ಟು ನಿಶ್ಚಲವಾಗಿರುತ್ತವೆ
ಎಂದು ನನಗೆ ಗೊತ್ತಿರಲಿಲ್ಲ.


ಸೆಟೆದ ಬಾಲ, ನಿಮಿರಿದ ಕೂದಲು, ಊರಿದ ಕಾಲುಗುರು-
ಒಟ್ಟಾರೆ ಹೂಡಿದ ಬಿಲ್ಲಿನಂತಿರುವ ಬೆಕ್ಕು
ಆಕ್ರಮಿಸಿತ್ತೀಗ ನನ್ನ ಇಡೀ ದೃಷ್ಟಿ ಪರಿಧಿಯನ್ನು-
ದಾರಿತಪ್ಪಿದಂತೆ ನಾನು ಚರಿತ್ರಪೂರ್ವ ಭೂಖಂಡಗಳಲ್ಲಿ
ಬಿದ್ದಂತೆ ಅಪರಿಚಿತ ಸಮುದ್ರಗಳಲ್ಲಿ.  ಆದರೂ
ಎವೆಯಿಕ್ಕಲಿಲ್ಲ ನಾನು.  ಎವೆಯಿಕ್ಕಲಿಲ್ಲ ಬೆಕ್ಕು.
ಮನುಷ್ಯ ಮತ್ತು ಮೃಗಕ್ಕೆ ಮೂಲಭೂತವಾದ
ಯಾವದೋ ಸ್ಥಿತಿವಿಶೇಷದಲ್ಲಿ ನಿಂತಿತ್ತು ನನ್ನೆದುರು
ಬೆಕ್ಕಿಗೆ ಬೆಕ್ಕೇ ಛಲವಾಗಿ.
ಒಂದು ಬೆಕ್ಕಿನ ಕಣ್ಣುಗಳು ಇಷ್ಟು ಅನಾಥವಾಗಿರುತ್ತವೆ
ಎಂದು ನನಗೆ ಗೊತ್ತಿರಲಿಲ್ಲ.


ಕೊನೆಗೂ ಸೋತದ್ದು ಮೃಗವೆ.  ಅಥವಾ ಹಾಗೆಂದುಕೊಂಡುದು
ನಾನು.  ಆ ಸೆಟೆದ ಮೈ ಕ್ರಮೇಣ ನುಸುಲಾಗಿ
ಹೊರಟು ಹೋಯಿತು ಬೆಕ್ಕು ಬೆಕ್ಕಿನ ಗತಿಯಲ್ಲಿ.
ಹೀಗೆ ನನ್ನ ದೃಷ್ಟಿ ಒಮ್ಮೆಲೆ ಖಾಲಿಯಾದಾಗ
ಅನಿಸಿತು ನನಗೆ-ಒಪ್ಪಿಕೊಳ್ಳಬಹುದಿತ್ತು ನಾನು
ಬೆಕ್ಕಿಗೆ ಬೆಕ್ಕಿನ ಸ್ವಾಭಿಮಾನ.  ಅಷ್ಟಕ್ಕೂ ನಾನು ಗಳಿಸಿದ್ದೇನು?
ಗೆದ್ದರೆ ಗೆಲ್ಲಬೇಕು ಬಹುಬಲಿಯಂತೆ-
ಬಿಟ್ಟುಕೊಡುವುದರಿಂದ.
ಒಂದು ಬೆಕ್ಕಿನ ಕಣ್ಣುಗಳಲ್ಲಿ ಇಷ್ಟೊಂದು ವಿಷಾದವಿರುತ್ತದೆ
ಎಂದು ನನಗೆ ಗೊತ್ತಿರಲಿಲ್ಲ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...