Home / ಕವನ / ಕವಿತೆ / ದೊಡ್ಡ ಜನರು

ದೊಡ್ಡ ಜನರು

ಈ ಕಿಟಕಿ ಈ ಬಾಗಿಲುಗಳ ಹಲಸು ಬೀಟೆ ಹೆಮ್ಮರಗಳನ್ನು
ಹಳೆ ಕಾಡುಗಳಿಂದ ಉರುಳಿಸಿದರು.  ಚಿತ್ತಾರದ ಮಂಚಗಳನ್ನು
ಪಳಗಿದ ಕೆಲಸದವರಿಂದ ಮಾಡಿಸಿದರು.  ನೆಲಕ್ಕೆ ಹಾಸಿದ ಬಣ್ಣಬಣ್ಣದ
ಕಲ್ಲುಗಳನ್ನು ಬಹುದೂರದಿಂದ ತರಿಸಿದರು.  ಪಡಸಾಲೆಯಲ್ಲಿ ತೂಗಿದ
ಬೃಹತ್ತಾದ ತೈಲಚಿತ್ರಗಳು ಹಿರಿಯರದು.  ಆ ಮೂಲೆಯಲ್ಲೊಂದು
ಎರಕದ ಬುದ್ಧ. ಇಲ್ಲೊಂದು ಕಪ್ಪು ಶಿಲೆಯ ಗೊಮ್ಮಟ.
ದೊಡ್ಡ ಜನರು ದೊಡ್ಡ ಮನೆಗಳಲ್ಲಿ ವಾಸ ಮಾಡುತ್ತಾರೆ.

ಸರ್ವಸೇವಾ ಸಂಸ್ಥೆಯ ಅಧ್ಯಕ್ಷಿಣಿ ಕಾಮಾಕ್ಷಮ್ಮ
ನೆಲ ಮುಟ್ಟಿದ್ದೆ ಅಪರೂಪ.  ಚಿನ್ನದ ಬಣ್ಣದ ಸಾಂಡಲುಗಳನ್ನು
ಸ್ನಾನಗೃಹದ ಹೊರಗೊಮ್ಮೆ, ಶಯನಗೃಹದ ಒಳಗೊಮ್ಮೆ
ತೆಗೆಯುತ್ತಾರಷ್ಟೆ. ಮತ್ತೆ ಒಂದು ರಾಬಿನ್ಸನೊಂದಿಗೇ
ಒಂದು ಭೈರಪ್ಪನೊಂದಿಗೋ ಮೆತ್ತೆಯಲ್ಲಿ ಮಲಗಿ ನಿದ್ದೆಹೋದರೆ
ಎಬ್ಬಿಸಬೇಕು ಅಡಿಗೆಯವಳು ಅಥವ ಸ್ಥಳೀಯ ಮುಖಂಡರು.
ದೊಡ್ಡ ಜನರು ದೊಡ್ಡ ಹೆಂಗಸರನ್ನು ಮದುವೆಯಾಗುತ್ತಾರೆ.

ಬೇಸಿಗೆಯ ಇಳಿಹೊತ್ತಿನಲ್ಲಿ ಹೊರಗೆ ಕುಳಿತುಕೊಳ್ಳುವುದು ಆರಾಮ.
ಗುಲ್ಮೊಹರ್‍ ಮರಗಳ ಕೆಳಗೆ ಬೆತ್ತದ ಆಸನಗಳನ್ನು ಹಾಕಿದೆ.
ಟೀಪಾಯಿಯ ಮೇಲೆ ಚಹಾದ ಕೆಟ್ಟಲು ಕಪ್ಪುಗಳು.
ಸೆಕೆಗಾಲದಲ್ಲಿ ಲಿಂಬೆಹಣ್ಣಿನ ಚಹಾವನ್ನೆ ಎಲ್ಲರೂ ಇಷ್ಟಪಡುತ್ತಾರೆ.
ಮಾನವೀಯ ಹಕ್ಕುಗಳೆ? ನೇಪಾಳವನ್ನು ತಗೊಳ್ಳಿ, ಉದಾಹರಣೆಗೆ.
ಹಿಂದೆ ನಾನು ಡಾರ್ಜೀಲಿಂಗಿನಲ್ಲಿದ್ದಾಗ ಒಬ್ಬಳು ನೇಪಾಳಿ ಸಿಕ್ಕಿದಳು.
ದೊಡ್ಡ ಜನರು ದೊಡ್ಡ ಸಂಗತಿಗಳನ್ನು ಚರ್ಚಿಸುತ್ತಾರೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...