Home / ಕವನ / ಕವಿತೆ / ದೊಡ್ಡ ಜನರು

ದೊಡ್ಡ ಜನರು

ಈ ಕಿಟಕಿ ಈ ಬಾಗಿಲುಗಳ ಹಲಸು ಬೀಟೆ ಹೆಮ್ಮರಗಳನ್ನು
ಹಳೆ ಕಾಡುಗಳಿಂದ ಉರುಳಿಸಿದರು.  ಚಿತ್ತಾರದ ಮಂಚಗಳನ್ನು
ಪಳಗಿದ ಕೆಲಸದವರಿಂದ ಮಾಡಿಸಿದರು.  ನೆಲಕ್ಕೆ ಹಾಸಿದ ಬಣ್ಣಬಣ್ಣದ
ಕಲ್ಲುಗಳನ್ನು ಬಹುದೂರದಿಂದ ತರಿಸಿದರು.  ಪಡಸಾಲೆಯಲ್ಲಿ ತೂಗಿದ
ಬೃಹತ್ತಾದ ತೈಲಚಿತ್ರಗಳು ಹಿರಿಯರದು.  ಆ ಮೂಲೆಯಲ್ಲೊಂದು
ಎರಕದ ಬುದ್ಧ. ಇಲ್ಲೊಂದು ಕಪ್ಪು ಶಿಲೆಯ ಗೊಮ್ಮಟ.
ದೊಡ್ಡ ಜನರು ದೊಡ್ಡ ಮನೆಗಳಲ್ಲಿ ವಾಸ ಮಾಡುತ್ತಾರೆ.

ಸರ್ವಸೇವಾ ಸಂಸ್ಥೆಯ ಅಧ್ಯಕ್ಷಿಣಿ ಕಾಮಾಕ್ಷಮ್ಮ
ನೆಲ ಮುಟ್ಟಿದ್ದೆ ಅಪರೂಪ.  ಚಿನ್ನದ ಬಣ್ಣದ ಸಾಂಡಲುಗಳನ್ನು
ಸ್ನಾನಗೃಹದ ಹೊರಗೊಮ್ಮೆ, ಶಯನಗೃಹದ ಒಳಗೊಮ್ಮೆ
ತೆಗೆಯುತ್ತಾರಷ್ಟೆ. ಮತ್ತೆ ಒಂದು ರಾಬಿನ್ಸನೊಂದಿಗೇ
ಒಂದು ಭೈರಪ್ಪನೊಂದಿಗೋ ಮೆತ್ತೆಯಲ್ಲಿ ಮಲಗಿ ನಿದ್ದೆಹೋದರೆ
ಎಬ್ಬಿಸಬೇಕು ಅಡಿಗೆಯವಳು ಅಥವ ಸ್ಥಳೀಯ ಮುಖಂಡರು.
ದೊಡ್ಡ ಜನರು ದೊಡ್ಡ ಹೆಂಗಸರನ್ನು ಮದುವೆಯಾಗುತ್ತಾರೆ.

ಬೇಸಿಗೆಯ ಇಳಿಹೊತ್ತಿನಲ್ಲಿ ಹೊರಗೆ ಕುಳಿತುಕೊಳ್ಳುವುದು ಆರಾಮ.
ಗುಲ್ಮೊಹರ್‍ ಮರಗಳ ಕೆಳಗೆ ಬೆತ್ತದ ಆಸನಗಳನ್ನು ಹಾಕಿದೆ.
ಟೀಪಾಯಿಯ ಮೇಲೆ ಚಹಾದ ಕೆಟ್ಟಲು ಕಪ್ಪುಗಳು.
ಸೆಕೆಗಾಲದಲ್ಲಿ ಲಿಂಬೆಹಣ್ಣಿನ ಚಹಾವನ್ನೆ ಎಲ್ಲರೂ ಇಷ್ಟಪಡುತ್ತಾರೆ.
ಮಾನವೀಯ ಹಕ್ಕುಗಳೆ? ನೇಪಾಳವನ್ನು ತಗೊಳ್ಳಿ, ಉದಾಹರಣೆಗೆ.
ಹಿಂದೆ ನಾನು ಡಾರ್ಜೀಲಿಂಗಿನಲ್ಲಿದ್ದಾಗ ಒಬ್ಬಳು ನೇಪಾಳಿ ಸಿಕ್ಕಿದಳು.
ದೊಡ್ಡ ಜನರು ದೊಡ್ಡ ಸಂಗತಿಗಳನ್ನು ಚರ್ಚಿಸುತ್ತಾರೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...