Home / ಕವನ / ಕವಿತೆ / ಒಂದು ಬೂದುಗುಂಬಳಕಾಯಿಯ ಮೇಲೆ ನಿಂತು

ಒಂದು ಬೂದುಗುಂಬಳಕಾಯಿಯ ಮೇಲೆ ನಿಂತು

ಒಂದು ಬೂದುಗುಂಬಳಕಾಯಿಯ ಮೇಲೆ ನಿಂತು ನೋಡಿದರೆ
ಈ ಲೋಕ ಎಷ್ಟು ವಿಚಿತ್ರ-ಆದರೆ ನಿಜವಾಗುತ್ತದೆ!
ಮೊದಲು ಏರುತಗ್ಗುಗಳು ಗೋಚರಿಸುತ್ತವೆ.  ಮತ್ತೆ
ದಿಗಂತಗಳು ಬಳುಕುತ್ತವೆ, ಆಯತಗಳು
ತ್ರಿಕೋಣಗಳಾಗುತ್ತವೆ, ವೃತ್ತಗಳಾಗುತ್ತವೆ.  ಯಾರೂ
ಇದು ತನಕ ಕಲ್ಪಿಸದ ವಿನ್ಯಾಸಗಳು ಕಾಣಿಸುತ್ತವೆ.

ಒಂದು ಬೂದುಗುಂಬಳಕಾಯಿಯ ಮೇಲೆ ನಿಂತು ನೋಡಿದರೆ
ಯಾಕೆ ವಾಮನ ಮಾಸ್ತರರು ತಮ್ಮಷ್ಟಕ್ಕೇ ಮಾತಾಡುತ್ತಾರೆ
ಎಂಬುದಕ್ಕೆ ಕಾರಣ ಸಿಗುತ್ತದೆ.  ನಳನಿಯ ನಾಚಿಕೆ
ಹೇಗೆ ಒಮ್ಮೆಲೆ ನಷ್ಟವಾಯಿತು ಎಂಬುದು ಗೊತ್ತಾಗುತ್ತದೆ.
ಮುಖ್ಯ, ತಾಲೂಕಾಪೀಸು ಯಾಕೆ ತಲೂಕಾಪೀಸಾಗಿದೆ
ಎಂಬುದು ಅರ್ಥವಾಗುತ್ತದೆ.

ಒಂದು ಬೂದುಗುಂಬಳಕಾಯಿಯ ಮೇಲೆ ನಿಂತು ನೋಡಿದರೆ
ಮನುಷ್ಯರು ಯಾಕೆ ಕಾರಣವಿಲ್ಲದೆ ಭಯಪಡುತ್ತಾರೆ
ಎಂಬುದು ತಿಳಿಯುತ್ತದೆ.  ಯಾವಾಗಲೂ ಕಾಲಮೇಲೇ
ನಡೆಯುವವರು ಕೆಳಗಿನಿಂದ ಮೇಲೆ ನೋಡಲಾರರು.
ಯಾವಾಗಲೂ ಮುಂದೆ ನೋಡುವವರು ಹಿಂದೆ ಕಾಣಲಾರರು.  ಹೀಗಿದ್ದೂ
ಒಪ್ಪಿಕೊಳ್ಳದವರನ್ನು ಇಲ್ಲಿ ತಂದು ನಿಲ್ಲಿಸಿ!

ಒಂದು ಬೂದುಗುಂಬಳಕಾಯಿಯ ಮೇಲೆ ನಿಂತು ನೋಡುವುದೆಂದರೆ
ನಾವು ನಮ್ಮನ್ನು ನಿಜವಾದ ಸಂದರ್ಭದಲ್ಲಿ ನಿಲ್ಲಿಸಿದಂತೆ,
ತಕ್ಷಣ ಗುರುತಿಸಿದಂತೆ.  ಒಂದು ಬೂದುಗುಂಬಳಕಾಯಿಯ ಮೇಲೆ
ನಿಲ್ಲದಿದ್ದರು ಕೂಡ ನಿಮಗೆ ಹಾಗೆನಿಸುತ್ತಿದ್ದರೆ
ಕಾರಣ ಇಷ್ಟೆ:  ಈ ಭೂಮಿಯ ಕೆಳಗೆ ನಿಜಕ್ಕೂ
ಒಂದು ದೊಡ್ಡ ಬೂದುಗುಂಬಳಕಾಯಿ ಇದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...