Home / ಕವನ / ಕವಿತೆ / ನಮ್ಮೂರ ವಾಡೆ

ನಮ್ಮೂರ ವಾಡೆ

ಅದಽ ಹೋದವರ್ಷ ಬಸವ ಜಯಂತಿಗೆ
ಹೋಗಿದ್ದೆ ನಮ್ಮಜ್ಜಜ್ಜರ (ಪಾಟೀಲರ) ವಾಡೆಗೆ
ಊರಿಗೆಽ ದೊಡ್ಡದು
ಅಗಲಕ್ಕೆ ನೂರು ಉದ್ದಕ್ಕೆ ಎರಡನೂರ ಫೂಟಽರ
ಇರಬೇಕ ಮನಿ
ಈ ಓಣಿಯಿಂದ ಆ ಓಣಿಗೆ ಅಂತ
ಒಂದಽ ಮಾತಿನ್ಯಾಗ ಹೇಳಿದ್ರೂನೂ ಸಾಽಕ
ನಸಿಕಿನ್ಯಾಗ ಒಮ್ಮೆ ಬಾಗಿಲಾ ತೆಗಿದ್ರ
ರಾತ್ರಿಽನ ಮುಚ್ಚಿ ಅಗಳಿ ಹಾಕಾವ್ರು
ಗೌಡರ ದರ್ಬಾರ ಮೊನ್ನ ಮೊನ್ನೆವರೆಗೂ
ಹೇಳಿ ನಮ್ಮ ಅಜ್ಜಿ ಕಣ್ಣಮುಚ್ಚಿಗೊಂತು
ಈಽಗ, ಮನಿ ಅನ್ನೋದು ಗೋಡೌನ ಆಗೈತಿ
ಕಾಕಾ ದೊಡ್ಡಪ್ಪಗೋಽಳ ದೊಡ್ಡ ಸಂಸಾರದಾಗ.
ನಾವಽ ಹೋದಾಗ ಬಂದಾಗರೇಽ
ಇರವಲ್ದ್ಯಾಕ ಅಂತ
ಹೊರಗಿನ ಎರಡು ಮೂರು ಕೋಲಿಗೆ
modern touch up ಮಾಡಿಸಿ
ಕರ್ಟನ್, ಸೋಫಾಸೆಟ್ಟು ಕಲರ್ ಟ.ವಿ.
ಟೆಲಿಫೋನ ಹಾಕಿಸಿ ಮತ್ತೆ
ಇಡ್ಲಿ ಊರಿಗೆ ಬಂದೆ.
ನಡುವ ದಸರಾ ದೀಪಾವಳಿ ಅಂತ
ಮತ್ತೊಮ್ಮೆ ಊರಿಗೆ ಹೋಗಿದ್ನಿ
ಸೋಫಾಮ್ಯಾಲ – ಅದಽ ಹೊಲದಿಂದ ತಂದ
ಕಾಯಿಪಲ್ಲೆ ಗಂಟು, T.V. ಮ್ಯಾಲ –
ಹೊಲದ ಮನಿ ಎಂಜಿನ್ ಮನಿ ಕೀಲಿಗೋಳು
Telephone billನ ಉದ್ದನ ಪಟ್ಟಿ

ಕರ್ಟನ್ ಗೊತ್ತಽ ಹತ್ತಲಿಲ್ಲ,
ಹುಡುಗ್ರು ಪೆನ್‌ಮಸಿ ಬರೆಸಿದ್ರು
ಆಳ ಬಸ್ಯಾ ಟ್ರಾಕ್ಟರ ರಿಪೇರಿ ಮಾಡಿ
ಗ್ರೀಸ ಕೈಯಿಂದ ಒರೆಸಿದ್ದು
ಆಳ ಹೆಂಗಸ್ರು ಬುಟ್ಟಿ ಮರಾ ಒರೆಸಿದ್ದು
ಮನಿ ಹೆಂಸ್ಸ್ರು ಎಣ್ಣಿ ಬೆಣ್ಣಿ ಕೈ ಒರೆಸಿದ್ದು
ಮತ್ತಽ ಮಕ್ಕಳ ಸಿಂಬಳಾ ಒರೆಸಿದ್ದು
ಎಲ್ಲಾ ಕಲಿಗೋಳು ಒಂದೊಂದಾಗಿ
ಕಾಣಾಕ ಸುರುವಾದ್ವು
ರಕ್ತ ನೆತ್ತಿಗೇರಾಕ ಸುರುವಾತು
ಹಂಗಽ ಹಂಗಽ ಹಬ್ಬಾಮುಗಿಸಿ
ಸ್ವಚ್ಛ ಶಿಸ್ತಿನ ಬಗ್ಗೆ ಭಾಷಣಾ ಮಾಡಿ,
ಮತ್ತ ದೋಸಾ ಊರಿಗೆ ಬಂದೆ,
ಈ ವರ್ಷ ಈ ಬಸವ ಜಯಂತಿಗೆ
ನಮ್ಮೂರಾಽಗ ಆದೇಽನ.
ಸೋಫಾ, ಟಿ.ವಿ. ಎಲ್ಲಾ ಮೂಲ್ಯಾಗ ಸರಿಸಿ
ಕಾಳ ಕಡಿ ಸ್ವಚ್ಛ ಮಾಡಾಕ್ಹತ್ತಾರ
ಹಿಂದಿನ ಓಣಿಗೆ ಹತ್ತಿದ ಅಡಗಿ ಮನ್ಯಾಗ
ಹಬ್ಬದ ತಿಂಡಿ ಮಾಡಾಕ್ಹತ್ತಾರ
ನಡುಮನ್ಯಾಗ ಅವರವರ ಮಕ್ಕಳು
ಊರಿಂದ ಕೇರಿಂದ ಬಂದಾವ್ರು
ಸೂಟಿ ಅಂತ ಕುಣಿದಾಡಕ್ಹತ್ತಾರ,
ಹಾಂಽಗ ಅಡುಗೆ ಮನಿಗೆ ಹೋದೆ
ಕರ್ಟನ್‌ ತುಣುಕುಗೋಳು
ಮಸಿ ಅರುವಿ ಆಗ್ಯಾವ
ಡಬ್ಬಿ ಕಟ್ಟಾಽಕ, ಕಾಲ ಒರಸಾಕ
ಹರಿದಾಡಿ ಒಗದ್ದಾರ,
ಆಗಿಂದ ನೋಡಿ ನೋಡಿ
ಪಿತ್ತನೆತ್ತಿಗೇರಿ ಒದರ್‍ಯಾಡಾಕ
ಸುರು ಮಾಡ್ನಿ –
ಪಾಟಿಲ್ರ ವಾಡೆ ಅಂದ್ರಽ ಹಿಂಗಽ ಇರಬೇಕು
ಮಗಳ
ಪ್ಯಾಟ್ಯಾಗಿನ ಬಂಗ್ಲಽ ಹಂಗ ಮಾಡಬ್ಯಾಡ್ರಿ
ಮುಚ್ಚಿ ಬಾಗಿಲಾ ಹಿತ್ತಲ ಬಾಗಿಲಾ
ಯಾವತ್ತೂಽ ತೆಗೆದಿರಲಿ
ಆಳ ಕಾಳ, ಮಕ್ಳ ಮರಿ
ನೆರಿ ಹೊರಿ, ದನಾ ಕರಾ ಎಲ್ಲಾ ಬರ್‍ಲಿ ಹೋಗ್ಲಿ
ತಿಣ್ಣಿ ಉಣ್ಣಿ ಉಡಲಿ
ಅಂದ, ನಮ್ಮಜ್ಜನ ಎರಡನೇ ಹೆಂಡತಿ
ನಮ್ಮಜ್ಜಿ ಪಾರ್ವತವ್ವನ ಮಾತ ಕೇಳಿ
ಗೊದಮೊಟ್ಟೆ ಹಂಗಾಽತ ನನ ಮನಸ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...