Home / ಕವನ / ಕವಿತೆ / ನಮ್ಮೂರ ವಾಡೆ

ನಮ್ಮೂರ ವಾಡೆ

ಅದಽ ಹೋದವರ್ಷ ಬಸವ ಜಯಂತಿಗೆ
ಹೋಗಿದ್ದೆ ನಮ್ಮಜ್ಜಜ್ಜರ (ಪಾಟೀಲರ) ವಾಡೆಗೆ
ಊರಿಗೆಽ ದೊಡ್ಡದು
ಅಗಲಕ್ಕೆ ನೂರು ಉದ್ದಕ್ಕೆ ಎರಡನೂರ ಫೂಟಽರ
ಇರಬೇಕ ಮನಿ
ಈ ಓಣಿಯಿಂದ ಆ ಓಣಿಗೆ ಅಂತ
ಒಂದಽ ಮಾತಿನ್ಯಾಗ ಹೇಳಿದ್ರೂನೂ ಸಾಽಕ
ನಸಿಕಿನ್ಯಾಗ ಒಮ್ಮೆ ಬಾಗಿಲಾ ತೆಗಿದ್ರ
ರಾತ್ರಿಽನ ಮುಚ್ಚಿ ಅಗಳಿ ಹಾಕಾವ್ರು
ಗೌಡರ ದರ್ಬಾರ ಮೊನ್ನ ಮೊನ್ನೆವರೆಗೂ
ಹೇಳಿ ನಮ್ಮ ಅಜ್ಜಿ ಕಣ್ಣಮುಚ್ಚಿಗೊಂತು
ಈಽಗ, ಮನಿ ಅನ್ನೋದು ಗೋಡೌನ ಆಗೈತಿ
ಕಾಕಾ ದೊಡ್ಡಪ್ಪಗೋಽಳ ದೊಡ್ಡ ಸಂಸಾರದಾಗ.
ನಾವಽ ಹೋದಾಗ ಬಂದಾಗರೇಽ
ಇರವಲ್ದ್ಯಾಕ ಅಂತ
ಹೊರಗಿನ ಎರಡು ಮೂರು ಕೋಲಿಗೆ
modern touch up ಮಾಡಿಸಿ
ಕರ್ಟನ್, ಸೋಫಾಸೆಟ್ಟು ಕಲರ್ ಟ.ವಿ.
ಟೆಲಿಫೋನ ಹಾಕಿಸಿ ಮತ್ತೆ
ಇಡ್ಲಿ ಊರಿಗೆ ಬಂದೆ.
ನಡುವ ದಸರಾ ದೀಪಾವಳಿ ಅಂತ
ಮತ್ತೊಮ್ಮೆ ಊರಿಗೆ ಹೋಗಿದ್ನಿ
ಸೋಫಾಮ್ಯಾಲ – ಅದಽ ಹೊಲದಿಂದ ತಂದ
ಕಾಯಿಪಲ್ಲೆ ಗಂಟು, T.V. ಮ್ಯಾಲ –
ಹೊಲದ ಮನಿ ಎಂಜಿನ್ ಮನಿ ಕೀಲಿಗೋಳು
Telephone billನ ಉದ್ದನ ಪಟ್ಟಿ

ಕರ್ಟನ್ ಗೊತ್ತಽ ಹತ್ತಲಿಲ್ಲ,
ಹುಡುಗ್ರು ಪೆನ್‌ಮಸಿ ಬರೆಸಿದ್ರು
ಆಳ ಬಸ್ಯಾ ಟ್ರಾಕ್ಟರ ರಿಪೇರಿ ಮಾಡಿ
ಗ್ರೀಸ ಕೈಯಿಂದ ಒರೆಸಿದ್ದು
ಆಳ ಹೆಂಗಸ್ರು ಬುಟ್ಟಿ ಮರಾ ಒರೆಸಿದ್ದು
ಮನಿ ಹೆಂಸ್ಸ್ರು ಎಣ್ಣಿ ಬೆಣ್ಣಿ ಕೈ ಒರೆಸಿದ್ದು
ಮತ್ತಽ ಮಕ್ಕಳ ಸಿಂಬಳಾ ಒರೆಸಿದ್ದು
ಎಲ್ಲಾ ಕಲಿಗೋಳು ಒಂದೊಂದಾಗಿ
ಕಾಣಾಕ ಸುರುವಾದ್ವು
ರಕ್ತ ನೆತ್ತಿಗೇರಾಕ ಸುರುವಾತು
ಹಂಗಽ ಹಂಗಽ ಹಬ್ಬಾಮುಗಿಸಿ
ಸ್ವಚ್ಛ ಶಿಸ್ತಿನ ಬಗ್ಗೆ ಭಾಷಣಾ ಮಾಡಿ,
ಮತ್ತ ದೋಸಾ ಊರಿಗೆ ಬಂದೆ,
ಈ ವರ್ಷ ಈ ಬಸವ ಜಯಂತಿಗೆ
ನಮ್ಮೂರಾಽಗ ಆದೇಽನ.
ಸೋಫಾ, ಟಿ.ವಿ. ಎಲ್ಲಾ ಮೂಲ್ಯಾಗ ಸರಿಸಿ
ಕಾಳ ಕಡಿ ಸ್ವಚ್ಛ ಮಾಡಾಕ್ಹತ್ತಾರ
ಹಿಂದಿನ ಓಣಿಗೆ ಹತ್ತಿದ ಅಡಗಿ ಮನ್ಯಾಗ
ಹಬ್ಬದ ತಿಂಡಿ ಮಾಡಾಕ್ಹತ್ತಾರ
ನಡುಮನ್ಯಾಗ ಅವರವರ ಮಕ್ಕಳು
ಊರಿಂದ ಕೇರಿಂದ ಬಂದಾವ್ರು
ಸೂಟಿ ಅಂತ ಕುಣಿದಾಡಕ್ಹತ್ತಾರ,
ಹಾಂಽಗ ಅಡುಗೆ ಮನಿಗೆ ಹೋದೆ
ಕರ್ಟನ್‌ ತುಣುಕುಗೋಳು
ಮಸಿ ಅರುವಿ ಆಗ್ಯಾವ
ಡಬ್ಬಿ ಕಟ್ಟಾಽಕ, ಕಾಲ ಒರಸಾಕ
ಹರಿದಾಡಿ ಒಗದ್ದಾರ,
ಆಗಿಂದ ನೋಡಿ ನೋಡಿ
ಪಿತ್ತನೆತ್ತಿಗೇರಿ ಒದರ್‍ಯಾಡಾಕ
ಸುರು ಮಾಡ್ನಿ –
ಪಾಟಿಲ್ರ ವಾಡೆ ಅಂದ್ರಽ ಹಿಂಗಽ ಇರಬೇಕು
ಮಗಳ
ಪ್ಯಾಟ್ಯಾಗಿನ ಬಂಗ್ಲಽ ಹಂಗ ಮಾಡಬ್ಯಾಡ್ರಿ
ಮುಚ್ಚಿ ಬಾಗಿಲಾ ಹಿತ್ತಲ ಬಾಗಿಲಾ
ಯಾವತ್ತೂಽ ತೆಗೆದಿರಲಿ
ಆಳ ಕಾಳ, ಮಕ್ಳ ಮರಿ
ನೆರಿ ಹೊರಿ, ದನಾ ಕರಾ ಎಲ್ಲಾ ಬರ್‍ಲಿ ಹೋಗ್ಲಿ
ತಿಣ್ಣಿ ಉಣ್ಣಿ ಉಡಲಿ
ಅಂದ, ನಮ್ಮಜ್ಜನ ಎರಡನೇ ಹೆಂಡತಿ
ನಮ್ಮಜ್ಜಿ ಪಾರ್ವತವ್ವನ ಮಾತ ಕೇಳಿ
ಗೊದಮೊಟ್ಟೆ ಹಂಗಾಽತ ನನ ಮನಸ
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...