Home / ಕವನ / ಕವಿತೆ / ಕೇಂದ್ರದ ಸುತ್ತ

ಕೇಂದ್ರದ ಸುತ್ತ

ಜನನದಿಂದ ಆ ಮರಣದವರೆಗೆ
ಜೀವನದ ಮಧ್ಯ ಮಹಜಾಲದುಡಿಗೆ

ಭೂಮ್ಯೋಮ ಭೂಮ ವಿನ್ಯಾಸವಿಹುದು
ಸಂಸಾರ ಮತ್ತು ಸನ್ಯಾಸವಿಹುದು

ಮನಮೊನೆಯ ಮೇಲೆ ಕುಳಿತಿಹುದು ಹರಣ
ಹಾರುವುದೆ ಅದರ ಅತ್ಯಂತ ಧ್ಯಾನ

ಹನಿಹನಿಯು ಕೂಡಿ ಹಗರಣದ ಹಣವು
ಸೋರುವುದೆ ಅದರ ಚಿರನವ್ಯ ಗುಣವು

ಚಣಚಣವು ಹರಿದು ಬಾಳಾಯ್ತು ನದಿಯು
ಕುಣಿಕುಣಿದ ಸೂತ್ರ ನಿರ್ಣಯದ ವಿಧಿಯು

ಅರಳುವುದು ಸುಮವು ತುಂಬುವುದು ಮನವು
ಹೊರಳುವುದು ನೆಲಕೆ ಅದೊ ನೋಡು ನೆನವು

ತೊಗಲುಡಿಕೆಯದಕೆ ಮಾಂಸಲದ ಜೆಲುವು
ಹಗಲುಡಿಗೆ ಕಳಚಿ ರಾತ್ರಿಯಲಿ ಎಲುವು

ಚಿರ ಯೌವನದಲಿ ಮೆರೆಯುವಳು ಮುದುಕಿ
ನವ ಭಾವದಲ್ಲಿ ಬುದ್ದಿಯನು ಮುಸುಕಿ

ನಗು ಹೂವು ನೋಡ ಅಳುದೇಟಿಗಂಟಿ
ಸುಖ ಚೆಂಗುಲಾಬಿ ನೋವಾಗೆ ಕಂಟಿ

ಬಂದಿಹುದು ಪ್ರಾಣ ಇರಲಿಕೇನಲ್ಲ
ಬಂದಿಹುದು ವಯಸು ಚಿರವಾಗಿಯಲ್ಲ

ಅಹ ಸೃಷ್ಟಿ ಮೂಲ ಬಹು ಚಿತ್ರ ಚಿತ್ರ
ನಗುತಿಹುದು ತತ್ವ ತಿಳಿದಂಥ ನೇತ್ರ

ನೆರೆದಂತೆ ಜಾತ್ರೆ ಮರುದೀನಕೆ ಬಯಲು
ಬಯಲಾಟ ರಾತ್ರಿ ಬೆಳಗಾಗೆ ಬಯಲು

ಬೀಸಿದಳು ಅಕ್ಕ ಬಯಲಿನಲಿ ಬಟ್ಟೆ
ಬಟ್ಟೆಯನು ಹಿಡಿಯೆ ಅದು ಮೂರ ಬಟ್ಟೆ

ಸೆಳೆಹುದು ಜಾಲ ಹಣ ಬೆಡಗಿನಲ್ಲಿ
ನಂದನದಿ ಬಾಲ ಬೆರಗಾಗಲಿಲ್ಲಿ

ನಗುವೇನು ಆಟ ಹರಿದಾಟಗಳಲಿ
ಚಿಗುರುವುದು ಒಗರು ಹಾರಾಟಗಳಲಿ

ಸೂತ್ರಕ್ಕೆ ಕುಣಿದು ಮೈಮೈಯ ಮಣಿದು
ಪಾತ್ರಗಳ ಬಣ್ಣ ಬಣ್ಣದಲಿ ಹೆಣೆದು

ಮಳೆ ಬಂದು ನಿಂತ ಅಡವಿಯಲಿ ಮೌನ
ಇಳೆಗಾಯ್ತು ಧನ್ಯದೋಕುಳಿಯ ಮಾನ

ಬೀಜಕ್ಕೆ ಇಳೆಗೆ ಬರುವಂಥ ತವಕ
ಬೇನೆಯಲಿ ಬಳಲಿ ಜೀವರಸ ಪಾಕ

ಆಕ್ರಂದನಕ್ಕೆ ತೊಟ್ಟಲಿನು ಕಟ್ಟಿ
ಆನಂದವೆನುತ ಹೆಸುರಿಟ್ಟು ತಟ್ಟಿ

ತಾಯ್ತನದ ಸಿರಿಯ ಹೂ ಮಾಲೆ ಮುಡಿದು
ಬೀಗುವುದು ಕಲ್ಲು ಹಿರಿತನವ ಪಡೆದು

ಅತ್ತಿತ್ತ ಕಾಲ ಲಯದಲ್ಲಿ ಹಾಕಿ
ಒಂದೆರಡು ಒಡೆದು ಒಂದಾಗಿ ಸೋಕಿ
ಕೇಂದ್ರವನೆ ಹಿಡಿದು ಸುತ್ತಲೂ ಸುತ್ತಿ
ಜೀವಾಣು ಬಹುದು ಕೇಂದ್ರಕ್ಕೆ ಒತ್ತಿ
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...