ಮಳೆ

ಪ್ರಿಯ ಸಖಿ,
ಮಳೆಯನ್ನು ನೆನೆದೇ ಮನ ಪುಳಕಗೊಳ್ಳುತ್ತದಲ್ಲವೇ? ಮಳೆ ಜೀವನಾಧಾರವಾದುದು. ಪ್ರಕೃತಿಯ ಉಳಿವಿನ ಸಂಕೇತ.

ಮಳೆ ಬಿದ್ದೊಡನೆ ಅದೆಷ್ಟು ಜೀವಗಳಿಗೆ ಸಂತಸ! ರೈತನಿಗೆ ಬಿತ್ತನೆಗೆ ಭೂಮಿ ಹದವಾಯಿತು. ಮೃದುವಾಯಿತೆಂಬ ಖುಷಿ.  ಪುಟ್ಟ ಮಕ್ಕಳಿಗೆ ಮನೆ ಮುಂದೆ ನಿಂತ ನೀರಲ್ಲಿ ಕಾಗದದ ದೋಣಿ ಬಿಡುವ ಸಂಭ್ರಮ. ಸುರಿವ ಮಳೆಯಿಂದ ಹುಟ್ಟಿದ ಚಳಿಗೆ ಬೆಚ್ಚಗೆ ಹೊದ್ದು ಮಲಗುವ, ಬಿಸಿ ಬಿಸಿ ಪಕೋಡ, ಬೋಂಡ ತಿನ್ನುವ ಉಮೇದು ಹಲವರಿಗೆ. ಕಾದು ಬೆಂಡಾಗಿದ್ದ ಧರಿತ್ರಿ ತಂಪಾದಳಲ್ಲಾ ಧಗೆ ಅಡಗಿತಲ್ಲಾ ಎಂಬ ಸಮಾಧಾನ. ಮೊದಲ ಮಳೆಯ ಮಣ್ಣಿನ ವಾಸನೆ ಅನುಭುವಿಸುವ ರಸಿಕತೆ ಕೆಲವರಿಗೆ, ಸುರಿವ ಮಳೆಯಿಂದ ಸಿಕ್ಕ ಅನಿರೀಕ್ಷಿತ ಬಿಡುವಿನಿಂವ ಬಹಳ ದಿನಗಳಿಂದ ಉಳಿದುಬಿಟ್ಟಿದ್ದ ಕೆಲಸಗಳನ್ನು ಪೂರೈಸುವ ಉತ್ಸಾಹ ಮತ್ತೆ ಕೆಲವರಿಗೆ ……

ಮತ್ತೆ ಅದೆಷ್ಟು ಜನರಿಗೆ ಅದಿನ್ನಿನ್ಯಾವ ಬಗೆಯ ಸಂತಸವೋ ಎಣಿಸಲಾಗದಂತಹುದು, ಗುಣಿಸಲಾಗದಂತಹುದು, ಹೇಳಲಾಗದಂತಹುದು!

ಎಡಬಿಡದೇ ಮೂರು ದಿನದಿಂದ ಸುರಿಯುತ್ತಿರುವ ಬಿರುಮಳೆಯಿಂದ ಇವನಂತೂ ಕಂಗಾಲಾಗಿದ್ದಾನೆ. ಒಂದು ದಿನ ಸಾಲ ತಂದು ಹೊಟ್ಟೆ ತುಂಬಿಸಿದ್ದಾಗಿದೆ. ಮತ್ತೆರಡು ದಿನದಿಂದಾ ಉಪವಾಸ. ಜೊತೆಗೆ ಮನೆಯಿಡೀ ಸೋರಿ ಕೆರೆಯಂತಾಗಿದೆ. ಮೂಲೆಯಲ್ಲೋ ಇವನ ಹೆಂಡತಿ, ಮೂವರು ಹಸಿದ ಮಕ್ಕಳು ಇವನತ್ತಲೇ ತಮ್ಮ ಕಣ್ಣು ಹರಿಸಿ ಕುಳಿತಿದ್ದಾರೆ. ಇವನಿಗೆ ಅವರನ್ನು ನೋಡುವ ಧೈರ್ಯವಿಲ್ಲ. ಅತ್ತ ನೋಡಿದೊಡನೆ ‘ಅಪ್ಪ ಹಸಿವು’ ಎಂದು ಮಗುವೊಂದು ನುಡಿದುಬಿಟ್ಟರೆ ಇವನೇನು ಮಾಡಬೇಕು? ಸುರಿವ ಮಳೆಗೆ ಶಾಪ ಹಾಕಿ ಸಾಕಾಗಿದ್ದಾನೆ.

ಸಖಿ, ಇವನೊಬ್ಬ ಫುಟ್ಪಾತ್ ವ್ಯಾಪಾರಿ, ಬೀದಿಯಲ್ಲಿ ತನ್ನ ಸಣ್ಣಪುಟ್ಟ ಸಾಮಾನುಗಳನ್ನು ಹರವಿ ದಿನವಿಡೀ ಕುಳಿತಿದ್ದು, ಮಾರಾಟವಾದ ಹಣದಿಂದ ಇವನ ಸಂಸಾರದ ದಿನದಿನದ ಹೊಟ್ಟೆ ತುಂಬಬೇಕು. ಒಂದು ದಿನ ವ್ಯಾಪಾರ ನಿಂತರೂ ಇವನ ಸಂಸಾರಕ್ಕೆ ಉಪವಾಸವೇ ಗತಿ. ಮಳೆಗಾಲದಲ್ಲಂತೂ ಉಪವಾಸ ಅನಿವಾರ್ಯ. ಕೆಲವೊಮ್ಮೆ ಒಂದು ದಿನ ಎರಡು ದಿನ ಮತ್ತೆ ಹಲಬಾರಿ ಐದಾರು ದಿನ. ದೀರ್ಘ ದಿನಗಳವರೆಗೆ ಮಳೆ ಬಿಡದೆ ಹುಯ್ಯುವ ಇಂತಹ ದಿನಗಳಲ್ಲಿ ಯೋಚಿಸುತ್ತಾನೆ. ಹೇಗೆ ತನ್ನ ಸಂಸಾರದ ಹೊಟ್ಟೆ ತುಂಬುವುದು? ಭಿಕ್ಷೆ ಬೇಡಿ…. ಕಳ್ಳತನ ಮಾಡಿ ಅಥವಾ……..

ಇಲ್ಲ! ಇವೆಲ್ಲಾ ತಾನು ಮಾಡಲಾರೆ. ತನಗೆ ಗೊತ್ತಿರುವುದು ವ್ಯಾಪಾರವೊಂದೇ! ಧೋ ಎಂದು ಸುರಿವ ಮಳೆಗೆ ಮನಃಪೂರ್ತಿ ಬೈಯ್ದು ಹಗುರಾಗಬೇಕೆಂದು ಕತ್ತನ್ನು ಆಕಾಶದೆಡೆಗೆ ಎತ್ತಿದ್ದಾನೆ. ಅವನಿಗೇ ಅರಿವಿಲ್ಲದೇ ಅವನ ಕಣ್ಣಿಂದ ಧಾರಾಕಾರ ನೀರು ಹರಿಯತೊಡಗಿದೆ. ‘ಎಷ್ಟೆಲ್ಲಾ ಜನರಿಗೆ ಸಂತಸ ನೀಡುವ ಮಳೆಯೇ ನನ್ನ ನನ್ನಂತಹ ಕೆಲವೇ ಕೆಲವರಿಗೆ ತೊಂದರೆಯಾದಾದರೂ ಸರಿಯೇ ನೀ ಸುರಿಯಲೇಬೇಕು. ಬೆಂದ ಮನೆ ಮನಗಳ ತಂಪಾಗಿಸಲೇಬೇಕು’ ಎಂದು ಎದೆ ತುಂಬಿ ಪ್ರಾರ್ಥಿಸುತ್ತಾನೆ. ಈಗ ಮಳೆ ನಿಂತಿದೆ. ಮತ್ತೆ ಅವನ ವ್ಯಾಪಾರ ಭರದಿಂದ ಪ್ರಾರಂಭವಾಗಿದೆ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...