Home / ಲೇಖನ / ಇತರೆ / ಮಾನವ ನೀನೆಷ್ಟು ಕ್ರೂರಿ ?

ಮಾನವ ನೀನೆಷ್ಟು ಕ್ರೂರಿ ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಕೆಲವೊಂದು ಸನ್ನಿವೇಶಗಳನ್ನು, ದೃಶ್ಯಗಳನ್ನು ನಾವು ಕಣ್ಣಾರೆ ನೋಡದಿದ್ದರೂ ನಮ್ಮ ಮನಸ್ಸು ಅದನ್ನು ಕಲ್ಪಿಸಿಕೊಂಡು ಅತಿಸೂಕ್ಷ್ಮವಾಗಿ ಚಿತ್ರಿಸಿಕೊಂಡಿರುತ್ತದೆ. ಆ ಚಿತ್ರ ನಮ್ಮ ಮನಃಪಟಲವಲ್ಲಿ ಅಚ್ಚೊತ್ತಿ ಸದಾ ಕಾಡುತ್ತಿರುತ್ತವೆ. ಆ ಕೆಲಚಿತ್ರಗಳು….  ಭಾರತೀಯ ಯೋಧರ ಒಂದೊಂದು ಅಂಗಗಳನ್ನೂ ಬೇರ್ಪಡಿಸಿ ಚಿತ್ರಹಿಂಸೆ ನೀಡಿ ಕೊಲ್ಲುತ್ತಿರುವ ಬಾಂಗ್ಲಾದೇಶ ರೈಫಲ್ಸ್ ಪಡೆಯವರು, ತಮ್ಮ ಕೈಗೆ ಸಿಕ್ಕ ಯುದ್ಧ ಕೈದಿಗಳನ್ನು ನಾನಾ ವಿಧದ ಹಿಂಸೆ ನೀಡಿ ಬದುಕಲಾರದಂತೆ, ಸಾಯಲಾರದಂತೆ ಗೋಳುಗುಟ್ಟಿಸುತ್ತಿರುವ ನೆರೆದೇಶದವರು, ಆಗಷ್ಟೇ ಹುಟ್ಟಿ, ಕಣ್ಣು ಬಿಡುತ್ತಿರುವ ಹೆಣ್ಣು ಕೂಸಿನ ಬಾಯಲ್ಲಿ ಭತ್ತ ತುಂಬಿ ಕ್ರೂರವಾಗಿ ಕೊಲ್ಲುವವರು.

ವರದಕ್ಷಿಣೆ ತರಲಿಲ್ಲವೆಂದು ಹೆಣ್ಣಿಗೆ ವಿವಿಧ ಹಿಂಸೆ ನೀಡುತ್ತಾ ಹೀನ ಸಂತೋಷವನ್ನನುಭವಿಸುವವರು, ಕ್ಷುಲ್ಲಕ ಕಾರಣಕ್ಕೆ ರಕ್ತ ಬಸಿದು ಕೊಲೆ ಮಾಡುವವರು, ಕಾಲುಬಾಯಿ ರೋಗಕ್ಕೆ ತುತ್ತಾದ ಸಾವಿರಾರು ಹಸುಗಳ ಮಾಂಸ ಉಪಯೋಗಕ್ಕೆ ಬರುವುದಿಲ್ಲವೆಂದು ಅವುಗಳನ್ನೆಲ್ಲಾ ಒಟ್ಟಾಗಿ ಅಗ್ನಿಗಾಹುತಿ ನೀಡುತ್ತಿರುವ ವಿದೇಶಿಯರು, ದೇವರು ಒಲಿಯುವನೆಂಬ ಮೂಢನಂಬಿಕೆಗೆ ಬಲಿಯಾಗಿ ಕುರಿ, ಕೋಳಿ, ಕೋಣನ ಬಲಿ ನೀಡುತ್ತಿರುವ ಭಕ್ತರು, ತನ್ನ ಜಿಹ್ವಾಚಾಪಲ್ಯಕ್ಕಾಗಿ ಅನುದಿನವೂ ಸಾವಿರಾರು ಪ್ರಾಣಿ ಬಲಿ ನಡೆಸುತ್ತಿರುವವರು…. ಒಂದೇ, ಎರಡೇ ! ಮಾನವನ ಕ್ರೂರ ಮನದ ಈ ಚಿತ್ರಗಳು ನೂರು ಕರಾಳ ಕಥೆ ಹೇಳಬಲ್ಲವು.

ಮಾನವ ಜನ್ಮ ದೊಡ್ಡದು. ಅತ್ಯಂತ ಶ್ರೇಷ್ಠವಾದುದೆಂದು ಮಾನವನ ನಂಬುಗೆ. ಆದರೆ ಇಂತಹಾ ಘೋರಗಳನ್ನೆಸಗುತ್ತಿರುವುದೂ ಮಾನವ ಮಾತ್ರ! ಪ್ರಾಣಿಗಳು ತಮ್ಮ ಹಸಿವಿಂಗಿಸಿಕೊಳ್ಳಲಷ್ಟೇ ಬೇರೆ ಪ್ರಾಣಿಗಳನ್ನು ಬೇಟೆಯಾಡುತ್ತವೆ ಕೊಲ್ಲುತ್ತವೆ. ಆದರೆ ಈ ನರಮನುಷ್ಯ ನಾಗರೀಕತೆ ಬೆಳೆದಂತೆಲ್ಲ ಸಭ್ಯನಾಗದೇ ಸಭ್ಯತೆಯ ಮುಸುಕಿನೊಳಗೆ ಇಂಥಹಾ ಹೀನ ಕಾರ್ಯಗಳನ್ನು ನಡೆಸುತ್ತಾ ಬಂದಿದ್ದಾನೆ. ಮಾನವನ ರಾಕ್ಷಸತ್ವದ ಈ ಮುಖಗಳನ್ನು ಕಂಡಾಗ ಎದೆ ನಡುಗುತ್ತದೆ. ಮನುಕುಲಕ್ಕೆ ಉತ್ತಮ ಭವಿಷ್ಯವಿದೆಯೇ ಎಂದು ಚಿಂತಿಸುತ್ತದೆ.

ತಲ್ಲಣಿಸುವ ಮನ ಗದ್ಗದಿಸುತ್ತಾ ‘ಓ ಮಾನವ ನೀನೆಷ್ಟು ಕ್ರೂರಿ ನಿನ್ನ ಅಹಂಕಾರಕ್ಕಾಗಿ, ಸ್ವಾರ್ಥ ಹಿತಕ್ಕಾಗಿ, ನಿನ್ನ ಪ್ರತಿಷ್ಠೆ ಮೇಲರಿಮೆಗಾಗಿ ಶ್ರೇಷ್ಠನೆಂಬ ಪೊಗರಿನಿಂದ ಅದೆಷ್ಟು ಘೋರಗಳನ್ನು ನಡೆಸುತ್ತಿರುವ ‘ನಿಜಕ್ಕೂ ನಿನಗೆ ಕ್ಷಮೆಯಿದೆಯೆ?’ ಎಂದು ಕೇಳುತ್ತದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...