Home / ಕವನ / ಕವಿತೆ / ಪ್ರೇಮ ದೂತ

ಪ್ರೇಮ ದೂತ

ಯಕ್ಷಿಯನ್ನು ತೊರೆದಂದು ಯಕ್ಷ ಕಳಿಸಿದ್ದ ಮೇಘ ದೂತ
ಪತ್ರ ಒಯ್ಯಲಿಕೆ ದಾರಿಯಿಲ್ಲದಿತ್ತಾಗ ಭಾವ ದೂತ

ಅಕ್ಷರಕ್ಷದ ಯಕ್ಷ ಲೋಕವನು ಪತ್ರ ತೋರದೇನು
ರಕ್ತ ರಕ್ತ ಉಸಿರಿಸುವ ರಾಗ ಅನುರಕ್ತಿ ಹರಿಸದೇನು

ದೇಹ ದೂರದಲಿ ಇದ್ದರೇನು ಈ ದಾಹಕೆಲ್ಲಿ ದೇಹ
ಮನೋಲೋಕದಲಿ ಬರೀ ಭಾವ ಬೆಳದಿಂಗಳ ಪ್ರಭಾವ

ಭಾವ ಲೋಕದಲಿ ವಿಹರಿಸುವುದು ಕೆಲ ಭಾವುಕರಿಗೆ ಸಾಧ್ಯ
ದೇಹತೃಷೆಯ ಮೀರಿರುವ ಬಂಧನವು ಸವೆಯದಂಥ ಖಾದ್ಯ

ನಿನ್ನ ಹೃದಯ ದೇಗುಲವ ಸಿಂಗರಿಪ ಭಾಗ್ಯವಂತ ನಾನು
ನನ್ನ ಮನವ ಸಿಂಗರಿಪ ಮಾನಿನಿಯೆ ಚಿಂತೆ ಬೇಡವೇನು

ದೂರ ದೂರದಲಿ ಕಾಂಬ ಗುಡ್ಡವದು ಮಾಲೆಮಾಲೆ ನೀಲಿ
ಮುಳ್ಳುಕಲ್ಲುಗಳು ಅಲ್ಲಿ ಬಹಳ ಇವೆ ನಡೆಯಬೇಕು ತೇಲಿ

ಚೆಲುವೊ ಒಲವೊ ಬಾಳೆಲ್ಲ ಭವ್ಯತೆಗೆ ಏರೆ ಮಾತ್ರ ಯೋಗ್ಯ
ಬಣ್ಣ ಬದುಕು ಬರಡಾದ ಮೇಲು ಉಳಿಯುವುದು ಪ್ರೇಮ ಭಾಗ್ಯ

ಕೂಡುವಂಥ ಸುಖಕಿಂತ ಕೂಟ ಹಾರೈಕೆ ಸೊಗಸು ಏನೊ
ತಿನ್ನುವಂಥ ಸವಿಗಿಂತ ತಿನ್ನಲಿಹ ಬಯಕೆ ರುಚಿಯೊ ಏನೊ

ತನುವು ಹುಟ್ಟಿ ಬೆಳೆದಾಡಿ ಅಳಿಯುವುದು ನಿತ್ಯಜೀವ ಯಾತ್ರೆ
ಮನದ ಭಾವ ಶ್ರೀಮಂತ ಲೀಲೆಯದು ಸತ್ಯ ಚೈತ್ಯ ಯಾತ್ರೆ

ನಮ್ಮ ಜನ್ಮಗಳ ಗಂಟು ಎನ್ನುವರು ಗಂಡು ಹೆಣ್ಣು ಜೋಡಿ
ಜೋಡಿ ಜೋಡಿಗಳು ಒಂದೆ ಎಂದರೇಕಿಷ್ಟು ಹೆಚ್ಚು ರಾಡಿ

ಹಿಂದು ಮುಂದು ಜನುಮಗಳ ಕಂಡವರು ಯಾರೊ ಎಲ್ಲೋ ಏನೊ
ಇಂದು ನಾಳೆಗಳು ನಮ್ಮ ಕೈಯಲಿವೆ ಕೂಡಿ ಬಾಳೆ ಜೇನೊ

ಏನೂ ಅಳಿಯುವುದು ಏನೊ ಉಳಿಯುವುದು ಉಳಿವುದೊಂದೆ ಗುರಿಯು
ಇಹವು ಕಳೆದರೂ ಪರವು ಉಳಿಯುವುದು ಜೀವಿಗದುವೆ ಗುರಿಯು

ಅಂದು ಕೊಳ್ಳುವುದು ಆಡಿಕೊಳ್ಳುವುದು ಮಾತು ಬರಹವೊಂದು
ಮಾಡಿಕೊಳ್ಳುವುದು ಕಂಡು ಕೊಳ್ಳುವುದು ನಡತೆ ಬೇರೆಯೊಂದು

ಉದ್ದ ಉದ್ದ ಮೈಲುದ್ದ ಬರೆದರೇನೊಂದು ಮಾಡದಲ್ಲೆ
ಮೆರಗು ಬೆರಗು ಬುರುಗೆಲ್ಲ ಹೋಗಿರಲು ಪ್ರೇಮ ನೋಡೆ ನಲ್ಲೆ

ಏನು ಬಯಸದೆಯೆ ಬಂದುದನ್ನು ವರವೆಂದು ತಿಳಿಯೆ ಸುಖವು
ಗುಡ್ಡದಾಸೆ ಬರಿಕಡ್ಡಿಯಾಗಿ ಹೋದೀತು ಗುಳ್ಳೆ ಮುಖವು

ನನಗೆ ನೀನು ನಾ ನಿನಗೆ ಎನ್ನುವುದು ಕೆಲವು ದಿನದ ಸೆಳೆತ
ನೀನು ನಾನು ಬೇರೊಬ್ಬಗಾಗಿ ಎನ್ನುವುದು ಕೊನೆಯ ಎಳೆತ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...