Home / ಕವನ / ಕವಿತೆ / ನೆಮ್ಮದಿಯೆಲ್ಲೆಡೆಗೆ

ನೆಮ್ಮದಿಯೆಲ್ಲೆಡೆಗೆ

ನೆಮ್ಮದಿಯು ಸರ್ವರಿಗೆ ನೆಮ್ಮದಿಯು ಎಲ್ಲೆಡೆಗೆ
ನೆಮ್ಮದಿಯು ಭೂತಳದ ದೇಶಗಳಿಗೆಲ್ಲ

ಆನಂದವೆಲ್ಲರಿಗೆ ಆನಂದವೆಲ್ಲೆಡೆಗೆ
ಆನಂದವಿರಲೆಲ್ಲ ರಾಷ್ಟ್ರಗಳಲೆಲ್ಲ
ನೆಮ್ಮದಿಯು ಚೆಂಗುಲಾಬಿಯ ಬೆಳಗಿನಂತೆ
ಆನಂದ ನಸುನಗುವ ವಸಂತನಂತೆ

ಒಬ್ಬನಿಗೆ ಎಲ್ಲರೂ ಪ್ರತಿಯೊಬ್ಬನೆಲ್ಲರಿಗೆ
ಇದುವೆ ಬಾಳುವೆಯಲ್ಲೆ ಬಂಗಾರ ನಿಯಮ
ಜೀವನವು ಬೆಳಕು ಮೇಣ್ ಪ್ರೀತಿಗಳು ಎಲ್ಲರಿಗೆ
ಜೀವಿಗಳಿಗೆಲ್ಲರಿಗೆ ಪ್ರೇಮ ನಿಸ್ಸೀಮ

ಎಲ್ಲರಿಗೆ ಕಾಯಕವು ಅನ್ನ ಬಟ್ಟೆಗಳಿರಲಿ
ಸರಿಸಮತೆ ನೆಲಗೊಳ್ಳಲೆಲ್ಲರಲ್ಲಿ
ಮನೆ ಶಾಲೆ ಆರೋಗ್ಯವನುಕೂಲವೆಲ್ಲರಿಗೆ
ಸಂತಸದ ಜಗವಿರಲಿ ಎಲ್ಲೆಡೆಯಲಿ

ಸೋಮಾರಿ ಸಿರಿತನವು ಬರಿಹೊಟ್ಟೆ ಭಿಕ್ಷುಕರು
ಬೇಡವೈ ಎಲ್ಲರೂ ಸಮ ಕೆಲಸದಲ್ಲಿ
ಕಣ್ಣೀರ ಕರೆಬೇಡ ಅಂಜಿಕೆಯ ಪರಿಬೇಡ
ನಗುವುಕ್ಕಿ ಹರಿಯಲೀ ಎಲ್ಲರೆದೆಯಲ್ಲಿ

ಅಣುಶಕ್ತಿ ಭಯಬೇಡ ಸಿರಿರಾಷ್ಟ್ರ ಬಲಬೇಡ
ಯುದ್ಧ ರಾಕ್ಷಸನಿಗೋ ಸ್ಥಳವೆ ಬೇಡ
ಮರದ ಎಲೆಗಳ ರೀತಿ ಸೂರ್ಯಕಿರಣಗಳಂತೆ
ನಾವೆಲ್ಲ ದಿವ್ಯ ಮಾನವರು ನೋಡ

ನಿನ್ನೊಳಗಿನೊಳತಿರುಳು ಎಲ್ಲರೊಳಿತಿಗೆ ತುಡಿದು
ನಿನ್ನ ಜೀವವು ಎಲ್ಲ ಜೀವಗಳಿಗಾಗಿ
ನಿನ್ನ ದೇವರು ಎಲ್ಲ ಜನರಲ್ಲು ತುಂಬಿಹನು
ನಿನ್ನ ಪ್ರೀತಿಯು ಎಲ್ಲ ಮಾನವರಿಗಾಗಿ

ಅವನಿಗೋ ಅವಳಿಗೋ ಪ್ರತಿಯೊಬ್ಬ ವ್ಯಕ್ತಿಗೋ
ಸಹಬಾಳ್ವೆಯೇ ಬೆಳಕು ಅತ್ಯುತ್ತಮಾ
ಪಾಶ್ಚಾತ್ಯ ಪೌರಾತ್ಯ ಭೂಬಂಧುಗಳಿಗೆಲ್ಲ
ವಿಶ್ವ ಮಾನವ ಧರ್ಮ ಅತ್ಯುತ್ತಮ

ಸಸ್ಯ ಸಂತತಿಗೆಲ್ಲ ಪ್ರಾಣಿ ಪಕ್ಷಿಗಳಿಗೂ
ಗಿರಿಗಳಿಗೆ ವನಗಳಿಗೆ ಕಳಕಳದ ಹೊಳೆಗೆ
ನೆಲ ಜಲಕೆ ತಿರೆ ವಾಯು ಪಂಚಭೂತದ ಜಗಕೆ
ಚೈತನ್ಯ ನೆಮ್ಮದಿಯು ತುಂಬಿ ಬೆಳಗೆ

ಎಲ್ಲರಿಗೂ ನೆಮ್ಮದಿಯು ಎಲ್ಲೆಡೆಗು ನೆಮ್ಮದಿಯು
ಅಮರ ಶಾಂತಿಯ ದಿವ್ಯ ಭವ್ಯ ನೆಮ್ಮದಿಯು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...