Home / ಕವನ / ಕವಿತೆ / ಗಂಟಲಲ್ಲಿ ಸಿಕ್ಕಿಕೊಂಡ ಹೊಟ್ಟೆ

ಗಂಟಲಲ್ಲಿ ಸಿಕ್ಕಿಕೊಂಡ ಹೊಟ್ಟೆ

ಇವರ ಡೊಳ್ಳು ಹೊಟ್ಟೆಗಳನೆಲ್ಲ
ನಗಾರಿ ಬಾರಿಸಬೇಕು ಒಡೆಯುವವರೆಗೆ
ಇವರ ಮುಖವಾಡಗಳ ಕಿತ್ತೆಸೆದು
ಇವರ ಕತ್ತೆ ಮುಖಗಳ
ಕತ್ತುಹಿಡಿದು ಹೊಲೆಗೇರಿಗಳ
ಕೊಳಚೆಗಳಲ್ಲದ್ದಬೇಕು
ಇವರು ಕಟ್ಟಿದ ಸಂಚುಕೋಟೆಗಳ
ನುಡಿಗುಂಡುಗಳಿಂದ ಒಡೆಯಬೇಕು
ಇವರು ಹಾಕಿದ ಲಕ್ಷ್ಮಣರೇಖೆಗಳನೆಲ್ಲ
ಅವಲಕ್ಷಣವಾಗಿ ಅಳಿಸಿ
ಸೀಮೋಲ್ಲಂಘನ ಮಾಡಬೇಕು

ಇವರ ಹೂದೋಟಗಳಲ್ಲೆಲ್ಲ
ಇವರ ತೊಗಲು ಮಾಂಸಗಳ
ಕಿತ್ತು ಹಾಕಿ ಇವರಸ್ಥಿಪಂಜರಗಳು
ಅದೆಷ್ಟು ಅಸ್ಥಿರ ಎಂಬುದ
ಜಗತ್ತಿಗೇ ತೋರಿಸಬೇಕು;
ಕಂಡದ್ದನ್ನೆಲ್ಲಾ ಕೆಂಡಕಾರಿ ಸುಡಬೇಕು,

ಇವರ ಮಕಮಲ್ಲ ಬಟ್ಟೆಗಳ ಕಳಚಿ ಒಗೆದು
ಮಣ್ಣಿನುಡಿಗೆಗಳನುಡಿಸಿ
ದುಡಿಯಹಚ್ಚಬೇಕು,
ಇವನೆಲ್ಲ ಬೇಕು ಮಾಡಲು
ಘೋಷಣೆ ಕೂಗಲು ಬಾಯ್ದೆರೆದಾಗ
ಗಂಟಲಲ್ಲಿ ಸಿಕ್ಕಿಕೊಂಡು ಹೊಟ್ಟೆ
ಮಾತುಗಳನೆಲ್ಲ ನುಂಗಿ
ಬೇತಾಳದಂತೆ ಮುಂದೆ ನಿಂತಿತು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...