Home / ಕವನ / ಕವಿತೆ / ಶಿಕ್ಷಕ ದಿನಾಚರಣೆ

ಶಿಕ್ಷಕ ದಿನಾಚರಣೆ

ರಾಜ ಮಕುಟಗಳು ತಿರುಕರಂತಿದ್ದ ಗುರುಪಾದವ ಚುಂಬಿಸುತ್ತಿದ್ದವು
ಹರಮುನಿದರೂ ಗುರುಕಾಯ್ವನೆಂಬ ಹಿರಿಮೆ ಇತ್ತು
ಅರಿವೇ ಗುರುವಾಗಿ ಜ್ಞಾನ ಪ್ರಭೆ ಹರಿದಿದ್ದುಂಟು ಈ ನೆಲದಲ್ಲಿ

ಹೋಗಲಿ ಬಿಡಿ! ಇದೆಲ್ಲ ಒಮ್ಮೆ ಇದ್ದ
ತುರುಬನ್ನು ಈಗಿನ ಬೋಳು ತಲೆಯಲ್ಲಿ ಮುಟ್ಟಿಕೊಂಡಂತಾದೀತು

ಕಂಡದ್ದಾಡಿದರೆ ಕೆಂಡವಾದೀರಿ ನೀವು,
ಗಂಡೆಂದರೆ ಪುಲ್ಲಿಂಗ, ಹೆಣ್ಣೆಂದರೆ ಸ್ತ್ರೀಲಿಂಗ
ಮೇಷ್ಟ್ರು ಎಂದರೆ ನಪುಂಸಕ ಲಿಂಗವಾಗಿದ್ದೇವೆ
ಅಣ್ಣಂದಿರಾ ನಾವು ದನಕಾಯುವವರಿಗೆ
ಕುರಿಕಾಯುವವರಿಗೆ ಸಮವಾಗಿದ್ದೇವಲ್ಲರೋ!

ಕಾಗೆಗಳಡವಿಯಲ್ಲಿ ಕೂಗುವ ದನಿಯಿಲ್ಲದ ಕೋಗಿಲೆಗಳು ನಾವು
ಮೂಲೆಯಲ್ಲಿ ಕೂಡಿಸಿದ ಮೂದೇವಿಗಳು
ಬಾಯಲ್ಲಷ್ಟು ತುರುಕಿ ಕೂಡಿಸಿದ ಅಳುವ ಕೂಸುಗಳು ನಾವು
ಬಡಗಂಡನ ಬಾಳಿಗೊಗ್ಗದೆ ಬಡಿವಾರಗಿತ್ತಿಯರ ವೇಷಗಳಿಗೆ
ಕರುಬುತ್ತಾ ಹೊಟ್ಟೆ ಉರಿದುಕೊಳ್ಳುತ್ತೇವೆ
ಗುರುತ್ವ ಪೀಠವನಲಂಕರಿಸಿದ ಮಹಾ ತಿರಸ್ಕೃತರು ನಾವು
ಆದರ್ಶಶಿಖರದಿ ಹೊನ್ನಶೂಲಕ್ಕೇರಿಸಿದ್ದರೂ
ನೋವ ನುಂಗಲಾರದೆ ಶೂಲಮೂಲವ ಕೀಳಲೂ ಆಗದೆ
ಪರಿತಪಿಸುತ್ತಿದ್ದೇವೆ
ಕೊಳಚೆ ಕಡಲ ತಿಳಿಹೊಳೆಯಿಂದ ತೊಳೆಯುವ
ಕಗ್ಗಲ್ಲ ಕಾಡ ಶಿಲ್ಪನಂದನವಾಗಿಸಲು ಹೂವಿಂದ ಕಟೆಯುವ
ವೃಥಾ ಸೆಣಸಾಟ ನಮ್ಮದು |
ವಾಸ್ತವ ಕುರೂಪ ಮೈಗೆ ಹೊಂದದ ಬಟ್ಟೆಗಳ ಹೊಲಿದು
ಬಹಳವೆಂದರೆ ಗಿಳಿಗಳ, ಪುಸ್ತಕ ಹುಳುಗಳ
ಸರ್ಟಿಫೀಕೇಟು ಶಿಖಂಡಿಗಳ ಉತ್ಪಾದಿಸುತ್ತೇವೆ
ರಾಜಕಾರಣ ಪರಮಾತ್ಮನ ಕೈಗೊಂಬೆಗಳು ನಾವು
ಈ ನೆಲದ ಅಸಂಖ್ಯರಂತೆ ಆತನ ಯಂತ್ರದ ಹಲ್ಲುಗಳಾಗಿ
ನುಚ್ಚು ಕೊಚ್ಚುತಾ ತೌಡು ಕುಟ್ಟುತ್ತಾ ಕೊಳೆಯುತ್ತಿದೇವೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...