Home / ಕವನ / ಕವಿತೆ / ಶಿಕ್ಷಕ ದಿನಾಚರಣೆ

ಶಿಕ್ಷಕ ದಿನಾಚರಣೆ

ರಾಜ ಮಕುಟಗಳು ತಿರುಕರಂತಿದ್ದ ಗುರುಪಾದವ ಚುಂಬಿಸುತ್ತಿದ್ದವು
ಹರಮುನಿದರೂ ಗುರುಕಾಯ್ವನೆಂಬ ಹಿರಿಮೆ ಇತ್ತು
ಅರಿವೇ ಗುರುವಾಗಿ ಜ್ಞಾನ ಪ್ರಭೆ ಹರಿದಿದ್ದುಂಟು ಈ ನೆಲದಲ್ಲಿ

ಹೋಗಲಿ ಬಿಡಿ! ಇದೆಲ್ಲ ಒಮ್ಮೆ ಇದ್ದ
ತುರುಬನ್ನು ಈಗಿನ ಬೋಳು ತಲೆಯಲ್ಲಿ ಮುಟ್ಟಿಕೊಂಡಂತಾದೀತು

ಕಂಡದ್ದಾಡಿದರೆ ಕೆಂಡವಾದೀರಿ ನೀವು,
ಗಂಡೆಂದರೆ ಪುಲ್ಲಿಂಗ, ಹೆಣ್ಣೆಂದರೆ ಸ್ತ್ರೀಲಿಂಗ
ಮೇಷ್ಟ್ರು ಎಂದರೆ ನಪುಂಸಕ ಲಿಂಗವಾಗಿದ್ದೇವೆ
ಅಣ್ಣಂದಿರಾ ನಾವು ದನಕಾಯುವವರಿಗೆ
ಕುರಿಕಾಯುವವರಿಗೆ ಸಮವಾಗಿದ್ದೇವಲ್ಲರೋ!

ಕಾಗೆಗಳಡವಿಯಲ್ಲಿ ಕೂಗುವ ದನಿಯಿಲ್ಲದ ಕೋಗಿಲೆಗಳು ನಾವು
ಮೂಲೆಯಲ್ಲಿ ಕೂಡಿಸಿದ ಮೂದೇವಿಗಳು
ಬಾಯಲ್ಲಷ್ಟು ತುರುಕಿ ಕೂಡಿಸಿದ ಅಳುವ ಕೂಸುಗಳು ನಾವು
ಬಡಗಂಡನ ಬಾಳಿಗೊಗ್ಗದೆ ಬಡಿವಾರಗಿತ್ತಿಯರ ವೇಷಗಳಿಗೆ
ಕರುಬುತ್ತಾ ಹೊಟ್ಟೆ ಉರಿದುಕೊಳ್ಳುತ್ತೇವೆ
ಗುರುತ್ವ ಪೀಠವನಲಂಕರಿಸಿದ ಮಹಾ ತಿರಸ್ಕೃತರು ನಾವು
ಆದರ್ಶಶಿಖರದಿ ಹೊನ್ನಶೂಲಕ್ಕೇರಿಸಿದ್ದರೂ
ನೋವ ನುಂಗಲಾರದೆ ಶೂಲಮೂಲವ ಕೀಳಲೂ ಆಗದೆ
ಪರಿತಪಿಸುತ್ತಿದ್ದೇವೆ
ಕೊಳಚೆ ಕಡಲ ತಿಳಿಹೊಳೆಯಿಂದ ತೊಳೆಯುವ
ಕಗ್ಗಲ್ಲ ಕಾಡ ಶಿಲ್ಪನಂದನವಾಗಿಸಲು ಹೂವಿಂದ ಕಟೆಯುವ
ವೃಥಾ ಸೆಣಸಾಟ ನಮ್ಮದು |
ವಾಸ್ತವ ಕುರೂಪ ಮೈಗೆ ಹೊಂದದ ಬಟ್ಟೆಗಳ ಹೊಲಿದು
ಬಹಳವೆಂದರೆ ಗಿಳಿಗಳ, ಪುಸ್ತಕ ಹುಳುಗಳ
ಸರ್ಟಿಫೀಕೇಟು ಶಿಖಂಡಿಗಳ ಉತ್ಪಾದಿಸುತ್ತೇವೆ
ರಾಜಕಾರಣ ಪರಮಾತ್ಮನ ಕೈಗೊಂಬೆಗಳು ನಾವು
ಈ ನೆಲದ ಅಸಂಖ್ಯರಂತೆ ಆತನ ಯಂತ್ರದ ಹಲ್ಲುಗಳಾಗಿ
ನುಚ್ಚು ಕೊಚ್ಚುತಾ ತೌಡು ಕುಟ್ಟುತ್ತಾ ಕೊಳೆಯುತ್ತಿದೇವೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...