Home / ಕವನ / ಕವಿತೆ / ಸ್ವಾತಂತ್ರ್ಯ ಬಂದಿದೆ

ಸ್ವಾತಂತ್ರ್ಯ ಬಂದಿದೆ

ನಮಗೆ ಸ್ವಾತಂತ್ರ್ಯ ಬಂದಿದೆ ಸ್ವಾಮೀ ನಮಗೆ ಸ್ವಾತಂತ್ರ್ಯ ಬಂದಿದೆ,
ನಮ್ಮ ಹಡೆದ ತಂದೆ ತಾಯಿಗಳ ಕಾಲಿಂದೊದೆಯಲು
ನಮ್ಮ ತಿದ್ದಿ ಬೆಳೆಸಿದ ಗುರು ಹಿರಿಯರನೂ ಅಲ್ಲಗಳೆಯಲು
ಆಡಳಿತದಾಡುಂಬೊಲದಲ್ಲಿ ಬೇಲಿ ಎದ್ದು ಹೊಲ ಮೇಯಲು
ಜನಸೇವಾ ಭವನಗಳಲ್ಲಿ ಇಲಿ ಹೆಗ್ಗಣಗಳು ಕೊಬ್ಬಲು
ಕುರಿಮಂದಿಯ ಕರಾರಿಲ್ಲದೆ ತಿಂಬ ತೋಳಗಳು ಬೆಳೆಯಲು
ದೀನ ದಲಿತರ ಹೆಸರು ಕೂಗಿಕೂಗಿ ದಬ್ಬಾಳಿಕೆಯ ಬಸಿರುಬ್ಬಿಸಲು

ನಮ್ಮ ಹೂದೋಟಗಳಲ್ಲಿ ಮುಳ್ಳುಕಂಟಿಗಳ ಧಾರಾಳ ಬೆಳೆಸಲು
ನಮ್ಮ ಮನೆಯಂಗಳಗಳಲ್ಲೆ ತಿಪ್ಪೆಯೊಟ್ಟಿಕೊಳ್ಳಲು
ಪೂರ್ವ ಶಿಖಿಯ ಕತ್ತರಿಸಲು ಪಾಶ್ಚಾತ್ಯ ಕಸಿಯ ತಲೆತುಂಬಾ
ಸಿಕ್ಕಾಪಟ್ಟೆ ಬೆಳೆಸಲು ಸ್ವಾತಂತ್ರ್ಯ ಬಂದಿದೆ.

ಬೇಕು ಬೇಕಾದವರ ಬೇಕಾದೆಡೆಗಳಲ್ಲಿ ತುಂಬಿಸಿಕೊಳ್ಳಲು
ಬೇಡಾದವರ ಆಗದವರ ಮೇಲೆಲ್ಲಾ ರೊಚ್ಚೆ ಚಿಮ್ಮಿಸಲು
ದುಡಿದು ತಿಂಬವರ ಒಡಲ ತುಳಿದು ನಮ್ಮ ಬೊಜ್ಜು ಬೇಕಾದಂತೆ
ಬೆಳೆಸಲು ಸ್ವಾತಂತ್ರ್ಯ ಬಂದಿದೆ

ಕುಡಿದು ಬೇಕಾದಷ್ಟು ಬೀದಿಯಲ್ಲಿ ಹೊರಳಾಡಿ ಸ್ವರ್ಗಕಾಣಲು
ಮಾತುಗಳೊಲೆಯ ಮೇಲೆ ಸ್ವಾರ್ಥದಡಿಗೆ ಬೇಯಿಸಿಕೊಳ್ಳಲು
ಬುದ್ದಿ ಶಕ್ತಿ, ಯೋಗ್ಯತೆ, ಗುಣಗಳನ್ನು
ಹೆಣಮಾಡಿ ಹೂಳಿಡಲು
ಗೂಂಡಾ ಗುಂಪುಗಾರಿಕೆ, ಹಣಗಳನ್ನು ಸಿಂಹಾಸನಕ್ಕೇರಿಸಲು
ಕೆಳಬಿದ್ದವರನೆಬ್ಬಿಸುವ ನೆಪದಲ್ಲಿ ಎದ್ದವರ ಹೊಡೆದು ಬೀಳಿಸಲು
ಸ್ವಾತಂತ್ರ್ಯ ಬಂದಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...