Home / ಕವನ / ಕವಿತೆ / ಎಂಥ ಭಾರತ ೨

ಎಂಥ ಭಾರತ ೨

ಇಲ್ಲಿಯವರೆಗೆ ನಿರೋಧ-ನಿಷೇಧಗಳ ಹಿಡಿತ-ಬಿಗಿತಗಳ
‘ಋಣ’ ಮಾರ್ಗದಲ್ಲಿ ನಡೆದದ್ದಾಯಿತು
ಹುಲಿಯ ಮೈ ಬೋಳಿಸಿ ಆಕಳ ಮಾಡುವ ಯತ್ನ ನಡೆಯಿತು
ಆಟಗುಳಿ ಬಾಲಕನ ಕೈಕಾಲು ಕಟ್ಟಿ ಮೂಲೆ ಹಿಡಿಸಿದ್ದಾಯಿತು
ಹರಿವ ನಾಲಗೆಯ ಕತ್ತರಿಸಿ, ಉರಿವಗ್ನಿಯ ಮೇಲೆ ತಣ್ಣೀರು ಸುರುವಿ
ಕಡಿವ ಕತ್ತಿಯ ಬಂಡೆಗೆ ಹೊಡೆದು ಮೊಂಡಾಗಿಸಿ ಮೆರೆದ
ಅಹಿಂಸೆಯ ಹಿಂಸೆಯ, ಬ್ರಹ್ಮಚರ್ಯದ ಭಾನಗಡಿಯ,
ಸಾತ್ವಿಕತನದ ಸೂಳೆಗಾರಿಕೆಯ, ಸ್ವರ್ಗದ ದುರ್ಮಾರ್ಗವ
ನೀತಿಯ ನೇಣನು, ಭಕ್ತಿಯ ಭೋಳೆತನವ,
ಯೋಗದ ಗಂಡುಜೋಗತಿತನವ
ಇನ್ನಾದರೂ ಸಾಕು ಮಾಡೋಣ,

ಚೈತನ್ಯವ ಉಸಿರು ಕಟ್ಟಿಸುವ, ಜೀವ ಶವವಾಗುವ ಪರಿಸಾಕು
ಆ ದೈವ ಚಿಂತನೆಯನ್ನು ಯುಗಗಳಿಗೊಮ್ಮೆ ಹುಟ್ಟುವ
ಆ ಮಹಾಪುರುಷರಿಗಷ್ಟೇ ಬಿಟ್ಟುಕೊಟ್ಟು
ನಾವು ‘ಧನ’ ಮಾರ್ಗದ ಇಹಚಿಂತನೆ ಮಾಡೋಣ,
ಚೆನ್ನಾಗಿ ಉಳುವ ಬೆಳೆವ, ಚೆನ್ನಾಗಿ ಉಣ್ಣುವ-ಉಡುವ,
ಕಣ್ದಣಿಯೆ ಸೊಗವಾಡಿ ನೋಡಿ ಹಿಗ್ಗುವ,
ಮನದಣಿಯೆ ನಕ್ಕು ಅತ್ತು, ಭಾವ ಪೂರ ಹರಿಸುವ,
ಬಾಯಿ ತುಂಬ ಮಕಾತಾಡುವ, ತೆಕ್ಕೆತುಂಬಾ ಸ್ನೇಹಿಸುವ
ಕೈಕಾಲು ತಲೆಗಳಿಗೆ ತೆರಪಿಲ್ಲದೆ ಕೆಲಸ ತುಂಬುವ,
ನೋವಿನ ನಂಜುಂಡು, ಎಂಥ ಹೊಡೆತಗಳಿಗೂ ಕಾಯವ ಕಲ್ಲಾಗಿಸುವ,
ನಮ್ಮ ಬೆನ್ನಂಟಿದ ಹೊಟ್ಟೆಗಳ ತುಂಬಿ ತೇಗಿಸುವ,
ರಾತ್ರಿ ತುಂಬಾ ನಿದ್ರಿಸಿ, ಪುನರ್ಜನ್ಮವನಣಕಿಸುವ,
ಹಗಲು ತುಂಬಾ ದಣಿದು ಭೂತಪಾಪಗಳ ಸುಡುವ
ಮಾರ್ಗವನು ಇನ್ನು ಹಿಡಿಯೋಣ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...