Home / ಕವನ / ಕವಿತೆ / ಕನ್ನಡಮ್ಮ

ಕನ್ನಡಮ್ಮ

ರಾಜ್ಯೋತ್ಸವ ಬಂದೇ ಬಿಡುತ್ತದೆ
ಚಳಿಗಾಲ ಕಾಲಿಕ್ಕುತ್ತಿದ್ದಂತೆಯೇ
ಮುದುರಿದ ಕನ್ನಡಮ್ಮನ ಶೃಂಗಾರ
ನಾಡು ನುಡಿಗಳ ಹೊಗಳಿಕೆ
ರಾಜಕೀಯದವುಗಳ ಉದ್ದುದ್ದ ಭಾಷಣ
ಸಾಹಿತಿಗಳ ಹೊಗಳು ಭಟ್ಟಂಗಿ ಕೆಲಸ
ಪ್ರಶಸ್ತಿಗಳ ಸುರಿಮಳೆ.
ನಾಡಿನ ಜನರೇ ಎದ್ದೇಳಿ ಎದ್ದೇಳಿ
ಬರೆಯುವ ಕವಿಗಳ
ಕಾವ್ಯಕನ್ನಿಕೆ ಇತ್ತಿತ್ತಲಾಗಿ
ಸುಸ್ತಾಗಿ ಜೋಲಿ ಹೋಗಿ ಬೀಳುತ್ತಿದ್ದಾಳೆ.
ಆಯಿತಲ್ಲ ಕನ್ನಡಮ್ಮನಿಗೆ
ನೂರಾರು ಸಾವಿರಾರು ವರುಷಗಳು
ಹಸಿವು ಬಡತನ ನಿರುದ್ಯೋಗ
ಕನ್ನಡಮ್ಮ ಸಿಕ್ಕು ಒದ್ದಾಡುತ್ತಿದ್ದಾಳೆ,
ನಾಲಿಗೆ ತೊದಲುತಿದೆ
ನೆರೆ ರಾಜ್ಯಗಳ ಭಾಷೆಯಲಿ
ವಿದೇಶಿಯರ ವಿಲಾಸಗಳಲಿ
ಪಬ್ – ಡಿಸ್ಕೋ ಸಂಸ್ಕೃತಿಗಳಲಿ
ಅಷ್ಟೇ ಅಲ್ಲ
ತನ್ನ ಸ್ವಾರ್ಥ ರಾಜಕೀಯ
ಮಕ್ಕಳ ಅಧಿಕಾರ ದಾಹ ಕಚ್ಚಾಟಗಳಲಿ
ಸಾಹಿತಿಗಳ ಇಬ್ಬಗೆಯ ನೀತಿಗಳಲಿ
ಸಮಾಜದ ಕಳಂಕ ಲಂಪಟರ
ಧೂರ್ತ ಅನಾಚಾರ
ಅತ್ಯಾಚಾರರ ಹತ್ಯಾಕಾಂಡಗಳಲಿ

ಅಮ್ಮ ಕನ್ನಡಮ್ಮ
ಸುಸ್ತಾಗುತ್ತಿದ್ದಾಳೆ.
ಪ್ರತಿ ವರ್ಷಗಳ ರಾಜ್ಯೋತ್ಸವಗಳಲಿ
ಕನ್ನಡಮ್ಮನ ಮಕ್ಕಳು
ಏರಿದ್ದೆಷ್ಟೇ ಇದ್ದರೂ
ಅಮ್ಮ ಮಾತ್ರ ಇನ್ನೂ ಇನ್ನೂ
ಪ್ರಪಾತದಾಳಕ್ಕೆ ಇಳಿಯುತ್ತಲೇ ಇದ್ದಾಳೆ
ಭರ್ರನೆ ಬಂದು ಝರ್ರನೆ ಇಳಿದು ಹೋಗುವ
ರಾಜ್ಯೋತ್ಸವ ರಾಜಕೀಯ
ಉತ್ಸವಗಳಾಗುತ್ತಿವೆ,
ಕನ್ನಡಮ್ಮನಿಗೆ ಕ್ಯಾನ್ಸರ ಬಂದರೇನು ಗತಿ!
ಬನ್ನಿ ಎಲ್ಲರೂ
ಕನ್ನಡಮ್ಮನಿಗೆ ಪ್ರೀತಿ ಕೊಡೋಣ
ಸುತ್ತುವರಿಯೋಣ, ಕಾಯೋಣ
ಉಳಿಸಿಕೊಳ್ಳೋಣ
ಅವಳ ಮುಖದ ಮೇಲಿನ
ಶಾಂತ ಸ್ವರೂಪದ
ಸಂತೋಷದ ಹೆಮ್ಮೆಯ
ನಗು ಕಾಣೋಣ
ಬನ್ನಿ ಎಲ್ಲರೂ, ಬನ್ನಿ ಎಲ್ಲರೂ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...