Home / ಕವನ / ಕವಿತೆ / ಕಂಡೆನೊ ನಾ!

ಕಂಡೆನೊ ನಾ!

ಕಂಡೆನೊ ನಾ! ಬೇವಿನ ಜೀವದ ಈ-ಬಾ-ಳು!!

ಈ ಲೋಕ ಈ ರಾಜ್ಯ ಈ ಊರು ಈ ಮನೆ
ಕಾಲಾನುಕ್ರಮದಲ್ಲಿ ಜನರಾಶಿ ಒಂದಾಗಿ,
ಬಲ್ಲಿದ ಬಡವನ ಶತಕೋಟಿ ಸಂಸಾರ-  ||ಕಂ||

ಸಾಗರ-ಭೂಮಿಯ ನಡೆ ಕಂಡು ಮೊರೆವುದೊ,
ಯೋಗ ತಾರಕೆಗಳು ಮಿಣುಮಿಣುಕಿ ನಗುವುದೊ;
ಆಗದೀ ಜನಭಾರ ಕಲ್ಭೂಮಿ ಆಳುವುದೊ-  ||ಕಂ||

ತತ್ವಗಳೊಂದೆಡೆಽ ಉದ್ಧಾರ ಕಾಯ್ವುವು,
ನೀತಿಗಳ್ ಬಿರುಗಾಳಿ ಅಲೆಯೊಳು ಸಾಗ್ವುವು;
ಮಾತು ಮಾತಿನ ಜೀವ, ತೋರಲಿದರೆ ಜೀವ-  ||ಕಂ||

ಅವಸರದ ಆಲಾಪ, ದಣೀದ ದೇಹಿಯ ತಾಪ,
ಭುವನತ್ರಯದ ಪಾಪ, ಸಮ್ಮಿಳಿತ ಮಾಕೂಪ,
ಭವ ಸರಸಿಜನದು ಸರಸತಿಯರ ಶಾಪ-  ||ಕಂ||

ಮನುಜನ ಮನಶ್ಶಕ್ತಿ ಮರುಳಾಗಿ ಕಲ್ಲಂತೆ,
ತನುಮನವೆಲ್ಲವು ಸ್ವಾರ್ಥಕ್ಕೆ ಮರೆಹೋಗಿ
ಜನಗಣವು ಪಶುಗಣವಾದ ವೈಚಿತ್ರ್‍ಯವೊ-  ||ಕಂ||

ರಂಗುರಂಗಿನ ತಳಕು, ಬಣ್ಣ ಬಣ್ಣದ ಬೆಳಕು;
ಶೃಂಗಾರ ಸಂಪತ್ತು ನಗುಸರಸ ಸವಿಮಾತು;
ಭೃಂಗಕುಂತಲ ‘ಷೋಕು’, ಕೃತಕ ಜೀವದ ಮಂಕು-  ||ಕಂ||

ಜನ ಜನಿತ ಜನಮೋಹ, ಜೀತ ಜೀತದ ಜೀವ,
ಗಣನೀಯ ಗಂಭೀರ, ಚಂಚಲ ವ್ಯವಹಾರ,
ದಣಿದ ಬಾಳಿನ ಸಾರ ಸಾಕು ಸಾಕು ಸಾಕೀ ಹಾರ!  ||ಕಂ||

ಒಂದಿಽನ ನಾನೊಂದು ಪೂಗಿಡವ ನಟ್ಟೆನೊ,
ಮುಂದಾರು ದಿನ ಕಳೆದು ನಾನೋಡಿ ಅತ್ತೆನೊ;
ಅಂದಿಽತು ನನಗಽದು ‘ಚಿಗುರೆಽಲೆ ಕೊಡೆ’ನೆಂದು-  ||ಕಂ||

ಹಸುರಾಂತ ವನಶೋಭೆ ನೀಲಾಕಾಶದ ಪ್ರಭೆ,
ಹಸುಗೂಸು ಹುಸಿ ಸೊಬಗು ಪಂಚಭೂತದ ಬೆಡಗು,
ನಸುನಗುತ ಒಲಿದಽರು ವಿರಸ ಪ್ರಕೃತಿಯದೊ-  ||ಕಂ||

ಜನಕೋಟಿ ಈ ಜಗದಿ ಸಂಸಾರವೆಂದೆಂದು
ಮುನಿಜನವು ಕವಿಗಣವು ಹಾಡಿ ಪಾಡಿದರಂದು,
ಋಣಮುಕ್ತ ಜೀವಽದ ಪಾಡನ್ನು ಹಾಡುತ್ತ;  ||ಕಂ||

ಲೋಕವು ದಿನಕೊಂದು ರೂಪವ ಪಡೆವುದೊ,
ಸಾಕಿಽದ ಕೋಳಿಯ ಬೆಳೆಸಂತೆ ಬದಲಾಗೆ;
ಈ ಕರ್ಮ ಜಾಲಕ್ಕೆ ಪ್ರಾಣಗಳರ್ಪಿಸಿ-  ||ಕಂ||

ಸಲ್ಲಲಿತ ಸುಖಶಾಂತಿ-ರಣರಂಗ ಭಯಕ್ರಾಂತಿ;
ಮಲ್ಲಳಿಯ ಇನಿವಾಡು-ಸಂಸಾರ ಒಳಪಾಡು,
ಬಲ್ಲವರ ವಿದ್ವತ್ತು-ಲೋಕನಾಶಕೆ ಹೇತು!  ||ಕಂ||
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...