Home / ಕವನ / ಕವಿತೆ / ಕಂಡೆನೊ ನಾ!

ಕಂಡೆನೊ ನಾ!

ಕಂಡೆನೊ ನಾ! ಬೇವಿನ ಜೀವದ ಈ-ಬಾ-ಳು!!

ಈ ಲೋಕ ಈ ರಾಜ್ಯ ಈ ಊರು ಈ ಮನೆ
ಕಾಲಾನುಕ್ರಮದಲ್ಲಿ ಜನರಾಶಿ ಒಂದಾಗಿ,
ಬಲ್ಲಿದ ಬಡವನ ಶತಕೋಟಿ ಸಂಸಾರ-  ||ಕಂ||

ಸಾಗರ-ಭೂಮಿಯ ನಡೆ ಕಂಡು ಮೊರೆವುದೊ,
ಯೋಗ ತಾರಕೆಗಳು ಮಿಣುಮಿಣುಕಿ ನಗುವುದೊ;
ಆಗದೀ ಜನಭಾರ ಕಲ್ಭೂಮಿ ಆಳುವುದೊ-  ||ಕಂ||

ತತ್ವಗಳೊಂದೆಡೆಽ ಉದ್ಧಾರ ಕಾಯ್ವುವು,
ನೀತಿಗಳ್ ಬಿರುಗಾಳಿ ಅಲೆಯೊಳು ಸಾಗ್ವುವು;
ಮಾತು ಮಾತಿನ ಜೀವ, ತೋರಲಿದರೆ ಜೀವ-  ||ಕಂ||

ಅವಸರದ ಆಲಾಪ, ದಣೀದ ದೇಹಿಯ ತಾಪ,
ಭುವನತ್ರಯದ ಪಾಪ, ಸಮ್ಮಿಳಿತ ಮಾಕೂಪ,
ಭವ ಸರಸಿಜನದು ಸರಸತಿಯರ ಶಾಪ-  ||ಕಂ||

ಮನುಜನ ಮನಶ್ಶಕ್ತಿ ಮರುಳಾಗಿ ಕಲ್ಲಂತೆ,
ತನುಮನವೆಲ್ಲವು ಸ್ವಾರ್ಥಕ್ಕೆ ಮರೆಹೋಗಿ
ಜನಗಣವು ಪಶುಗಣವಾದ ವೈಚಿತ್ರ್‍ಯವೊ-  ||ಕಂ||

ರಂಗುರಂಗಿನ ತಳಕು, ಬಣ್ಣ ಬಣ್ಣದ ಬೆಳಕು;
ಶೃಂಗಾರ ಸಂಪತ್ತು ನಗುಸರಸ ಸವಿಮಾತು;
ಭೃಂಗಕುಂತಲ ‘ಷೋಕು’, ಕೃತಕ ಜೀವದ ಮಂಕು-  ||ಕಂ||

ಜನ ಜನಿತ ಜನಮೋಹ, ಜೀತ ಜೀತದ ಜೀವ,
ಗಣನೀಯ ಗಂಭೀರ, ಚಂಚಲ ವ್ಯವಹಾರ,
ದಣಿದ ಬಾಳಿನ ಸಾರ ಸಾಕು ಸಾಕು ಸಾಕೀ ಹಾರ!  ||ಕಂ||

ಒಂದಿಽನ ನಾನೊಂದು ಪೂಗಿಡವ ನಟ್ಟೆನೊ,
ಮುಂದಾರು ದಿನ ಕಳೆದು ನಾನೋಡಿ ಅತ್ತೆನೊ;
ಅಂದಿಽತು ನನಗಽದು ‘ಚಿಗುರೆಽಲೆ ಕೊಡೆ’ನೆಂದು-  ||ಕಂ||

ಹಸುರಾಂತ ವನಶೋಭೆ ನೀಲಾಕಾಶದ ಪ್ರಭೆ,
ಹಸುಗೂಸು ಹುಸಿ ಸೊಬಗು ಪಂಚಭೂತದ ಬೆಡಗು,
ನಸುನಗುತ ಒಲಿದಽರು ವಿರಸ ಪ್ರಕೃತಿಯದೊ-  ||ಕಂ||

ಜನಕೋಟಿ ಈ ಜಗದಿ ಸಂಸಾರವೆಂದೆಂದು
ಮುನಿಜನವು ಕವಿಗಣವು ಹಾಡಿ ಪಾಡಿದರಂದು,
ಋಣಮುಕ್ತ ಜೀವಽದ ಪಾಡನ್ನು ಹಾಡುತ್ತ;  ||ಕಂ||

ಲೋಕವು ದಿನಕೊಂದು ರೂಪವ ಪಡೆವುದೊ,
ಸಾಕಿಽದ ಕೋಳಿಯ ಬೆಳೆಸಂತೆ ಬದಲಾಗೆ;
ಈ ಕರ್ಮ ಜಾಲಕ್ಕೆ ಪ್ರಾಣಗಳರ್ಪಿಸಿ-  ||ಕಂ||

ಸಲ್ಲಲಿತ ಸುಖಶಾಂತಿ-ರಣರಂಗ ಭಯಕ್ರಾಂತಿ;
ಮಲ್ಲಳಿಯ ಇನಿವಾಡು-ಸಂಸಾರ ಒಳಪಾಡು,
ಬಲ್ಲವರ ವಿದ್ವತ್ತು-ಲೋಕನಾಶಕೆ ಹೇತು!  ||ಕಂ||
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...