Home / ಕವನ / ಕವಿತೆ / ಕಂಡೆನೊ ನಾ!

ಕಂಡೆನೊ ನಾ!

ಕಂಡೆನೊ ನಾ! ಬೇವಿನ ಜೀವದ ಈ-ಬಾ-ಳು!!

ಈ ಲೋಕ ಈ ರಾಜ್ಯ ಈ ಊರು ಈ ಮನೆ
ಕಾಲಾನುಕ್ರಮದಲ್ಲಿ ಜನರಾಶಿ ಒಂದಾಗಿ,
ಬಲ್ಲಿದ ಬಡವನ ಶತಕೋಟಿ ಸಂಸಾರ-  ||ಕಂ||

ಸಾಗರ-ಭೂಮಿಯ ನಡೆ ಕಂಡು ಮೊರೆವುದೊ,
ಯೋಗ ತಾರಕೆಗಳು ಮಿಣುಮಿಣುಕಿ ನಗುವುದೊ;
ಆಗದೀ ಜನಭಾರ ಕಲ್ಭೂಮಿ ಆಳುವುದೊ-  ||ಕಂ||

ತತ್ವಗಳೊಂದೆಡೆಽ ಉದ್ಧಾರ ಕಾಯ್ವುವು,
ನೀತಿಗಳ್ ಬಿರುಗಾಳಿ ಅಲೆಯೊಳು ಸಾಗ್ವುವು;
ಮಾತು ಮಾತಿನ ಜೀವ, ತೋರಲಿದರೆ ಜೀವ-  ||ಕಂ||

ಅವಸರದ ಆಲಾಪ, ದಣೀದ ದೇಹಿಯ ತಾಪ,
ಭುವನತ್ರಯದ ಪಾಪ, ಸಮ್ಮಿಳಿತ ಮಾಕೂಪ,
ಭವ ಸರಸಿಜನದು ಸರಸತಿಯರ ಶಾಪ-  ||ಕಂ||

ಮನುಜನ ಮನಶ್ಶಕ್ತಿ ಮರುಳಾಗಿ ಕಲ್ಲಂತೆ,
ತನುಮನವೆಲ್ಲವು ಸ್ವಾರ್ಥಕ್ಕೆ ಮರೆಹೋಗಿ
ಜನಗಣವು ಪಶುಗಣವಾದ ವೈಚಿತ್ರ್‍ಯವೊ-  ||ಕಂ||

ರಂಗುರಂಗಿನ ತಳಕು, ಬಣ್ಣ ಬಣ್ಣದ ಬೆಳಕು;
ಶೃಂಗಾರ ಸಂಪತ್ತು ನಗುಸರಸ ಸವಿಮಾತು;
ಭೃಂಗಕುಂತಲ ‘ಷೋಕು’, ಕೃತಕ ಜೀವದ ಮಂಕು-  ||ಕಂ||

ಜನ ಜನಿತ ಜನಮೋಹ, ಜೀತ ಜೀತದ ಜೀವ,
ಗಣನೀಯ ಗಂಭೀರ, ಚಂಚಲ ವ್ಯವಹಾರ,
ದಣಿದ ಬಾಳಿನ ಸಾರ ಸಾಕು ಸಾಕು ಸಾಕೀ ಹಾರ!  ||ಕಂ||

ಒಂದಿಽನ ನಾನೊಂದು ಪೂಗಿಡವ ನಟ್ಟೆನೊ,
ಮುಂದಾರು ದಿನ ಕಳೆದು ನಾನೋಡಿ ಅತ್ತೆನೊ;
ಅಂದಿಽತು ನನಗಽದು ‘ಚಿಗುರೆಽಲೆ ಕೊಡೆ’ನೆಂದು-  ||ಕಂ||

ಹಸುರಾಂತ ವನಶೋಭೆ ನೀಲಾಕಾಶದ ಪ್ರಭೆ,
ಹಸುಗೂಸು ಹುಸಿ ಸೊಬಗು ಪಂಚಭೂತದ ಬೆಡಗು,
ನಸುನಗುತ ಒಲಿದಽರು ವಿರಸ ಪ್ರಕೃತಿಯದೊ-  ||ಕಂ||

ಜನಕೋಟಿ ಈ ಜಗದಿ ಸಂಸಾರವೆಂದೆಂದು
ಮುನಿಜನವು ಕವಿಗಣವು ಹಾಡಿ ಪಾಡಿದರಂದು,
ಋಣಮುಕ್ತ ಜೀವಽದ ಪಾಡನ್ನು ಹಾಡುತ್ತ;  ||ಕಂ||

ಲೋಕವು ದಿನಕೊಂದು ರೂಪವ ಪಡೆವುದೊ,
ಸಾಕಿಽದ ಕೋಳಿಯ ಬೆಳೆಸಂತೆ ಬದಲಾಗೆ;
ಈ ಕರ್ಮ ಜಾಲಕ್ಕೆ ಪ್ರಾಣಗಳರ್ಪಿಸಿ-  ||ಕಂ||

ಸಲ್ಲಲಿತ ಸುಖಶಾಂತಿ-ರಣರಂಗ ಭಯಕ್ರಾಂತಿ;
ಮಲ್ಲಳಿಯ ಇನಿವಾಡು-ಸಂಸಾರ ಒಳಪಾಡು,
ಬಲ್ಲವರ ವಿದ್ವತ್ತು-ಲೋಕನಾಶಕೆ ಹೇತು!  ||ಕಂ||
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...