Home / ಕವನ / ಕವಿತೆ / ಶಿವರಾಮರಾಯರು

ಶಿವರಾಮರಾಯರು

ಶಿವರಾಮರಾಯರು ಹೆಸರಾಂತ ಲಾಯರು,
ವ್ಯವಹಾರ ಭೂಮಿಯಲಿ ಕಾಮಧೇನು;
ಬೆಟ್ಟಗಲ ಜರತಾರಿಯಂಚಿನ ರುಮಾಲೇನು,
ರಟ್ಟೆಯಷ್ಟೇ ಇರುವ ಮೀಸೆಯೇನು!

ಮೇಲ್ಮನೆಯೆ ಮೆಲ್ದನಿಯ ಶಿವರಾಮರಾಯರು.
ಮೈಬಣ್ಣ ಕೆಂಪಿನ ಗುಲಾಬಿಯಂತೆ ;
ಸತ್ಯವಂತರಿಗಿವರು ಸುಲಭದಲಿ ಲಾಯರು
ಇವರಿದ್ದ ಕಡೆ ಗೆಲ್ವು ಸಿದ್ಧವಂತೆ.

ಶಿವರಾಮರಾಯರು ತುಂಬಿರುವ ಸಂಸಾರಿ;
ಹತ್ತೂರ ಮುಂದಾಳು, ಮುತ್ತು ಇವರು.
ಕೈಹಿಡಿದ ಮಡದಿಯೋ ಸಂಕ್ಷಿಪ್ತ ಗಾಂಧಾರಿ.-
ಸಂಸಾರಸಾಗರವ ದಾಟುತಿಹರು.

ಶಿವರಾಮರಾಯರು ಅದೃಷ್ಟಶಾಲಿಗಳೆನ್ನಿ! –
ಆಗರ್ಭ ಶ್ರೀಮಂತರೆನುವ ಬಿರುದು.
ಹತ್ತೂರ ಗೋಜೆಲ್ಲ ಇವರ ಮನೆ ಬಾಗಿಲಲಿ
ಇತ್ಯರ್ಥವಾಗುವುದು, ದಾರಿ ಹೊಳೆದು.

ಶಿವರಾಮರಾಯರು ತುಂಬ ಖಂಡಿತವಾದಿ;
ಮಂದಹಾಸವೆ ಇವರ ಸಿರಿ ಬಾವುಟ.
ನಿರ್ಭಯದಿ ಬಳಸುವರು ‘ಕೋಡು’ಗಳ ಕಾಡಿನಲಿ;
‘ಕೋರ್ಟಿ’ಗೂ ಹಿತವಂತೆ ಇವರಾವುಟ.

ರಜವಿದ್ದ ಸಂಜೆಯಲಿ ಒಳಮುನೆಯ ಬೆಳಕಿನಲಿ
ಪುಸ್ತಕದ ಪಂಕ್ತಿಯಲಿ ವಲ್ಲಿ ಹೊದ್ದು;
ಕನ್ನಡಕದಂಚಿನಲಿ ಜಿಗಿವ ಕಣ್ಮಿಂಚಿನಲಿ
ಮುದ್ದು ಮಗಳೇ ಇಳಿದು ಗುದ್ದು ಕೊಡಲು,

ಪತ್ರ ಓದುತ್ತಲೇ ಚರ್ಚೆ ಮಾಡುತ್ತಲೇ
ಹೆಂಡತಿಯ ಸೂಚನೆಗೆ ಸನ್ನೆಮಾಡಿ,
ಒಂದೆ ನದಿ ಎರಡು ಎತ್ತರಗಳಲಿ ಹರಿವಂತೆ,
ಜೀವನವ ನಡಸುತ್ತ ಗೌರವದಲಿ,

ಗೆದ್ದವರನಾದರಿಸಿ ಸೋತವರ ಸಂತವಿಸಿ
ತಾವು ಎರಡೂ ಕಡೆಗೆ ಬಂಧುವೆನಿಸಿ
ದೇವರಿಗೆ ಕೈಮುಗಿಸಿ ಸ್ನೇಹಗಳ ತಲೆಯುಳಿಸಿ
ಅಲಲ್ಲಿಗಂದಂದೆ ಗಂಟು ಬಿಡಿಸಿ,

ಶಿವರಾಮರಾಯರು, ಹೆಸರಾಂತ ಲಾಯರು
ತಮ್ಮ ಹೊರೆಯೇ ತಮ್ಮ ಬೆನ್ನಿಗಿರಲು,
ಸುಮ್ಮನಿರಲಾರದೆಯೆ ಅವರಿವರ ದುರಿತವನು
ಆಧುನಿಕ ‘ಆಟ್ಲಾಸಿನಂತೆ’ ಹೊತ್ತು-

ಭಗವಂತನಡಿಯಮೇಲಗಣಿತ ವ್ಯೂಹದಲಿ
ಬಣ್ಣ ಬಣ್ಣದ ಬುಗುರಿ ಆಡುತಿರಲು
ಕಂತೆಗಳು, ಚಿಂತೆಗಳು, ಸಂತೆಗಳು ಸುತ್ತಾಡಿ
ಇದ್ದಲ್ಲೆ ಬಿದ್ದಲ್ಲೆ ಬೀಳುತಿರಲು,-

ಹೋರಾಡುತಿರುವರು. ಪಾಪ! ಇವರೊಬ್ಬರು ;
ತಲೆ ಬೆಳ್ಳಗಾಗಿಹುದು ತೊಂದರೆಯಲಿ.
ವಿಧಿನಿಯಮವಿದ್ದಂತೆ, ಹೋದ ಮಳೆ ಬಿದ್ದಂತೆ
ನಡೆವುದೂರಿನ ಬಾಳು ತೋರಿಕೆಯಲಿ.-

ಈ ನಡುನೆ ತಲೆಹಾಕಿ ಕಂಡ ಪಾತಾಳದಲಿ
ಕಾಲಿಟ್ಟು ಬೀಳುವುದು ಒಂದು ತಪ್ಪು.
ಕ್ಷೀರಸಾಗರನೆಂದು ಹಾಡಿರಲಿ ಕವಿತೆಯಲಿ,
ಕಡಲ ನೀರೆಲ್ಲೆಲ್ಲು ತುಂಬ ಉಪ್ಪು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...