Home / ಬಾಲ ಚಿಲುಮೆ / ಕವಿತೆ / ನಾನೇ ಅಪ್ಪ ಆಗ್ತೀನಿ

ನಾನೇ ಅಪ್ಪ ಆಗ್ತೀನಿ

ಅಪ್ಪ ಹೊರಗಡೆ ಹೋದಾಗ
ಕೋಟು ಬೂಟು ಹಾಕ್ಕೊಂಡು
ಅಪ್ಪನ ಕಪ್ಪನೆ ಕನ್ನಡಕ
ಕಣ್ಣಿಗೆ ಸರಿಯಾಗ್ ಇಟ್ಕೊಂಡು
ನಾನೇ ಅಪ್ಪ ಆಗ್ತೀನಿ
ದಪ್ಪನೆ ದನೀಲಿ ಕೂಗ್ತೀನಿ
ಅಣ್ಣ ಅಕ್ಕ ಎಲ್ಲರಿಗೂ
ಸಖತ್ತು ರೋಪು ಹಾಕ್ತೀನಿ!

ಅಣ್ಣನ್ ಕರೆದು ಕೇಳ್ತೀನಿ:
“ಯಾಕೋ ಸ್ಕೂಲಿಗೆ ಹೋಗ್ಲಿಲ್ಲ?
ತಮ್ಮನ್ ಬಯ್ತೀಯಂತಲ್ಲೋ
ಪೆದ್ದ, ನಾಚಿಕೆ ಆಗೊಲ್ವ?
ನಿನ್ನಲ್ಲಿರೋ ಚೆಂಡನ್ನ
ಬ್ಯಾಟು ಬಳಪ ಗೋಲೀನ
ತೆಪ್ಪಗೆ ಅವ್ನಿಗೆ ಕೊಟ್ಟು ಬಿಡು
ಇಲ್ಲವೆ, ತಿನ್ತೀ ಒದೆಯನ್ನ.”

ಅಕ್ಕನ್ ಕರೆದು ಕೇಳ್ತೀನಿ:
“ಎಲ್ಲಿದ್ದಾನೇ ನಿನ್ ತಮ್ಮ?
ಅಂಥಾ ಮುದ್ದಿನ ಹುಡುಗನ್ನ
ಓದಿಸಿ ದಣಿಸೋದೇನಮ್ಮ,
ಚಿಕ್ಕವನಾದ್ರೂ ಏನ್ ಬುದ್ದಿ
ಅವನ್ಯಾಕ್ ಪಾಠ ಓದ್ಬೇಕು?
ಪಾಠ ಬೇಡ ಅವನನ್ನು
ಆಟಕ್ ಕರ್‍ಕೊಂಡು ಹೋಗ್ಬೇಕು.”

ಅಮ್ಮನ್ ಕರೆದು ಕೇಳ್ತೀನಿ:
“ತಿಂಡಿ ತುಂಬಿದ ಡಬ್ಬಾನ
ಗೂಡಿನ ಒಳಗಡೆ ಮುಚ್ಚಿಟ್ಟು
ಯಾಕೇ ಬೀಗ ಹಾಕ್ತೀಯ?
ತಿಂಡಿ ಇರೋದು ಚಿಕ್ ಮಕ್ಳು
ತಿನ್ನೋದಕ್ಕೇ ಅಲ್ವೇನೇ?
ಮಗೂಗೆ ಎಲ್ಲಾ ಕೊಟ್ಟುಬಿಡೆ
ನಾವ್ ತಿಂದಿದ್ದು ಸಾಲ್ದೇನೇ?”

ಅಜ್ಜೀನ್ ಕರೆದು ಕೇಳ್ತೀನಿ:
“ಯಾಕೇ ಮಗೂನ ಬಯ್ತೀಯ?
ಉಸ್ಮಾನ್ ಜೊತೆಗೆ ಆಡಿದರೆ
ಯಾತಕ್ ಸಿಡಿ ಸಿಡಿ ಮಾಡ್ತೀಯ?
ಬೇರೆ ಜಾತಿ ಆದ್ರೇನು
ಅವನೂ ಮನುಷ್ಯ ಅಲ್ವೇನೆ?
ಜಾತಿ ಮತದ ಭೇದ ಮಾಡೋದ್
ಯಾರೇ ಆದ್ರೂ ಸರಿಯೇನೇ?”

ಅಕ್ಕನ ಪಾಠ ತಪ್ಪತ್ತೆ
ಅಣ್ಣಂಗ್ ಲಾತ ಬೀಳತ್ತೆ!
ಅವನ ಆಟದ ಸಾಮಾನು
ಎಲ್ಲಾ ನಂಗೇ ಸಿಕ್ಕತ್ತೆ!
ಎಲ್ಲಾ ತಿಂಡಿ ಬಾಚ್ಕೊಂಡು
ಅಟ್ಟದ ಮೇಲೆ ಇಟ್ಕೊಂಡು
ಖರಮ್ ಖುರಮ್ ತಿಂತೀನಿ
ಟೀಪೂ ಬಿರ್ಜು ಕರ್‍ಕೊಂಡು!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...