Home / ಕಥೆ / ಜನಪದ / ಗೌಡರ ನಾಯಿ

ಗೌಡರ ನಾಯಿ

ಗೋಡಿಹಾಳ ಗ್ರಾಮ ಚಿಕ್ಕದಾದರೂ ಅಲ್ಲಿಯ ಗೌಡರು ದೊಡ್ಡವರಾಗಿದ್ದರು. ಶ್ರೀಮಂತಿಕೆಗಿಂತ ಅವರಲ್ಲಿ ತಿಳಿವಳಿಕೆ ಹೆಚ್ಚಾಗಿತ್ತು. ವಯಸ್ಸಿನಿಂದಲೂ ಹಿರಿಯರಾಗಿದ್ದರು. ಮಕ್ಕಳೆಲ್ಲ ಕೈಗೆ ಬಂದಿದ್ದರು. ಹಿರೇಮಗ ಗೌಡಿಕೆಯನ್ನೂ, ಚಿಕ್ಕವನು ಹೊಲಮನೆಗಳ ಮೇಲ್ವಿಚಾರಣೆಯನ್ನೂ ನಿಸ್ತರಿಸುತ್ತಿದ್ದನು. ದೊಡ್ಡ ಗೌಡರು ವೇದಾಂತಗ್ರಂಥಗಳನ್ನು ಓದುವುದರಲ್ಲಿ ಆಸಕ್ತಿಯುಳ್ಳವರು. ಬಂದವರೊಡನೆ ಚರ್ಚೆ ಮಾಡುವುದರಲ್ಲಿ ಅವರಿಗೆ ವೇಳೆಯೇ ಸಾಲುತ್ತಿರಲಿಲ್ಲ.

ಚಳಿಗಾಲದ ಮುಂಜಾವಿನಲ್ಲಿ ಮನೆಯ ಮುಂದಿನ ಕಟ್ಟೆಯ ಮೇಲೆ ಬಿಸಿಲು ಕಾಯಿಸಿಕೊಳ್ಳುತ್ತ ಕುಳಿತರೆಂದರೆ, ಅವರ ಮಗ್ಗುಲಲ್ಲಿ ಒಂದು ನಾಯಿ ಯಾವಾಗಲೂ ಪವಡಿಸಿರುತ್ತಿತ್ತು. ಗೌಡರ ಸಲುವಾಗಿ ಅದೆಷ್ಟೋ ಜನರು ಅಲ್ಲಿಗೆ ಬಂದಾಗ ಆ ನಾಯಿ ಜಗ್ಗನೆದ್ದು ಕವ್ವನೇ ಬೊಗಳಿ ಹೆದರಿಸುವದು. ಒಮ್ಮೊಮ್ಮೆ ಚಂಗನೆ ನೆಗೆದು ಬಂದವರ ಮೈಮೇಲೆ ಏರಿಹೋಗುವದು. ಆಗ ಗೌಡರು ಬೆದರಿಸಿ ಅದನ್ನು ಹತ್ತಿರ ಕರೆದು ಕುಳ್ಳಿರಿಸಿಕೊಳ್ಳುವರು. ಅದರಿಂದ ಸಂದರ್ಶನಾರ್ಥಿಗಳಿಗೆ ನಿರ್ಬಾಧವಾಗುವದು.

ಅದೆಷ್ಟೋ ಜನರು ನಾಯಿಗಂಜಿಯೇ ಗೌಡರ ಬಳಿಗೆ ಹೋಗುವುದಕ್ಕೆ ಹಿಂಜರಿಯುತ್ತಿದ್ದರು. ನಾಯಿಯ ಆ ಸ್ವಭಾವಕ್ಕಾಗಿ ಗೌಡರಿಗೂ ಬೇಸರವೆನಿಸಿತ್ತು. ಅದರ ಸ್ವಭಾವ ಪರಿವರ್ತನೆಗೊಳಿಸುವದಕ್ಕೆ ಯಾವ ಹಂಚಿಕೆಮಾಡಬೇಕು – ಎಂದು ಯೋಚನೆಗೀಡಾದರು. ಒಂದು ಯುಕ್ತಿಯೂ ಹೊಳೆಯಿತವರಿಗೆ. ಸಿದ್ಧತೆಮಾಡಿ ಕೊಂಡರು. ನಾಯಿಯನ್ನು ಹತ್ತಿರಕ್ಕೆ ಕರೆದು ಕುಳ್ಳಿರಿಸಿಕೊಂಡರು. ಸೂಜಿಯಿಂದ ಕೇರಿನೆಣ್ಣೆ ತೆಗೆದು ನಾಯಿಯ ಪೃಷ್ಠದ್ವಾರದ ಮೇಲೆ ಅಧಿಕ ಚಿಹ್ನ ಬರೆದರು. ಅದು ಒಂದೆರಡು ದಿನಗಳಲ್ಲಿ ಗುದುಗುದಿಸಹತ್ತಿದ್ದರಿಂದ ನಾಯಿ ಎದ್ದುನಿಂತು ಮುಕಳಿಯನ್ನು ನೆಲಕ್ಕೆ ತಿಕ್ಕಿತು. ಅದರಿಂದ ಗುದದ್ವಾರವು ಕೆತ್ತಿಹೋಗಿ ಹುಣ್ಣೇ ಬಿದ್ದಿತು. ಕೀವು ಆಯಿತು. ಆದರೆ ಬಂದ ಹೊಸಬರನ್ನು ಕಂಡು, ವವ್ವ್ ಎಂದು ಬೊಗಳಿ ಅವರ ಮೈಮೇಲೆ ಹೋಗುವುದನ್ನು ಬಿಟ್ಟಿರಲಿಲ್ಲ. ಆದರೆ ವವ್ವ್ ಎಂದು ಬೊಗಳಬೇಕಾದರೆ ಗುದದ್ವಾರವನ್ನು ಬಿಗಿಹಿಡಿಯಬೇಕಾಗುತ್ತದೆ. ಹಾಗೆ ಬಿಗಿಹಿಡಿಯುವಾಗ, ಹುಣ್ಣು ಬಿದ್ದಿದ್ದರಿಂದ ಅಸಹ್ಯವಾದ
ನೋವುಂಟಾಗುವದು. ಅದೆಷ್ಟು ರಭಸದಿಂದ ಚಂಗನೆ ನೆಗೆದು ಬಂದವರ ಮೈಮೇಲೆ ಹೋಗುವದೋ, ಅಷ್ಟೇ ವೇದನೆಯಿಂದ “ಅಂಽಽಽ ಎಂದು ನರಳಿ ಹಿಂದಿರುಗಿ ಬರತೊಡಗಿತು.

ಗುದದ್ವಾರದಲ್ಲಿ ಬಿದ್ದ ಹುಣ್ಣಿನ ನೋವಿಗಂಜಿ ಅದು, ರಭಸದಿಂದ ಬೊಗಳಿ ಬಂದವರ ಮೇಲೆ ಹೋಗುವುದನ್ನು ಒಮ್ಮೆಲೇ ಕಡಿಮೆ ಮಾಡಿತು. ಅಲ್ಲಿಯವರಿಗೆ ಆ ಹುಣ್ಣು ಮಾಯಿಸುವ ಉಪಾಯವನ್ನೇ ಮಾಡಲಿಲ್ಲ ಗೌಡರು.

“ಕಳೆನೋಡಿ ಕೇರು ಹಾಕಿದರೆ ಹಾದಿಗೆ ಬಾರದವರಾರು” ಎಂದು ಗೌಡರು ಮೇಲಿಂದ ಮೇಲೆ ಮಾತಿನಲ್ಲಿ ನುಡಿಯತೊಡಗಿದರು. ಕೇಳಿದವರಿಗೆ ಅದು ಸತ್ಯವೂ ಅನಿಸಿತು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...