Home / ಲೇಖನ / ಇತರೆ / ಗೀಜಗನ ಗೂಡೊಳಗೆ

ಗೀಜಗನ ಗೂಡೊಳಗೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಮನೆಯ ಪಕ್ಕದ ಮುಳ್ಳು ಕಂಠಿಗಿಡದ ಎತ್ತರದ ಕೊಂಬೆಯಲ್ಲಿ ಗೀಜಗವೊಂದು ಗೂಡು ಕಟ್ಟಲಾರಂಭಿಸಿದೆ. ಮೊದಲಿಗೆ ಎಲ್ಲಿಂದಲೋ ಒಂದಿಷ್ಟು ಹುಲ್ಲು, ನಾರು ತಂದು ಹಾಕಿಕೊಳ್ಳುತ್ತದೆ. ನಿಧಾನಕ್ಕೆ ಗೂಡು ನಿರ್ಮಾಣಗೊಳ್ಳಲಾರಂಭಿಸುತ್ತದೆ.

ಗೀಜಗಕ್ಕೆ “ಇಂಜಿನೀಯರ್ ಹಕ್ಕಿ” ಎಂದೂ ಹೆಸರಿದೆಯಂತೆ. ನಿಜಕ್ಕೂ ಒಂದೊಂದು ಹುಲ್ಲು ಎಳಸನ್ನೂ ಸೂಕ್ಷ್ಮವಾಗಿ ಹೆಣೆಯುವ ಅದರ ಕಲೆಗಾರಿಕೆಗೆ ಗೀಜಗವೇ ಸಾಟಿ. ಚಾಪೆ ಹೆಣೆದಂತೆ ಒತ್ತೊತ್ತಾಗಿ ಪದರಗಳಮ್ನ ಹೆಣೆದು ಗೋಡೆಗಳನ್ನು ಸೃಷ್ಟಿಸಿ ಗಿಡಕ್ಕೆ ತೂಗುಬಿದ್ದಂತೆ ಗೂಡು ತಯಾರಾಗುತ್ತದೆ. ಗೂಡಿನ ಕೆಳಭಾಗದಲ್ಲಿ ಒಳಹೋಗಲೆಂದು ಪುಟ್ಟ ಪ್ರವೇಶದ್ವಾರ. ಉದ್ದಕ್ಕೆ ಕೊಳವೆಯಾಕಾರಕ್ಕೆ ಮೂಡಿದ ಆ ಪ್ರವೇಶದ್ವಾರದಿಂದ ಗೂಡಿನೊಳಗೆ ಒಂದೂ ಗುಟ್ಟು ಹೊರಬರುವಂತಿಲ್ಲ! ಗೂಡು ಕಟ್ಟಿದ ಮಾರನೇ ದಿನವೆಲ್ಲಾ ಗೀಜಗ ತನ್ನ ಕೊಕ್ಕಿನಿಂದ ಎಲ್ಲಿಂದಲೋ ಹಸಿಮಣ್ಣು ತಂದು ಗೂಡಿನೊಳಗೆ ಹೋಗುತ್ತಿತ್ತು. ಮಣ್ಣು ಏಕಿರಬಹುದು? ಎಷ್ಟು ಯೋಚಿಸಿದರೂ ಹೊಳೆಯಲಿಲ್ಲ. ಮುಸ್ಸಂಜೆ ಹೊತ್ತಿನಲ್ಲಿ ಒಂದೆರಡು ಮಿಂಚು ಹುಳುಗಳನ್ನು ಕೊಕ್ಕಿನಲ್ಲಿ ಕಚ್ಚಿಕೊಂಡು ಗೀಜಗ ಗೂಡು ಹೊಕ್ಕಿದ್ದು ಕಂಡಿತು. ಇದೂ ಯಾತಕ್ಕೆಂದು ತಿಳಿಯಲಿಲ್ಲ. ಅದರ ಆಹಾರವಿರಬಹುದೇನೋ ಎಂದುಕೊಂಡರೂ, ಅದರ ಆಹಾರವಾಗಿದ್ದರೆ ಸಿಕ್ಕಲ್ಲೇ ತಿಂದು
ಮುಗಿಸಿಬಿಡುತ್ತಿತ್ತು. ಮಾನವರಂತೆ ಮನೆಗೆ ತಂದು ಪರಿಷ್ಕರಿಸಿ ತಿನ್ನಬೇಕೆಂದೇನಿಲ್ಲವಲ್ಲಾ ಎಂದೂ ಅನ್ನಿಸಿತು.

ಮಾರನೆಯ ದಿನ ಬೆಳಗಾಗುವುದರಲ್ಲಿ ಒಂದಿದ್ದ ಗೀಜಗ ಎರಡಾಗಿವೆ. ಇನ್ನೊಂದು ಗೀಜಗ ಹೆಣ್ಣಿರಬಹುದೆಂದು ಊಹಿಸಿದೆ. ಸ್ವಲ್ಪದಿನಗಳವರೆಗೂ ಹೆಣ್ಣು ಗೀಜಗ ಗೂಡಿನಿಂದ ಹೊರಗೇ ಬರಲಿಲ್ಲ. ಗಂಡು ಗೀಜಗವೇ ಹೆಣ್ಣಿಗೂ ಆಹಾರ ತಂದುಕೊಡುತ್ತಿತ್ತೇನೋ?  ಬಹುಶಃ ಹೆಣ್ಣು ಗೀಜಗ ಮೊಟ್ಟೆ ಇಟ್ಟಿರಬಹುದೇ? ಊಹೆ ನಿಜವಾಗಿತ್ತು. ಒಂದು ಬೆಳಗ್ಗೆ ಗೂಡಿನಿಂದ ಮರಿ ಗೀಜಗಗಳ ಕಿಚಿಪಿಚಿ ಕೇಳಲಾರಂಭಿಸಿತ್ತು. ಗಂಡು ಹೆಣ್ಣು ಗೀಜಗಗಳೆರಡು ಎಲ್ಲಿಗೆಲ್ಲಿಗೋ ಹಾರಿ ಹೋಗಿ ಆಹಾರ ತಂದು ಮರಿ ಗೀಜಗಗಳಿಗೆ ತುತ್ತುಣಿಸುವ ದೃಶ್ಯ ಮನೋಹರವಾಗಿತ್ತು. ತಿಂದಷ್ಟು ಆಹಾರಕ್ಕಾಗಿ ಅರಚುವ ಅವುಗಳ ಹೊಟ್ಟೆ ಬಾಕತನ ಆಶ್ಚರ್ಯ ತರಿಸುತ್ತಿತ್ತು.

ಕೆಲ ದಿನಗಳ ನಂತರ, ಸಂಸಾರ ಸಮೇತ ಗೀಜಗ ಅದೆಲ್ಲಿಗೆ ಹಾರಿ ಹೋಯ್ತೋ! ಮತ್ತೆ ಹಿಂದಿರುಗಬಹುದೆಂದು ಕೆಲ ದಿನ ಕಾಯ್ದು ಕೊನೆಗೊಮ್ಮೆ ಗೀಜಗನ ಗೂಡಿನ ಒಳಗನ್ನು ನೋಡುವ ಕುತೂಹಲದಿಂದ ಗೂಡು ಕಿತ್ತು ತಂದು ಒಳಗೆಲ್ಲಾ ಪರೀಕ್ಷಿಸಿದರೆ ಗೂಡಿನ ಒಳಭಾಗದಲ್ಲಿ ಮೆತ್ತಿದ್ದ ಹಸಿಮಣ್ಣು ಒಣಗಿ ನಿಂತಿದೆ. ಜೊತೆಗೆ ಆ ಮಣ್ಣಿನ ಮೇಲೆ ಮೆತ್ತಿಕೊಂಡು ಸತ್ತ ಮಿಂಚಿನ ಹುಳುಗಳು! ಅಬ್ಬಾ ಗೀಜಗನ ಜಾಣ್ಮೆಯೇ! ತನ್ನ ಮನೆಗೆ ಬೆಳಕು ಮಾಡಿಕೊಳ್ಳಲು ದಿನವೂ ಒಂದೊಂದು ಜೀವಂತ ಮಿಂಚು ಹುಳ ತಂದು ಅಂಟಿಸಿ ಅದು ಸತ್ತರೆ ಇನ್ನೊಂದು ಅಂಟಿಸಿಕೊಳ್ಳುವ ಈ ಜಾಣ್ಮೆ ಗೀಜಗಕ್ಕೆ ಯಾರು ಕಲಿಸಿದರು? ಅಪಾರ ಜೀವರಾಶಿಯ ಆಗರವಾಗಿರುವ ಈ ಸೃಷ್ಟಿಯಲ್ಲಿ ಯಾವ ಜೀವಿಗೆ ಯಾವ ಜಾಣ್ಮೆಯಿದೆಯೋ ತಿಳಿದುಕೊಳ್ಳುವ ಕುತೂಹಲ, ವ್ಯವಧಾನ, ಸಮಯ ನಮಗಿರಬೇಕಲ್ಲವೇ ಸಖೀ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...