Home / ಲೇಖನ / ಇತರೆ / ಸೃಷ್ಠಿಗೆ ಗಡಿಗಳಿವೆಯೇ ?

ಸೃಷ್ಠಿಗೆ ಗಡಿಗಳಿವೆಯೇ ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಆಗಿನ್ನೂ ಬೆಳಗಿನ ಚುಮಚುಮು ಬೆಳಕು ಪಸರಿಸುತ್ತಿದೆ. ಕೊರೆವ ಚಳಿಯಲ್ಲಿ ರಾತ್ರಿಯಿಡೀ ಆ ಹಿಮಪರ್ವತದ ಮೇಲೆ ಗಡಿ ಕಾಯುತ್ತಾ ಇವನು ಬೆಂಡಾಗಿದ್ದಾನೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಇವನ  ಪಾಳಿ ಮುಗಿಯಲಿದೆ. ಆಮೇಲೆ ಚೆನ್ನಾಗಿ ನಿದ್ದೆ ಮಾಡಬಹುದು ಎಂದುಕೊಂಡೊಡನೆ ಆಕಳಿಕೆ ಬಂತು. ಒಂದು ಕ್ಷಣ ಕಣ್ಣನ್ನು ಮೆಲ್ಲಗೆ ಮುಚ್ಚಿದ….ಅಷ್ಟರಲ್ಲೇ ಹತ್ತಿರದಲ್ಲೇ ಎಲ್ಲೋ ಶಬ್ದ. ತಕ್ಷಣ ಇವನು ಬೆಚ್ಚಿ ಕಣ್ತೆರೆದ. ಕೈಲಿದ್ದ ರೈಫಲ್ ತನ್ನಂತೆ ತಾನೇ ಸಿದ್ಧವಾಯ್ತು! ಎಚ್ಚರದ ಕಣ್ಣಿನಿಂದ ಸುತ್ತಮುತ್ತ ಗಮನಿಸಲಾರಂಭಿಸಿದ. ಮೆಲ್ಲಗೆ ತೆವಳುತ್ತಲೇ ಸ್ವಲ್ಪ ದೂರ ಹೋಗಿ ಬಂದ. ಮತ್ತೆ ಪಟ ಪಟ ಶಬ್ಧ, ಈಗ ಮತ್ತೂ ಹತ್ತಿರದಿಂದ ಕೇಳಿದಾಗ ಮತ್ತಷ್ಟು ಕಿವಿನಿಮಿರಿಸಿ ಕುಳಿತು ರೈಫಲನ್ನು ಶಬ್ದದೆಡೆಗೆ ಹೊರಳಿಸಿ ಗುರಿಯಿಟ್ಟು ಕಾದ.

ಕೆಲಹೊತ್ತು ನಿಶ್ಶಬ್ದ. ಇದ್ದಕ್ಕಿದ್ದಂತೆ ಶತ್ರು ದೇಶದ ಭೂಮಿಯೆಡೆಯಿಂದ ಭರ್ರನೆ ಹಾರಿ ಬಂದ ಹಕ್ಕಿ ನಮ್ಮ ದೇಶದ ಮೇಲೆ ಕುಳಿತು ಪಟಪಟನೆ ರೆಕ್ಕೆ ಬಡಿಯಿತು! ಇವನು ಕ್ಷಣಕಾಲ ಸ್ತಂಭೀಭೂತನಾಗಿ ಕುಳಿತು ಬಿಟ್ಟ ಆ ಹಕ್ಕಿ ಶತ್ರು ದೇಶದ್ದೋ ? ತನ್ನ ದೇಶದ್ದೋ ? ಅದನ್ನು ಕೊಲ್ಲಲೋ ? ಬೇಡವೋ ? ಯೋಚಿಸಲಾರಂಭಿಸಿದ.

ತನ್ನ ಯೋಚನೆಗೆ ಅವನಿಗೆ ನಗು ಬಂತು. ಪಕ್ಕದಲ್ಲೇ ಎಲ್ಲೋ ಅಸ್ಪಷ್ಟವಾಗಿ ನದಿ ಹರಿಯುವ ಶಬ್ಧ ತನ್ನ ದೇಶದ ನದಿ. ಶತ್ರು ದೇಶಕ್ಕೆ ಹರಿಯುವ ಶಬ್ಧ. ತನ್ನ ದೇಶದ ನದಿ ಶತ್ರು ದೇಶಕ್ಕೆ ಹರಿದು ಹೋಗುತ್ತಿದೆ. ಶತ್ರು ದೇಶದಿಂದ ಬೀಸಿದ ಗಾಳಿ ತನ್ನ ದೇಶವನ್ನು ಆವರಿಸುತ್ತಿದೆ. ಇತ್ತಲಿನ ಪರ್ವತದ ಮುಖ ತನ್ನ ದೇಶದ್ದು. ಅತ್ತಲಿನ ಪರ್ವತದ ಮುಖ ಶತ್ರು ದೇಶದ್ದು. ಪರ್ವತ ಒಂದೇ ಆದರೂ ಹೆಸರು ಮಾತ್ರ ಎರಡು.

ಶತ್ರು ದೇಶದ ಈ ನದಿ, ಗಾಳಿ, ಪರ್ವತಕ್ಕೆ ಈಗಷ್ಟೆ ಶತ್ರುದೇಶದಿಂದ ಹಾರಿ ಬಂದ ಆ ಹಕ್ಕಿಗೆ ಹೇಗೆ ಗುಂಡಿಕ್ಕಿ ಕೊಲ್ಲಲಿ ? ಸೃಷ್ಠಿ ಎಂದಾದರೂ ಗಡಿಗಳನ್ನು ಹಾಕಿಕೊಂಡಿದೆಯೇ ? ಮಾನವನಿಗಷ್ಟೆ ಈ ಗಡಿ ! ನದಿ, ಗಾಳಿ, ಮಳೆ, ಭೂಮಿ, ಪ್ರಾಣಿ ಪಕ್ಷಿಗಳೂ ಮಾನವನಂತೆಯೇ ಗಡಿಗಳನ್ನು ಹಾಕಿಕೊಂಡು ತಮ್ಮ ತಮ್ಮಲ್ಲೇ ವಿರೋಧಿ ಬಣಗಳನ್ನು ಸೃಷ್ಟಿಸಿಕೊಂಡು ಬಿಟ್ಟರೆ… ಆಗೇನು ಮಾಡುವುದು ? ಈ ಆಲೋಚನೆ ಬಂದೊಡನೆ ಆ ಕೊರೆವ ಚಳಿಯಲ್ಲೂ ಅವನು  ಬೆವೆತು ಹೋದ. ಮನದಲ್ಲೇ ದೇವರಿಗೆ ಕೃತಜ್ಞತೆ ಸಲ್ಲಿಸುತ್ತಾ ‘ಹೇ ದೇವ, ಮಾನವನ ಸ್ವಾರ್ಥದಿಂದಷ್ಟೇ ಗಡಿಗಳ ಸೃಷ್ಟಿಯಾಯ್ತು. ಸೃಷ್ಟಿಗೂ ಶತ್ರು – ಮಿತ್ರನೆಂಬ ಗಡಿಯನ್ನು ನೀ ಎಳಿಯಲಿಲ್ಲವಲ್ಲ’ ಎನ್ನುತ್ತಾ ನಿಟ್ಟುಸಿರಿಟ್ಟ ಏಕೋ ಕೈಯಲ್ಲಿದ್ದ ರೈಫಲ್ ಎತ್ತಲಾಗದಷ್ಟು ಭಾರವಾಗುತ್ತಿದೆ ಎನಿಸಿ ಭೂಮಿಗೆ ಕುಸಿದು ಕುಳಿತ!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...