Home / ಲೇಖನ / ಇತರೆ / ಸೃಷ್ಠಿಗೆ ಗಡಿಗಳಿವೆಯೇ ?

ಸೃಷ್ಠಿಗೆ ಗಡಿಗಳಿವೆಯೇ ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಆಗಿನ್ನೂ ಬೆಳಗಿನ ಚುಮಚುಮು ಬೆಳಕು ಪಸರಿಸುತ್ತಿದೆ. ಕೊರೆವ ಚಳಿಯಲ್ಲಿ ರಾತ್ರಿಯಿಡೀ ಆ ಹಿಮಪರ್ವತದ ಮೇಲೆ ಗಡಿ ಕಾಯುತ್ತಾ ಇವನು ಬೆಂಡಾಗಿದ್ದಾನೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಇವನ  ಪಾಳಿ ಮುಗಿಯಲಿದೆ. ಆಮೇಲೆ ಚೆನ್ನಾಗಿ ನಿದ್ದೆ ಮಾಡಬಹುದು ಎಂದುಕೊಂಡೊಡನೆ ಆಕಳಿಕೆ ಬಂತು. ಒಂದು ಕ್ಷಣ ಕಣ್ಣನ್ನು ಮೆಲ್ಲಗೆ ಮುಚ್ಚಿದ….ಅಷ್ಟರಲ್ಲೇ ಹತ್ತಿರದಲ್ಲೇ ಎಲ್ಲೋ ಶಬ್ದ. ತಕ್ಷಣ ಇವನು ಬೆಚ್ಚಿ ಕಣ್ತೆರೆದ. ಕೈಲಿದ್ದ ರೈಫಲ್ ತನ್ನಂತೆ ತಾನೇ ಸಿದ್ಧವಾಯ್ತು! ಎಚ್ಚರದ ಕಣ್ಣಿನಿಂದ ಸುತ್ತಮುತ್ತ ಗಮನಿಸಲಾರಂಭಿಸಿದ. ಮೆಲ್ಲಗೆ ತೆವಳುತ್ತಲೇ ಸ್ವಲ್ಪ ದೂರ ಹೋಗಿ ಬಂದ. ಮತ್ತೆ ಪಟ ಪಟ ಶಬ್ಧ, ಈಗ ಮತ್ತೂ ಹತ್ತಿರದಿಂದ ಕೇಳಿದಾಗ ಮತ್ತಷ್ಟು ಕಿವಿನಿಮಿರಿಸಿ ಕುಳಿತು ರೈಫಲನ್ನು ಶಬ್ದದೆಡೆಗೆ ಹೊರಳಿಸಿ ಗುರಿಯಿಟ್ಟು ಕಾದ.

ಕೆಲಹೊತ್ತು ನಿಶ್ಶಬ್ದ. ಇದ್ದಕ್ಕಿದ್ದಂತೆ ಶತ್ರು ದೇಶದ ಭೂಮಿಯೆಡೆಯಿಂದ ಭರ್ರನೆ ಹಾರಿ ಬಂದ ಹಕ್ಕಿ ನಮ್ಮ ದೇಶದ ಮೇಲೆ ಕುಳಿತು ಪಟಪಟನೆ ರೆಕ್ಕೆ ಬಡಿಯಿತು! ಇವನು ಕ್ಷಣಕಾಲ ಸ್ತಂಭೀಭೂತನಾಗಿ ಕುಳಿತು ಬಿಟ್ಟ ಆ ಹಕ್ಕಿ ಶತ್ರು ದೇಶದ್ದೋ ? ತನ್ನ ದೇಶದ್ದೋ ? ಅದನ್ನು ಕೊಲ್ಲಲೋ ? ಬೇಡವೋ ? ಯೋಚಿಸಲಾರಂಭಿಸಿದ.

ತನ್ನ ಯೋಚನೆಗೆ ಅವನಿಗೆ ನಗು ಬಂತು. ಪಕ್ಕದಲ್ಲೇ ಎಲ್ಲೋ ಅಸ್ಪಷ್ಟವಾಗಿ ನದಿ ಹರಿಯುವ ಶಬ್ಧ ತನ್ನ ದೇಶದ ನದಿ. ಶತ್ರು ದೇಶಕ್ಕೆ ಹರಿಯುವ ಶಬ್ಧ. ತನ್ನ ದೇಶದ ನದಿ ಶತ್ರು ದೇಶಕ್ಕೆ ಹರಿದು ಹೋಗುತ್ತಿದೆ. ಶತ್ರು ದೇಶದಿಂದ ಬೀಸಿದ ಗಾಳಿ ತನ್ನ ದೇಶವನ್ನು ಆವರಿಸುತ್ತಿದೆ. ಇತ್ತಲಿನ ಪರ್ವತದ ಮುಖ ತನ್ನ ದೇಶದ್ದು. ಅತ್ತಲಿನ ಪರ್ವತದ ಮುಖ ಶತ್ರು ದೇಶದ್ದು. ಪರ್ವತ ಒಂದೇ ಆದರೂ ಹೆಸರು ಮಾತ್ರ ಎರಡು.

ಶತ್ರು ದೇಶದ ಈ ನದಿ, ಗಾಳಿ, ಪರ್ವತಕ್ಕೆ ಈಗಷ್ಟೆ ಶತ್ರುದೇಶದಿಂದ ಹಾರಿ ಬಂದ ಆ ಹಕ್ಕಿಗೆ ಹೇಗೆ ಗುಂಡಿಕ್ಕಿ ಕೊಲ್ಲಲಿ ? ಸೃಷ್ಠಿ ಎಂದಾದರೂ ಗಡಿಗಳನ್ನು ಹಾಕಿಕೊಂಡಿದೆಯೇ ? ಮಾನವನಿಗಷ್ಟೆ ಈ ಗಡಿ ! ನದಿ, ಗಾಳಿ, ಮಳೆ, ಭೂಮಿ, ಪ್ರಾಣಿ ಪಕ್ಷಿಗಳೂ ಮಾನವನಂತೆಯೇ ಗಡಿಗಳನ್ನು ಹಾಕಿಕೊಂಡು ತಮ್ಮ ತಮ್ಮಲ್ಲೇ ವಿರೋಧಿ ಬಣಗಳನ್ನು ಸೃಷ್ಟಿಸಿಕೊಂಡು ಬಿಟ್ಟರೆ… ಆಗೇನು ಮಾಡುವುದು ? ಈ ಆಲೋಚನೆ ಬಂದೊಡನೆ ಆ ಕೊರೆವ ಚಳಿಯಲ್ಲೂ ಅವನು  ಬೆವೆತು ಹೋದ. ಮನದಲ್ಲೇ ದೇವರಿಗೆ ಕೃತಜ್ಞತೆ ಸಲ್ಲಿಸುತ್ತಾ ‘ಹೇ ದೇವ, ಮಾನವನ ಸ್ವಾರ್ಥದಿಂದಷ್ಟೇ ಗಡಿಗಳ ಸೃಷ್ಟಿಯಾಯ್ತು. ಸೃಷ್ಟಿಗೂ ಶತ್ರು – ಮಿತ್ರನೆಂಬ ಗಡಿಯನ್ನು ನೀ ಎಳಿಯಲಿಲ್ಲವಲ್ಲ’ ಎನ್ನುತ್ತಾ ನಿಟ್ಟುಸಿರಿಟ್ಟ ಏಕೋ ಕೈಯಲ್ಲಿದ್ದ ರೈಫಲ್ ಎತ್ತಲಾಗದಷ್ಟು ಭಾರವಾಗುತ್ತಿದೆ ಎನಿಸಿ ಭೂಮಿಗೆ ಕುಸಿದು ಕುಳಿತ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...