Home / ಲೇಖನ / ಇತರೆ / ಆ ಘಳಿಗೆಗಾಗಿ ಎಷ್ಟೆಲ್ಲಾ….?

ಆ ಘಳಿಗೆಗಾಗಿ ಎಷ್ಟೆಲ್ಲಾ….?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಆ ಮನೆಯಲ್ಲಿ ನಿತ್ಯದಂತೆ ಆ ರಾತ್ರಿಯೂ ತನ್ನ ಕರಾಳ ಹಸ್ತ ಚಾಚಿದೆ. ಕಂಠಪೂರ್ತಿ ಕುಡಿದು ಬಂದ ಅವನು, ತನ್ನ ಪತ್ನಿ ದಿನವಿಡೀ ಬೆವರು ಹರಿಸಿ ದುಡಿವ ಹಣವನ್ನು ಕೊಡುವಂತೆ ಪೀಡಿಸುತ್ತಾ ಹೊಡೆಯುತ್ತಿದ್ದಾನೆ. ಅವಳು ನಿರಾಕರಿಸಿದಷ್ಟೂ ಇವನ ರೋಷ ಉಕ್ಕುತ್ತದೆ. ಮುಖ ಮೂತಿ ನೋಡದೇ ಅವಳನ್ನು ಚಚ್ಚುತ್ತಾನೆ. ಕೊನೆಗೊಮ್ಮೆ ಅವಳು ಸೋತು ಒಂದಿಷ್ಟು ಪುಡಿಗಾಸು ಅವನಿಗೆ ನೀಡುತ್ತಾಳೆ. ಅವನು ಮತ್ತೂ ಹಣ ಕೊಡುವಂತೆ ದಬಾಯಿಸುತ್ತಾನೆ. ಮತ್ತೆ….  ಅದೇ ಅದೇ ಘಟನೆಗಳು, ಮತ್ತೆ ಮತ್ತೆ ಅದೆಷ್ಟು ವರ್ಷಗಳಿಂದ ಪುನರಾವರ್ತನೆಯೋ ಲೆಕ್ಕವಿಟ್ಟವರಾರು ? ಆದರೆ ಆ ದಿನ ಮಾತ್ರ ಅವಳ ಹದಿನಾರು ವರ್ಷದ ಮಗಳು ಒಂದು ಪ್ರಶ್ನೆ ಕೇಳುತ್ತಾಳೆ. ಆ ಪ್ರಶ್ನೆ ತಾಯಿಯ ಬದುಕಿನ ಇಷ್ಟು ದಿನದ ಗೋಳಿಗೆ ಇತಿಶ್ರೀ ಹಾಡುತ್ತದೆ. ಬುದ್ಧಿ ತಿಳಿದಂದಿನಿಂದ
ಆ ಹುಡುಗಿ ದಿನ ರಾತ್ರಿ ಇದೇ ದೃಶ್ಯಗಳನ್ನು ತಪ್ಪದೇ ನೋಡುತ್ತಾ ಬಂದಿದ್ದಾಳೆ. ತಾಯಿಯನ್ನು ಅಪ್ಪನಿಂದ ಬಿಡಿಸಿಕೊಳ್ಳಲು ಹೋಗಿ ತಾನು ಹೊಡೆತ ತಿಂದಿದ್ದಾಳೆ, ಅತ್ತಿದ್ದಾಳೆ, ನೋವನುಭವಿಸಿದ್ದಾಳೆ. ಮತ್ತೆ ಎಲ್ಲಾ ಮರೆತು ನಿದ್ದೆ ಹೋಗಿದ್ದಾಳೆ.

ಆದರೆ ಅಂದು ಮಾತ್ರ ಅವಳಿಗೆ ಜ್ಞಾನೋದಯವಾದಂತಿದೆ. ಅಮ್ಮನನ್ನು ಪ್ರಶ್ನಿಸುತ್ತಾಳೆ. ಅಮ್ಮ ನಮ್ಮ ಸಂಸಾರ ಸಾಗ್ತಾ ಇರೋದೇ ನಿನ್ನ ದುಡಿಮೆಯಿಂದ, ನಿನ್ನ ಪ್ರೀತಿಯಿಂದ, ಬುದ್ಧಿವಂತಿಕೆಯಿಂದ. ಅಪ್ಪ ಈ ಸಂಸಾರಕ್ಕೆ ಇದ್ದರೂ ಒಂದೇ ಇಲ್ಲದಿದ್ದರೂ ಒಂದೇ. ಅಂದ ಮೇಲೆ ನೀನ್ಯಾಕೆ ದಿನಾ ಈ ನರಕವನ್ನು, ನೋವನ್ನು ಅನುಭವಿಸ್ಬೇಕು? ಅವನನ್ನು ಬಿಟ್ಟು ಬಿಡೋದಕ್ಕಾಗಲ್ವಾ ?

ಸಖಿ, ಈ ಪ್ರಶ್ನೆಗೆ ಅಮ್ಮ ಅಯ್ಯೋ ಅವನು ನನ್ನ ಗಂಡ. ಅವನು ಹೊಡೀಲಿ, ಬಡೀಲಿ ಸಾಯೋವರೆಗೂ ಅವನೊಂದಿಗೇ ಬದುಕಬೇಕಿರುವುದು ನನ್ನ ಧರ್ಮ-ಕರ್ಮ. ಗಂಡನ್ನ ಬಿಟ್ರೆ ಸಮಾಜ ಏನನ್ನುತ್ತೆ ? ಜನ ಏನನ್ತಾರೆ ?…ಇತ್ಯಾದಿ ಹೇಳ್ತಾಳೆ ಎಂದು ನಿನ್ನ ಊಹೆಯಾಗಿದ್ದರೆ, ಅದು ತಪ್ಪು. ಅಮ್ಮ ಹೇಳ್ತಾಳೆ, ಮಗಳೇ ಇವತ್ತು ನಿಜಕ್ಕೂ ನನಗೆ ಸಂತೋಷವಾಗಿದೆ. ಜನ, ಸಮಾಜ ಅನ್ನಲಿ. ನಿನಗೆ ನಿಜ ಏನು ಅನ್ನೋದು ಗೊತ್ತಿರಬೇಕು. ನಾನು ಯಾವತ್ತೋ ಈ ಗಂಡನ್ನ ಬಿಟ್ಟು ಹೋಗಬಹುದಿತ್ತು. ಆದರೆ ಆಗ ನಾನು ನಿನ್ನ ದೃಷ್ಟಿಯಲ್ಲೂ ಕೀಳಾಗಿಬಿಡ್ತಿದ್ದೆ. ಈಗ ನಿನಗೆ ಅಪ್ಪನ ಅವಶ್ಯಕತೆ ನಮಗಿಲ್ಲ ಅನ್ನೋ ತಿಳಿವಳಿಕೆ ಬಂದಿದೆ. ಅವನು ಮಾಡ್ತಾ ಇರೋದು ತಪ್ಪು, ನಾನು ಸರಿ ಅನ್ನೋ ನಂಬಿಕೆ ಬಂದಿದೆ. ಇನ್ನು ನಾನು ಯಾವುದಕ್ಕೂ ಹೆದರಬೇಕಿಲ್ಲ. ಇಂದಿಗೆ ನನಗೆ ಈ ನರಕದಿಂದಲೂ ಮುಕ್ತಿ ಸಿಕ್ಕಿದೆ. ನಾಳೇನೇ ಇಲ್ಲಿಂದ ದೂರ ಹೊರಟು ಹೋಗೋಣ ಎನ್ನುತ್ತಾ ಬುಡ್ಡಿಗೆ ಇನ್ನಷ್ಟು ಎಣ್ಣೆ ಸುರಿದು ಬೆಳಕು ಹೆಚ್ಚಿಸುತ್ತಾಳೆ.

ರಾತ್ರಿಯಿಡೀ ತಾಯಿ ಮಗಳು ಸೇರಿ ತಮ್ಮ ಸಾಮಾನು ಗಂಟು ಕಟ್ಟುತ್ತಾರೆ. ಆ ದಿನ ಸೂರ್ಯನಿಗೂ ಅವಸರ. ಬೇಗನೇ ಉದಯಿಸಿಬಿಟ್ಟಿದ್ದಾನೆ. ಇವರು ಗಂಟು ಮೂಟೆ
ಹಿಡಿದು ಮುಂದೆ ನಡೆದಂತೆಲ್ಲಾ ಸೂರ್ಯ ಅವರಿಗೆ ದಾರಿ ತೋರುತ್ತಾ ಮುನ್ನಡೆಯುತ್ತಾನೆ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...