Home / ಲೇಖನ / ಇತರೆ / ಬದುಕೆಂದರೆ ಇಷ್ಟೆಯೇ?

ಬದುಕೆಂದರೆ ಇಷ್ಟೆಯೇ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,

ಅವನು ಇಷ್ಟು ದಿನ ಬದುಕಿದ್ದೇ ಸುಳ್ಳೆಂಬಂತೆ ಸತ್ತು ಮಲಗಿದ್ದಾನೆ. ಕೊನೆಯದಾಗಿ ಅವನ ನಿರ್ಜೀವ ದೇಹವನ್ನು ನೋಡಲೆಂದೇ ಈ ಅವನ ಗೆಳೆಯ ಬಂದಿದ್ದಾನೆ. ಎರಡು ದೇಹ ಒಂದು ಜೀವವೆಂಬಂತಿದ್ದ ಈ ಗೆಳೆಯರಲ್ಲಿ ಒಬ್ಬ ಪಿಯುಸಿ ಪರೀಕ್ಷೆಯಲ್ಲಿ ಫೇಲಾಗಿದ್ದೇ ನೆವವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೋಡಲು ಬಂದವನೂ ನಪಾಸಾಗಿದ್ದಾನೆ. ಸತ್ತ ಗೆಳೆಯನನ್ನು ನೋಡುತ್ತಾ ಇವನು ಯೋಚಿಸುತ್ತಿದ್ದಾನೆ. ಈಗ ಬದುಕಿನಲ್ಲಿ ಎಲ್ಲಾ ಮುಗಿದುಹೋಯಿತೆಂದು ಆತ್ಮಹತ್ಯೆ ಮಾಡಿಕೊಳ್ಳಬೇಕೇ?

ಒಮ್ಮೆ ಬದುಕಿನಲ್ಲಿ ಸೋತರೆ ಅದೇ ಕಟ್ಟಕಡೆಯ ಸೋಲೆ? ಮುಂದೆ ಗೆಲುವೇ ಇಲ್ಲವೇ ? ಅಥವಾ ಇದನ್ನು ಹೊರತು ಪಡಿಸಿ ಬೇರೆ ಬದುಕೇ ಇಲ್ಲವೇ ? ಬದುಕೆಂದರೆ ಇಷ್ಟೆಯೇ? ಒಂದು ಯಕಶ್ಚಿತ್ ಪರೀಕ್ಷೆಯಲ್ಲಿ ಫೇಲಾದೊಡನೆ ಬದುಕೇ ಮುಗಿದಂತೆಯೇ? ಬದುಕಿನಲ್ಲಿ ಒಮ್ಮೆ ಒಂದು ಬಾಗಿಲು ಮುಚ್ಚಿತೆಂದಾದರೆ ಅದೆಂದೂ ತೆರೆಯುವುದೇ ಇಲ್ಲವೇ ? ಅಥವಾ ಬದುಕಿಗೆ ಅದೊಂದೇ ಬಾಗಿಲೆ ? ಕಣ್ಣು ತೆರೆದು ನೋಡಿದರೆ ಸುತ್ತಲೂ ಅದೆಷ್ಟು ಅವಕಾಶಗಳಿವೆ. ವಿಭಿನ್ನ ಸಾಧ್ಯತೆಗಳಿವೆ. ಯಾಕಿಂಥಾ ಮೌಢ್ಯ ನನ್ನ ಗೆಳೆಯನನ್ನು ಆವರಿಸಿತು?

ಕಳೆದ ತಿಂಗಳಷ್ಟೇ ಮನೆಯವರು ಬೈಕ್ ಕೊಡಿಸಲಿಲ್ಲವೆಂದು ಸಹಪಾಠಿಯೊಬ್ಬ ವಿಷ ಕುಡಿದು ಸತ್ತದ್ದು ನೆನಪಾಯ್ತು. ನೀನು ಬದುಕಿದ್ದರೆ ಇಂದಲ್ಲ ನಾಳೆ ಬೈಕ್ ಕೊಳ್ಳಬಹುದಿತ್ತು. ನಿಜ ಬದುಕು ಎಷ್ಟೊಂದು ದೊಡ್ಡದಿದೆ. ಸಾಧಿಸುವ ಛಲವಿದ್ದರೆ ಇಂದಲ್ಲ ನಾಳೆ ಗುರಿ ಸೇರಬಹುದು. ಅದು ಬಿಟ್ಟು ಸಣ್ಣ ಪುಟ್ಟ ಸೋಲಿಗೆ ಹೆದರಿ ಹೇಡಿಯಂತೆ ಸತ್ತರೇನು ಬಂತು?

ಕರುಳು ಬಿರಿಯುವಂತೆ ರೋಧಿಸುತ್ತಿರುವ ಗೆಳೆಯನ ತಂದೆ, ತಾಯಿ, ಅಕ್ಕತಮ್ಮ, ಬಂಧು ಬಳಗದವರ ಮಧ್ಯೆ ಇರುವ ಗೆಳೆಯನ ಕಳೇಬರಹವನ್ನೊಮ್ಮೆ ಇವನು ಮರುಕ, ತಿರಸ್ಕಾರದಿಂದ ನೋಡಿದ. ಗೆಳೆಯ ನಿನಗಾಗಿ ಎಷ್ಟೊಂದು ಪ್ರೀತಿ ತುಂಬಿಕೊಂಡಿದ್ದ ಜೀವಗಳನ್ನು ಘಾಸಿಗೊಳಿಸಿದ್ದೀಯೇ, ನೀನು ಘೋರ ತಪ್ಪು ಮಾಡಿಬಿಟ್ಟೆಯೋ. ಬದುಕೆಂದರೆ ಇಷ್ಟೇ ಎಂದು ಅದಕ್ಕೊಂದು ಪೂರ್ಣ ವಿರಾಮ ಹಾಕಿ ಬಿಟ್ಟೆಯಲ್ಲಾ. ಅದಕ್ಕೆ ಎಷ್ಟೊಂದು ಮಗ್ಗುಲುಗಳಿತ್ತು. ನೀನೇಕೆ ಕಣ್ತೆರೆದು ನೋಡಲಿಲ್ಲ? ಇಷ್ಟಕ್ಕೆ ಅಮೂಲ್ಯ ಬದುಕನ್ನು ವಿವೇಚನೆ ಇಲ್ಲದ ಹುಂಬನಂತೆ ಕೊನೆಗೊಳಿಸಿಬಿಟ್ಟೆಯಲ್ಲಾ. ಬದುಕು ನಿನ್ನನ್ನೆಂದೂ ಕ್ಷಮಿಸುವುದಿಲ್ಲ. ನಿನ್ನನ್ನು ನನ್ನ ಗೆಳೆಯನೆಂದು ಹೇಳಿಕೊಳ್ಳಲೇ ನನಗೆ ನಾಚಿಕೆಯಾಗುತ್ತಿದೆ. ಬದುಕಿನಲ್ಲಿ ಈ ಕ್ಷಣಕ್ಕೆ ಸೋತಿದ್ದೇನೆ. ಗೆಲುವಿನ ಮೆಟ್ಟಿಲಾಗಿಸಿಕೊಂಡು ಸಾಧಿಸಿ ತೋರಿಸುತ್ತೇನೆ. ನಿನ್ನಂಥಹ ಹೇಡಿಗಳಿಗೆ ಇದೋ ನನ್ನ ಧಿಕ್ಕಾರ ಎಂದು ಮನದಲ್ಲೇ ಉದ್ಗರಿಸಿಕೊಂಡವನೇ ಸರಸರನೆ ಹೊರ ನಡೆದುಬಿಟ್ಟ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...