Home / ಲೇಖನ / ಇತರೆ / ಬದುಕೆಂದರೆ ಇಷ್ಟೆಯೇ?

ಬದುಕೆಂದರೆ ಇಷ್ಟೆಯೇ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,

ಅವನು ಇಷ್ಟು ದಿನ ಬದುಕಿದ್ದೇ ಸುಳ್ಳೆಂಬಂತೆ ಸತ್ತು ಮಲಗಿದ್ದಾನೆ. ಕೊನೆಯದಾಗಿ ಅವನ ನಿರ್ಜೀವ ದೇಹವನ್ನು ನೋಡಲೆಂದೇ ಈ ಅವನ ಗೆಳೆಯ ಬಂದಿದ್ದಾನೆ. ಎರಡು ದೇಹ ಒಂದು ಜೀವವೆಂಬಂತಿದ್ದ ಈ ಗೆಳೆಯರಲ್ಲಿ ಒಬ್ಬ ಪಿಯುಸಿ ಪರೀಕ್ಷೆಯಲ್ಲಿ ಫೇಲಾಗಿದ್ದೇ ನೆವವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೋಡಲು ಬಂದವನೂ ನಪಾಸಾಗಿದ್ದಾನೆ. ಸತ್ತ ಗೆಳೆಯನನ್ನು ನೋಡುತ್ತಾ ಇವನು ಯೋಚಿಸುತ್ತಿದ್ದಾನೆ. ಈಗ ಬದುಕಿನಲ್ಲಿ ಎಲ್ಲಾ ಮುಗಿದುಹೋಯಿತೆಂದು ಆತ್ಮಹತ್ಯೆ ಮಾಡಿಕೊಳ್ಳಬೇಕೇ?

ಒಮ್ಮೆ ಬದುಕಿನಲ್ಲಿ ಸೋತರೆ ಅದೇ ಕಟ್ಟಕಡೆಯ ಸೋಲೆ? ಮುಂದೆ ಗೆಲುವೇ ಇಲ್ಲವೇ ? ಅಥವಾ ಇದನ್ನು ಹೊರತು ಪಡಿಸಿ ಬೇರೆ ಬದುಕೇ ಇಲ್ಲವೇ ? ಬದುಕೆಂದರೆ ಇಷ್ಟೆಯೇ? ಒಂದು ಯಕಶ್ಚಿತ್ ಪರೀಕ್ಷೆಯಲ್ಲಿ ಫೇಲಾದೊಡನೆ ಬದುಕೇ ಮುಗಿದಂತೆಯೇ? ಬದುಕಿನಲ್ಲಿ ಒಮ್ಮೆ ಒಂದು ಬಾಗಿಲು ಮುಚ್ಚಿತೆಂದಾದರೆ ಅದೆಂದೂ ತೆರೆಯುವುದೇ ಇಲ್ಲವೇ ? ಅಥವಾ ಬದುಕಿಗೆ ಅದೊಂದೇ ಬಾಗಿಲೆ ? ಕಣ್ಣು ತೆರೆದು ನೋಡಿದರೆ ಸುತ್ತಲೂ ಅದೆಷ್ಟು ಅವಕಾಶಗಳಿವೆ. ವಿಭಿನ್ನ ಸಾಧ್ಯತೆಗಳಿವೆ. ಯಾಕಿಂಥಾ ಮೌಢ್ಯ ನನ್ನ ಗೆಳೆಯನನ್ನು ಆವರಿಸಿತು?

ಕಳೆದ ತಿಂಗಳಷ್ಟೇ ಮನೆಯವರು ಬೈಕ್ ಕೊಡಿಸಲಿಲ್ಲವೆಂದು ಸಹಪಾಠಿಯೊಬ್ಬ ವಿಷ ಕುಡಿದು ಸತ್ತದ್ದು ನೆನಪಾಯ್ತು. ನೀನು ಬದುಕಿದ್ದರೆ ಇಂದಲ್ಲ ನಾಳೆ ಬೈಕ್ ಕೊಳ್ಳಬಹುದಿತ್ತು. ನಿಜ ಬದುಕು ಎಷ್ಟೊಂದು ದೊಡ್ಡದಿದೆ. ಸಾಧಿಸುವ ಛಲವಿದ್ದರೆ ಇಂದಲ್ಲ ನಾಳೆ ಗುರಿ ಸೇರಬಹುದು. ಅದು ಬಿಟ್ಟು ಸಣ್ಣ ಪುಟ್ಟ ಸೋಲಿಗೆ ಹೆದರಿ ಹೇಡಿಯಂತೆ ಸತ್ತರೇನು ಬಂತು?

ಕರುಳು ಬಿರಿಯುವಂತೆ ರೋಧಿಸುತ್ತಿರುವ ಗೆಳೆಯನ ತಂದೆ, ತಾಯಿ, ಅಕ್ಕತಮ್ಮ, ಬಂಧು ಬಳಗದವರ ಮಧ್ಯೆ ಇರುವ ಗೆಳೆಯನ ಕಳೇಬರಹವನ್ನೊಮ್ಮೆ ಇವನು ಮರುಕ, ತಿರಸ್ಕಾರದಿಂದ ನೋಡಿದ. ಗೆಳೆಯ ನಿನಗಾಗಿ ಎಷ್ಟೊಂದು ಪ್ರೀತಿ ತುಂಬಿಕೊಂಡಿದ್ದ ಜೀವಗಳನ್ನು ಘಾಸಿಗೊಳಿಸಿದ್ದೀಯೇ, ನೀನು ಘೋರ ತಪ್ಪು ಮಾಡಿಬಿಟ್ಟೆಯೋ. ಬದುಕೆಂದರೆ ಇಷ್ಟೇ ಎಂದು ಅದಕ್ಕೊಂದು ಪೂರ್ಣ ವಿರಾಮ ಹಾಕಿ ಬಿಟ್ಟೆಯಲ್ಲಾ. ಅದಕ್ಕೆ ಎಷ್ಟೊಂದು ಮಗ್ಗುಲುಗಳಿತ್ತು. ನೀನೇಕೆ ಕಣ್ತೆರೆದು ನೋಡಲಿಲ್ಲ? ಇಷ್ಟಕ್ಕೆ ಅಮೂಲ್ಯ ಬದುಕನ್ನು ವಿವೇಚನೆ ಇಲ್ಲದ ಹುಂಬನಂತೆ ಕೊನೆಗೊಳಿಸಿಬಿಟ್ಟೆಯಲ್ಲಾ. ಬದುಕು ನಿನ್ನನ್ನೆಂದೂ ಕ್ಷಮಿಸುವುದಿಲ್ಲ. ನಿನ್ನನ್ನು ನನ್ನ ಗೆಳೆಯನೆಂದು ಹೇಳಿಕೊಳ್ಳಲೇ ನನಗೆ ನಾಚಿಕೆಯಾಗುತ್ತಿದೆ. ಬದುಕಿನಲ್ಲಿ ಈ ಕ್ಷಣಕ್ಕೆ ಸೋತಿದ್ದೇನೆ. ಗೆಲುವಿನ ಮೆಟ್ಟಿಲಾಗಿಸಿಕೊಂಡು ಸಾಧಿಸಿ ತೋರಿಸುತ್ತೇನೆ. ನಿನ್ನಂಥಹ ಹೇಡಿಗಳಿಗೆ ಇದೋ ನನ್ನ ಧಿಕ್ಕಾರ ಎಂದು ಮನದಲ್ಲೇ ಉದ್ಗರಿಸಿಕೊಂಡವನೇ ಸರಸರನೆ ಹೊರ ನಡೆದುಬಿಟ್ಟ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...